Homeಮುಖಪುಟಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾದ ಆರ್ಥಿಕ ಮುಗ್ಗಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಘೋಷಿಸಿರುವ ಕೊರೊನಾ ಪುನಶ್ಚೇತನ ಪ್ಯಾಕೇಜ್‌ ಅಸಮರ್ಪಕವಾಗಿದೆ ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿದೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದ್ದಾರೆ.

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ, 2014, 2019 ರಲ್ಲಿ ಕೂಡ ಹಿಂದುತ್ವ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ಕೇಂದ್ರ ಸರ್ಕಾರದ ಪ್ಯಾಕೆಜ್ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯನ್ ಸ್ವಾಮಿ, “ಕೇಂದ್ರ ಸರ್ಕಾರ 21 ಟ್ರಿಲಿಯನ್‌ ಪರಿಹಾರ ಘೋಷಿಸಿದೆ. ಅದರಲ್ಲಿ, ಕೇವಲ 1.2 ಟ್ರಿಲಿಯನ್ ಮಾತ್ರ ಪ್ರೋತ್ಸಾಹಕವಾಗಿದೆ. ಉಳಿದದ್ದು ಉದ್ದೀಪಕ ಮತ್ತು ಹಣಕಾಸು ರಿಯಾಯಿತಿಗಳಾಗಿವೆ. ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕವಾಗಿದೆ. ಅದು ಪೂರೈಕೆದಾರರನ್ನು ಬೆಳೆಸಿ, ಅಧಿಕಾರ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?


source: tradingeconomics.com

ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು ಎಂದು ಅವರು ಹೇಳಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

ಮುಂಬರುವ ಅಮೆರಿಕ ಚುನಾವಣೆಯಲ್ಲಿ ಮತ್ತೆ ಡೊನಾಲ್ಡ್ ಟ್ರಂಪ್ ಅವರೆ ಅಧ್ಯಕ್ಷರಾಗಬಹುದು. ಬಿಡೆನ್‌ ಮುಸ್ಲಿಮರ ಬಳಿ ಹೋಗಿ, ನಾವು ಅಧಿಕಾರಕ್ಕೆ ಬಂದರೆ, ಭಾರತೀಯರಿಗೆ ಪಾಠ ಹೇಳುತ್ತೇವೆ ಎಂದು ಹೇಳಿ ತಪ್ಪು ಮಾಡಿದ್ದಾರೆ. ಹಾಗಾಗಿ ಟ್ರಂಪ್‌ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ;ಫ್ಯಾಕ್ಟ್‌ಚೆಕ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...