Homeಕರ್ನಾಟಕಸಂಯುಕ್ತಾ ಹೆಗಡೆ ಜೊತೆ ಗಲಾಟೆ ಪ್ರಕರಣ: ಕವಿತಾ ರೆಡ್ಡಿ ಬಂಧನ; ಬಿಡುಗಡೆ

ಸಂಯುಕ್ತಾ ಹೆಗಡೆ ಜೊತೆ ಗಲಾಟೆ ಪ್ರಕರಣ: ಕವಿತಾ ರೆಡ್ಡಿ ಬಂಧನ; ಬಿಡುಗಡೆ

- Advertisement -
- Advertisement -

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದ ನಟಿ ಸಂಯುಕ್ತ ಹೆಗಡೆ ಅವರ ಜೊತೆ ಗಲಾಟೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಆರೋಪದಡಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ಅವರನ್ನು ಬಂಧಿಸಿದ ಪೊಲೀಸರು ನಂತರ ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.

ಘಟನೆ ಕಳೆದವಾರ ನಡೆದಿದ್ದು ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದರು. ಕವಿತಾ ರೆಡ್ಡಿ, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಆದರೆ ನಂತರ ಸಂಯುಕ್ತಾ ಹೆಗಡೆ ಬಳಿ ನಡೆದಿರುವ ಘಟನೆಗೆ ಕ್ಷಮೆ ಕೇಳಿದ್ದ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ವಾಗ್ವಾದ ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಟ್ವಿಟ್ಟರ್‌ ವೀಡಿಯೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

‘ಗಲಾಟೆ ಸಂಬಂಧ ಸಂಯುಕ್ತ ಅವರು ದೂರು ನೀಡಿದ್ದರು. ಅದರನ್ವಯ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ.’ ಎಂದು ಪೊಲೀಸರು ಹೇಳಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.

“ಶುಕ್ರವಾರ ಸಂಜೆ 5 ಗಂಟೆಯಲ್ಲಿ ಸ್ನೇಹಿತರ ಜತೆ ವ್ಯಾಯಾಮ ಮಾಡುತ್ತಿದ್ದರು. ಅಗರ ಕೆರೆ ಸಮಿತಿ ಸದಸ್ಯೆ ಕವಿತಾ ರೆಡ್ಡಿ, ಅನಿಲ್ ರೆಡ್ಡಿ ಹಾಗೂ ಇತರರು, ’ಸಾರ್ವಜನಿಕವಾಗಿ ತುಂಡು ಬಟ್ಟೆ ಧರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದೀರಿ’ ಎಂದು ಅವಾಚ್ಯವಾಗಿ ನಿಂದಿಸಿ, ಸಂಯುಕ್ತ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ಸಂಗತಿ ಸಂಯುಕ್ತ ಅವರ ದೂರಿನಲ್ಲಿದೆ. ತಲೆಮರೆಸಿಕೊಂಡಿರುವ ಅನಿಲ್ ರೆಡ್ಡಿ ಮತ್ತು ಇತರರಿಗಾಗಿ ಹುಡುಕಾಟ ನಡೆದಿದೆ” ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...