Homeಮುಖಪುಟಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು ಗಂದರ್‌ಬಲ್ ಮತ್ತು ಉಧಂಪುರ್‌ ಎರಡು ಜಿಲ್ಲೆಗಳ ಹೊರಗೆ ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಅಥವಾ 4 ಜಿ ಸೇವೆಗಳನ್ನು ವಿಸ್ತರಿಸಲು ನಿರಾಕರಿಸಿದೆ. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿರುವ “ಭಯೋತ್ಪಾದಕ ಘಟಕಗಳ” ಬಗ್ಗೆ ಭದ್ರತಾ ಸಂಸ್ಥೆಗಳ ವರದಿ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 5 ರಂದು ಕೇಂದ್ರವು ಸಂವಿಧಾನದ 370 ನೇ ವಿಧಿಯನ್ನು ಹಿಂತೆಗೆದುಕೊಂಡು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಇದಾಗೀ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ.

4 ಜಿ ನೆಟ್‌ವರ್ಕ್‌ನ ಸಂಪೂರ್ಣ ನಿಷೇಧದ ಮಧ್ಯೆ ಈ ವರ್ಷ ಜನವರಿ 25 ರಂದು 2ಜಿ ಇಂಟರ್ನೆಟ್ ಸೇವೆಯನ್ನು ಪುನಃಸ್ಥಾಪಿಸಲಾಯಿತು. ಅದರ ಮುಂದುವರಿದ ಭಾಗವಾಗಿ ಆಗಸ್ಟ್‌ನಲ್ಲಿ ಸರ್ಕಾರವು ನಿರ್ಬಂಧಗಳನ್ನು  ಸರಾಗಗೊಳಿಸುವಿಕೆಯ ಭಾಗವಾಗಿ ಗಂದರ್‌ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ “ಪ್ರಯೋಗ ಆಧಾರದ ಮೇಲೆ” ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಯನ್ನು ಪುನರಾರಂಭಿಸಿತು. ಈ ಜಿಲ್ಲೆಗಳಲ್ಲಿ 4 ಜಿ ಸೇವೆಗಳು ಸೆಪ್ಟೆಂಬರ್ 30 ರವರೆಗೆ ಮುಂದುವರಿಯಲಿವೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಮ್ಮ ಆದೇಶದಲ್ಲಿ ’ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಯಾವುದೇ ವರದಿಗಳು ಬಂದಿಲ್ಲವಾದರೂ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ’ ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ
PC:Reuters

ಭಯೋತ್ಪಾದಕ ಘಟಕ‌ಗಳ ಬಗ್ಗೆ ಕಾನೂನು ಜಾರಿ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿ ನೀಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭಯೋತ್ಪಾದಕ ಸಂಘಟನೆಗಳು ಯುವಕರಲ್ಲಿ ಭಾವನೆಗಳನ್ನು ಪ್ರಚೋದಿಸಿ ಮೋಸದಿಂದ ಸಂಘಟನೆಗಳಿಗೆ ಸೇರುವಂತೆ ಮಾಡುತ್ತವೆ. ಹೀಗಾಗಿ 4ಜಿ ಇಂಟರ್‌ನೆಟ್ ದುರುಪಯೋಗವಾಗುವ ಸಂಭಾವ್ಯವನ್ನು ಸೂಚಿಸುತ್ತದೆ ಎಂದು ತಿಳಿಸಿದೆ.

ಮುಂದುವರೆದು, ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವ ಪ್ರಯತ್ನಗಳಿಗೆ ಸಹಾಯ ಮಾಡಲು ಹೈಸ್ಪೀಡ್ ಡೇಟಾ ಸೇವೆಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಏಜೆನ್ಸಿಗಳು ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸುಪ್ರೀಂ ಕೋರ್ಟ್ ಕೇಂದ್ರವನ್ನು ಹಿರಿಯ ಗೃಹ ಸಚಿವಾಲಯ ಮತ್ತು ಕೇಂದ್ರ ಪ್ರಾಂತ್ಯದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸುವಂತೆ ಕೇಳಿದ ಕೆಲವೇ ದಿನಗಳಲ್ಲಿ ‍ಆಗಸ್ಟ್ 16 ರಂದು ಗಂದರ್‌‌ಬಲ್ ಮತ್ತು ಉಧಂಪುರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಸ್ಥೆಗಳಿಂದ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿತ್ತು. ಹಲವು ಪ್ರತಿಭಟನೆಗಳನ್ನು ಮೋದಿ ಸರ್ಕಾರ ಎದುರಿಸಬೇಕಾಯಿತು. ಈಗಲೂ 2 ಜಿಲ್ಲೆಗಳಲ್ಲಿ 4ಜಿ ಇಂಟರ್‌ನೆಟ್ ದುರುಪಯೋಗವಾಗಿಲ್ಲ ಎಂದರೂ ಹೈಸ್ಪೀಡ್ ಇಂಟರ್‌ನೆಟ್ ವಿಸ್ತರಣೆ ಮಾಡಲು ಸರ್ಕಾರ ಚಿಂತಿಸುತ್ತಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...