Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ NIA

ಭೀಮಾ ಕೋರೆಗಾಂವ್ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ NIA

ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಸಿಪಿಐ (ಮಾವೋವಾದಿ)ಯ ಸಂಘಟನೆಯಾದ ಕಬೀರ್ ಕಲಾ ಮಂಚ್ ಸದಸ್ಯರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಎಲ್ಗರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು NIA ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರುಗಳು ಸಿಪಿಐ (ಮಾವೋವಾದಿ) ಸಂಘಟನೆಯವರು ಎಂಬುದು ಅವರ ಆರೋಪವಾಗಿದೆ.

ಸಾಗರ್ ತತ್ಯಾರಾಮ್ ಗೂರ್ಖೆ (32) ಮತ್ತು ರಮೇಶ್ ಮುರ್ಲಿಧರ್ ಗೈಚೋರ್ (36) ಅವರನ್ನು ಸೋಮವಾರ ಬಂಧಿಸಲಾಗಿದ್ದು, ಜ್ಯೋತಿ ರಘೋಬಾ ಜಗ್ತಾಪ್ (33) ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು NIA ವಕ್ತಾರರು ತಿಳಿಸಿದ್ದಾರೆ. ಇವರೆಲ್ಲರೂ ಪುಣೆಯ ನಿವಾಸಿಗಳು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಸಿಪಿಐ (ಮಾವೋವಾದಿ)ಯ ಸಂಘಟನೆಯಾದ ಕಬೀರ್ ಕಲಾ ಮಂಚ್ ಸದಸ್ಯರಾಗಿದ್ದಾರೆ ಎಂದು ಅಧಿಕಾರಿ ಆರೋಪಿಸಿದ್ದಾರೆ.

ಡಿಸೆಂಬರ್ 31, 2017 ರಂದು ಪುಣೆಯ ಶನಿವಾರವಾಡದಲ್ಲಿ ಕಬೀರ್ ಕಲಾ ಮಂಚ್ ಆಯೋಜಿಸಿದ್ದ ಎಲ್ಗರ್ ಪರಿಷತ್ ಕಾರ್ಯಕ್ರಮಕ್ಕೆ ಈ ಪ್ರಕರಣವು ಸಂಬಂಧಿಸಿದೆ. ಅಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಲಾಯಿತು, ವಿವಿಧ ಜಾತಿ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿ, ಜನರ ಜೀವನ ಮತ್ತು ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ರಾಜ್ಯವ್ಯಾಪಿ ಆಂದೋಲನ ನಡೆಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ಈ ಪ್ರಕರಣದಲ್ಲಿ ಪುಣೆ ಪೊಲೀಸರು ಕ್ರಮವಾಗಿ ನವೆಂಬರ್ 15, 2018 ಮತ್ತು ಫೆಬ್ರವರಿ 21, 2019 ರಂದು ಚಾರ್ಜ್‌ಶೀಟ್ ಮತ್ತು ಪೂರಕ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಗೋರ್ಖೆ, ಗೈಚೋರ್ ಮತ್ತು ಜಗ್ತಾಪ್ ಹೆಸರಿಸಲಾಗಿದೆ. ಈ ವರ್ಷದ ಜನವರಿ 24 ರಂದು NIA ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಏಪ್ರಿಲ್ 14 ರಂದು ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದಲ್ಲದೆ, ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ನಿವಾಸಿ ಮತ್ತು ದೆಹಲಿ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹನಿಬಾಬು ಮುಸಲಿಯಾವೀರ್ತಿಲ್ ತರೈಲ್ (54) ಅವರನ್ನು ಜುಲೈ 28 ರಂದು ಬಂಧಿಸಲಾಯಿತು.

ಗೋರ್ಖೆ, ಗೈಚೋರ್ ಮತ್ತು ಜಗ್ತಾಪ್ ಅವರು ನಕ್ಸಲ್ ಚಟುವಟಿಕೆಗಳು ಮತ್ತು ಮಾವೋವಾದಿ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದಾರೆ ಮತ್ತು ಬಂಧಿತ ಇತರ ಆರೋಪಿಗಳೊಂದಿಗೆ ಸಹ-ಸಂಚುಕೋರರು ಎಂದು NIA ಅಧಿಕಾರಿ ಹೇಳಿದ್ದಾರೆ.

ಬಂಧಿತ ಮೂವರು ಆರೋಪಿಗಳನ್ನು ಮುಂಬೈನ ವಿಶೇಷ NIA ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ಅವರನ್ನು ನಾಲ್ಕು ದಿನಗಳ NIA ಕಸ್ಟಡಿಗೆ ಕಳುಹಿಸಲಾಗಿದೆ. ಇದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ಹಲವಾರು ಚಿಂತಕರು, ವಿದ್ವಾಂಸರು ಮತ್ತು ಹೋರಾಟಗಾರರನ್ನು ಇದೇ ಕೇಸಿನಲ್ಲಿ ಬಂಧಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಸದರಿ ಪ್ರಕರಣದಲ್ಲಿ ಸಂಘಪರಿವಾರದ ಸಂಘಟನೆಯೊಂದು ಗಲಭೆಗೆ ಕರೆ ನೀಡಿ, ಭೀಮಾ ಕೊರೆಗಾಂವ್‌ನಲ್ಲಿ ಕೊರೆಗಾಂವ್ ವೀರರನ್ನು ಸ್ಮರಿಸಿ ವಾಪಸ್ಸು ಬರುತ್ತಿರುವವರ ಮೇಲೆ ಹಿಂಸಾಚಾರ ನಡೆದಿತ್ತು. ಆದರೆ, ಅದರ ಕೆಲವು ದಿನಗಳ ನಂತರ ಹಲ್ಲೆಗೊಳಗಾದ ಸಂಘಟನೆಯೇ ಹಿಂಸೆಗೆ ಕಾರಣವೆಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.

ಇದೆಲ್ಲಾ ನಡೆದಾಗ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರವೇ ಅಧಿಕಾರಲ್ಲಿತ್ತು. ಅಲ್ಲಿಂದ ಮುಂದೆ, ಇದ್ದಕ್ಕಿದ್ದಂತೆ ಈ ಹಿಂಸಾಚಾರಕ್ಕೆ (ಈಗ ಬಂಧಿತವಾಗಿರುವ) ವಿದ್ವಾಂಸರು ಕಾರಣವೆಂದು ಇನ್ನೊಂದು ಪ್ರಕರಣ ದಾಖಲಿಸಿ ಬಂಧನಗಳು ಆರಂಭವಾದವು. ದೇಶದ ಮತ್ತು ಅಂತರ್ರಾಷ್ಟ್ರೀಯ ಮಟ್ಟದ ಹಲವಾರು ಚಿಂತಕರು ಈ ಬಂಧನಗಳನ್ನು ಖಂಡಿಸಿದ್ದರು. ಈಗ ಅದರ ಮುಂದುವರಿಕೆಯಾಗಿ ಈ ಬಂಧನಗಳು ನಡೆದಿವೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...