Homeಕರ್ನಾಟಕಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ- ಟಿ.ಬಿ.ಜಯಚಂದ್ರ

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದಿದ್ದರೂ ಸ್ಪರ್ಧಿ ಅಭ್ಯರ್ಥಿಗಳ ಕುರಿತು ಕ್ಷೇತ್ರದ ಮತದಾರರಲ್ಲಿ ಕುತೂಹಲ ಹೆಚ್ಚುತ್ತಲೇ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು ಬಿಜೆಪಿ ಅಭ್ಯರ್ಥಿ ಯಾರೆಂಬುದು ಅಂತಿಮಗೊಂಡಿಲ್ಲ.

ಸ್ಥಳೀಯ ಅಭ್ಯರ್ಥಿಯಾದರೆ ಸುಲಭವಾಗಿ ‘ಬುಕ್’ ಆಗಿ ಬಿಡುತ್ತಾರೆ. ‘ಮೇಲಿನ’ ಅಭ್ಯರ್ಥಿಯಾದರೆ ಒಗ್ಗಟ್ಟಿನ ಮಂತ್ರ ಜಪಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾ ಕ್ಷೇತ್ರದ ಅಚ್ಚರಿ ಅಭ್ಯರ್ಥಿಯಾಗಿದ್ದಾರೆ ಎಂಬ ಮಾತುಗಳು ಕ್ಷೇತ್ರಾದ್ಯಂತ ಈಗ ಜೋರುದನಿಯಲ್ಲಿ ಕೇಳಿಬರತೊಡಗಿವೆ.

ಹೌದು, ಇದು ಅಚ್ಚರಿಯಾದರೂ ಕ್ಷೇತ್ರದ ಜನರಲ್ಲಿ ಬಿಜೆಪಿ ಹರಿಯಬಿಟ್ಟಿರುವ ಹೆಸರು. ಬಿ.ಸುರೇಶ್ ಗೌಡ ಈಗ ಬಿಜೆಪಿ ಜಿಲ್ಲಾಧ್ಯಕ್ಷ. ಮಾಜಿ ಶಾಸಕ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ದ ಸೋಲನ್ನು ಕಂಡವರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇನ್ನೂ ಎರಡೂವರೆ ವರ್ಷ ಕಾಯಬೇಕು. ಅಲ್ಲಿವರೆಗೂ ಏನು ಮಾಡುವುದು? ಹಾಗಾಗಿ ಶಿರಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಳ್ಳುವುದು. ಆ ಮೂಲಕ ಒಂದು ಸ್ಥಾನ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಚಿಂತನೆಯಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಗೆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಯಾರೂ ಇಲ್ಲ. ಹಣವನ್ನು ಖರ್ಚು ಮಾಡುವವರು ಬೇಕು. ಅಂಥ ಕುಳಗಳು ಇಲ್ಲವೆಂಬುದು ಬಿಜೆಪಿಗೆ ಗೊತ್ತು. ಕಳೆದ ಚುನಾವಣೆಯಲ್ಲಿ ಬೇವಿನಹಳ್ಳಿ ಕೆ.ಮಂಜುನಾಥ್ ಅವರಿಗೆ ಬಿ.ಫಾರಂ ನೀಡಿದರೂ ತಾನು ನಿಲ್ಲುವುದಿಲ್ಲ ಎಂದು ಹೇಳಿದರು. ಹಾಗಾಗಿ ಎಸ್.ಆರ್. ಗೌಡ ಅವರಿಗೆ ಟಿಕೆಟ್ ನೀಡಲಾಯಿತು.

ಚುನಾವಣೆಯಲ್ಲಿ ಸೋತರೂ ಕೂಡ. ಬಿ.ಕೆ.ಮಂಜುನಾಥ್ ಸಮರ್ಥ ಅಭ್ಯರ್ಥಿಯಲ್ಲ. ಎಸ್. ಆರ್. ಗೌಡರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅವರಿಬ್ಬರ ಪರವಾಗಿ ಕೆಸಲ ಮಾಡಲ್ಲ. ಇದು ಈಗ ಬಿಜೆಪಿ ರಾಜ್ಯ ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಇದೇ ಕಾರಣಕ್ಕಾಗಿಯೇ ಹೊಸ ಮತ್ತು ಅಚ್ಚರಿಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಸುರೇಗೌಡ ಟ್ರಂಪ್ ಕಾರ್ಟ್ ಮುಂದಿಟ್ಟಿದೆ. ಹೇಗೋ ಬಿಜೆಪಿ ಅಧ್ಯಕ್ಷರು. ಕ್ಷೇತ್ರದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸುತ್ತಾರೆ. ಸುರೇಶ್ ಗೌಡ ಮುಖ್ಯಮಂತ್ರಿಗೂ ಆಪ್ತ. ಹಣವನ್ನೂ ಖರ್ಚು ಮಾಡಬಲ್ಲರು. ಚುನಾವಣೆಯಲ್ಲಿ ಸ್ಪರ್ಧಿಸಿ ತಂತ್ರಗಳನ್ನು ರಾಜಕೀಯ ಪಟ್ಟುಗಳನ್ನು ಹಾಕಿದ ಅನುಭವವೂ ಇದೆ. ಇದು ಬಿಜೆಪಿ ಕ್ಷೇತ್ರದಲ್ಲಿ ಅಡಿಪಾಯ ಹಾಕಲಿಕ್ಕೆ ಅವಕಾಶ ಕೊಡುತ್ತದೆ ಎನ್ನುತ್ತದೆ ಬಿಜೆಪಿ ಆಪ್ತ ವಲಯ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಬಿಜೆಪಿ ಮುಖಂಡರು ದೇವಾಲಯಗಳಿಗೆ ಲಕ್ಷಲಕ್ಷ ರೂಪಾಯಿ ನೀಡುತ್ತಿದ್ದಾರೆ. ಎಲ್ಲಾ ದೇವಾಲಯಗಳಿಗೂ ಹಣ ಕೊಡಲಾಗುತ್ತಿದೆ. ಜನರಿಗೆ ಆಮಿಷವೊಡ್ಡುತ್ತಿದೆ. ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ಹೆಣೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.

ಇಂತಹ ಆರೋಪಗಳ ನಡುವೆಯೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೊದಲ ಬಾರಿಗೆ ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡುತ್ತಿರುವ ಬಗ್ಗೆ ಖಂಡಿಸಿದ್ದಾರೆ. ”ನಾನು ಕೂಡ ದೇವಾಲಯಗಳಿಗೆ 20 ಕೋಟಿ ರೂಪಾಯಿ ನೀಡಿದ್ದೇನೆ. ಸಮುದಾಯ ಭವನ ಗಳನ್ನು ನಿರ್ಮಿಸಿದ್ದೇನೆ. ಶಿರಾಕ್ಕೆ ಹೇಮಾವತಿ ನೀರನ್ನು ತಂದಿದ್ದೇನೆ. ಅಭಿವೃದ್ಧಿ ಅಂದರೆ ಕ್ಷೇತ್ರದ ಜನರಿಗೆ ಗೊತ್ತು. ಬಿಜೆಪಿ ಮುಖಂಡರು ಇಲ್ಲಿಯವರೆಗೆ ಎಲ್ಲಿ ಹೋಗಿದ್ದರು” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ದೇವಾಲಯಗಳಿಗೆ ಹಣ ಹಂಚುವ ಮೂಲಕ ಚುನಾವಣೆ ಗಿಮಿಕ್ ಮಾಡುತ್ತಿದೆ. ಚುನಾವಣೆಯಲ್ಲಿ ವಾಮ ಮಾರ್ಗದಲ್ಲಿ ಗೆಲ್ಲಲು ಕೋಟಿಕೋಟಿ ಹಣ ಸುರಿಯುತ್ತಿದೆ. ಈ ದುಡ್ಡು ಎಲ್ಲಿಂದ ಬರುತ್ತಿದೆ. ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ” ಎಂದು ಕೆಂಡಾಮಂಡಲವಾಗಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದ ಬಿಜೆಪಿ ಹೊರಗಿನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಕ್ಷೇತ್ರದ ಮತದಾರರಿಗೂ ಅವಮಾನ ಮಾಡುತ್ತಿದೆ ಎಂಬ ಟೀಕೆಗಳು ಕ್ಷೇತ್ರದ ಜನರಿಂದ ವ್ಯಕ್ತವಾಗುತ್ತಿವೆ.

ಸುರೇಶ್ ಗೌಡ ಅಭ್ಯರ್ಥಿ ಆಗುವುದರಿಂದ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಜಿದ್ದಾಜಿದ್ದಿ ಕಣವಾಗಿ ಮಾರ್ಪಡಲಿದೆ. ಆರೋಪ-ಪ್ರತ್ಯಾರೋಪಕ್ಕೆ ಕ್ಷೇತ್ರ ವೇದಿಕೆಯಾಗಲಿದೆ.  ಉಪ ಚುನಾವಣೆ ಎಂಥೆಂಥ ಒಳಪೆಟ್ಟುಗಳಿಗೆ ಸಾಕ್ಷಿಯಾಗಲಿದೆ ನೋಡಬೇಕು.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...