Homeಕರ್ನಾಟಕಸಂಯುಕ್ತಾ ಹೆಗಡೆ ಜೊತೆ ಗಲಾಟೆ ಪ್ರಕರಣ: ಕವಿತಾ ರೆಡ್ಡಿ ಬಂಧನ; ಬಿಡುಗಡೆ

ಸಂಯುಕ್ತಾ ಹೆಗಡೆ ಜೊತೆ ಗಲಾಟೆ ಪ್ರಕರಣ: ಕವಿತಾ ರೆಡ್ಡಿ ಬಂಧನ; ಬಿಡುಗಡೆ

- Advertisement -
- Advertisement -

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದ ನಟಿ ಸಂಯುಕ್ತ ಹೆಗಡೆ ಅವರ ಜೊತೆ ಗಲಾಟೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಆರೋಪದಡಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ಅವರನ್ನು ಬಂಧಿಸಿದ ಪೊಲೀಸರು ನಂತರ ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.

ಘಟನೆ ಕಳೆದವಾರ ನಡೆದಿದ್ದು ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದರು. ಕವಿತಾ ರೆಡ್ಡಿ, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಆದರೆ ನಂತರ ಸಂಯುಕ್ತಾ ಹೆಗಡೆ ಬಳಿ ನಡೆದಿರುವ ಘಟನೆಗೆ ಕ್ಷಮೆ ಕೇಳಿದ್ದ ಕವಿತಾ ರೆಡ್ಡಿ, “ನಾನು ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದರ ಭಾಗವಾಗಿಯೆ ನನ್ನ ಕ್ರಿಯೆಗಳು ರೂಪುಗೊಂಡಿದ್ದವು. ವಾಗ್ವಾದ ನನ್ನ ಉದ್ವೇಗಗೊಂಡ ವರ್ತನೆಯಿಂದ ಕೊನೆಯಾಯಿತು. ಇದು ನನ್ನ ಸಮಸ್ಯೆ. ಒಬ್ಬ ನಾಗರೀಕ ಪ್ರಜೆಯಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ, ಸಂಯಕ್ತ ಹೆಗ್ಡೆ ಮತ್ತು ಅವರ ಗೆಳತಿಯರಲ್ಲಿ ನಾನು ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಟ್ವಿಟ್ಟರ್‌ ವೀಡಿಯೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ನಟಿ ಸಂಯುಕ್ತ ಹೆಗ್ಡೆ ಬಳಿ ಕ್ಷಮೆಯಾಚಿಸಿದ ಕವಿತಾ ರೆಡ್ಡಿ

‘ಗಲಾಟೆ ಸಂಬಂಧ ಸಂಯುಕ್ತ ಅವರು ದೂರು ನೀಡಿದ್ದರು. ಅದರನ್ವಯ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಕವಿತಾ ರೆಡ್ಡಿ ಅವರನ್ನು ಬಂಧಿಸಲಾಗಿದೆ.’ ಎಂದು ಪೊಲೀಸರು ಹೇಳಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.

“ಶುಕ್ರವಾರ ಸಂಜೆ 5 ಗಂಟೆಯಲ್ಲಿ ಸ್ನೇಹಿತರ ಜತೆ ವ್ಯಾಯಾಮ ಮಾಡುತ್ತಿದ್ದರು. ಅಗರ ಕೆರೆ ಸಮಿತಿ ಸದಸ್ಯೆ ಕವಿತಾ ರೆಡ್ಡಿ, ಅನಿಲ್ ರೆಡ್ಡಿ ಹಾಗೂ ಇತರರು, ’ಸಾರ್ವಜನಿಕವಾಗಿ ತುಂಡು ಬಟ್ಟೆ ಧರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದೀರಿ’ ಎಂದು ಅವಾಚ್ಯವಾಗಿ ನಿಂದಿಸಿ, ಸಂಯುಕ್ತ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ಸಂಗತಿ ಸಂಯುಕ್ತ ಅವರ ದೂರಿನಲ್ಲಿದೆ. ತಲೆಮರೆಸಿಕೊಂಡಿರುವ ಅನಿಲ್ ರೆಡ್ಡಿ ಮತ್ತು ಇತರರಿಗಾಗಿ ಹುಡುಕಾಟ ನಡೆದಿದೆ” ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...