Homeಮುಖಪುಟಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಿಳಿಸಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರ ಆಡಳಿತವು ಗಂದರ್‌ಬಲ್ ಮತ್ತು ಉಧಂಪುರ್‌ ಎರಡು ಜಿಲ್ಲೆಗಳ ಹೊರಗೆ ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಅಥವಾ 4 ಜಿ ಸೇವೆಗಳನ್ನು ವಿಸ್ತರಿಸಲು ನಿರಾಕರಿಸಿದೆ. ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಆಮಿಷವೊಡ್ಡಲು ಪ್ರಯತ್ನಿಸುತ್ತಿರುವ “ಭಯೋತ್ಪಾದಕ ಘಟಕಗಳ” ಬಗ್ಗೆ ಭದ್ರತಾ ಸಂಸ್ಥೆಗಳ ವರದಿ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 5 ರಂದು ಕೇಂದ್ರವು ಸಂವಿಧಾನದ 370 ನೇ ವಿಧಿಯನ್ನು ಹಿಂತೆಗೆದುಕೊಂಡು ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ಇದಾಗೀ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ.

4 ಜಿ ನೆಟ್‌ವರ್ಕ್‌ನ ಸಂಪೂರ್ಣ ನಿಷೇಧದ ಮಧ್ಯೆ ಈ ವರ್ಷ ಜನವರಿ 25 ರಂದು 2ಜಿ ಇಂಟರ್ನೆಟ್ ಸೇವೆಯನ್ನು ಪುನಃಸ್ಥಾಪಿಸಲಾಯಿತು. ಅದರ ಮುಂದುವರಿದ ಭಾಗವಾಗಿ ಆಗಸ್ಟ್‌ನಲ್ಲಿ ಸರ್ಕಾರವು ನಿರ್ಬಂಧಗಳನ್ನು  ಸರಾಗಗೊಳಿಸುವಿಕೆಯ ಭಾಗವಾಗಿ ಗಂದರ್‌ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ “ಪ್ರಯೋಗ ಆಧಾರದ ಮೇಲೆ” ಹೈಸ್ಪೀಡ್ ಮೊಬೈಲ್ ಡೇಟಾ ಸೇವೆಯನ್ನು ಪುನರಾರಂಭಿಸಿತು. ಈ ಜಿಲ್ಲೆಗಳಲ್ಲಿ 4 ಜಿ ಸೇವೆಗಳು ಸೆಪ್ಟೆಂಬರ್ 30 ರವರೆಗೆ ಮುಂದುವರಿಯಲಿವೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಲೀನ್ ಕಬ್ರಾ ತಮ್ಮ ಆದೇಶದಲ್ಲಿ ’ಪರಿಸ್ಥಿತಿಯನ್ನು ಹೊಸದಾಗಿ ಪರಿಶೀಲಿಸಿದ ನಂತರ ನಿಷೇಧವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಯಾವುದೇ ವರದಿಗಳು ಬಂದಿಲ್ಲವಾದರೂ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಾಗಿದೆ’ ಎಂದಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ
PC:Reuters

ಭಯೋತ್ಪಾದಕ ಘಟಕ‌ಗಳ ಬಗ್ಗೆ ಕಾನೂನು ಜಾರಿ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿ ನೀಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭಯೋತ್ಪಾದಕ ಸಂಘಟನೆಗಳು ಯುವಕರಲ್ಲಿ ಭಾವನೆಗಳನ್ನು ಪ್ರಚೋದಿಸಿ ಮೋಸದಿಂದ ಸಂಘಟನೆಗಳಿಗೆ ಸೇರುವಂತೆ ಮಾಡುತ್ತವೆ. ಹೀಗಾಗಿ 4ಜಿ ಇಂಟರ್‌ನೆಟ್ ದುರುಪಯೋಗವಾಗುವ ಸಂಭಾವ್ಯವನ್ನು ಸೂಚಿಸುತ್ತದೆ ಎಂದು ತಿಳಿಸಿದೆ.

ಮುಂದುವರೆದು, ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರು ಒಳನುಸುಳುವ ಪ್ರಯತ್ನಗಳಿಗೆ ಸಹಾಯ ಮಾಡಲು ಹೈಸ್ಪೀಡ್ ಡೇಟಾ ಸೇವೆಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಏಜೆನ್ಸಿಗಳು ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸುಪ್ರೀಂ ಕೋರ್ಟ್ ಕೇಂದ್ರವನ್ನು ಹಿರಿಯ ಗೃಹ ಸಚಿವಾಲಯ ಮತ್ತು ಕೇಂದ್ರ ಪ್ರಾಂತ್ಯದ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸುವಂತೆ ಕೇಳಿದ ಕೆಲವೇ ದಿನಗಳಲ್ಲಿ ‍ಆಗಸ್ಟ್ 16 ರಂದು ಗಂದರ್‌‌ಬಲ್ ಮತ್ತು ಉಧಂಪುರದಲ್ಲಿ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಸ್ಥೆಗಳಿಂದ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿತ್ತು. ಹಲವು ಪ್ರತಿಭಟನೆಗಳನ್ನು ಮೋದಿ ಸರ್ಕಾರ ಎದುರಿಸಬೇಕಾಯಿತು. ಈಗಲೂ 2 ಜಿಲ್ಲೆಗಳಲ್ಲಿ 4ಜಿ ಇಂಟರ್‌ನೆಟ್ ದುರುಪಯೋಗವಾಗಿಲ್ಲ ಎಂದರೂ ಹೈಸ್ಪೀಡ್ ಇಂಟರ್‌ನೆಟ್ ವಿಸ್ತರಣೆ ಮಾಡಲು ಸರ್ಕಾರ ಚಿಂತಿಸುತ್ತಿದೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...