Homeಮುಖಪುಟಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

ಗಂಡಿಕೋಟ ಜಲಾಶಯ ಯೋಜನೆ: ಬಲವಂತವಾಗಿ ಗ್ರಾಮಸ್ಥರನ್ನು ಹೊರಹಾಕುತ್ತಿರುವ ಪೊಲೀಸರು!

"ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ"- ರಾಜೇಶ್ (ಗ್ರಾಮಸ್ಥ)

- Advertisement -
- Advertisement -

ಗಂಡಿಕೋಟ ಜಲಾಶಯದ ಎರಡನೇ ಹಂತದ ಯೋಜನೆಯ ಭಾಗವಾಗಿ ಸ್ಥಳಾಂತರಗೊಳ್ಳುತ್ತಿರುವ ಕಡಪದ ತಲ್ಲಾಪ್ರೊದ್ದತ್ತೂರು ಗ್ರಾಮದ ನಿವಾಸಿಗಳು ಪುನರ್ವಸತಿ ಕಲ್ಪಿಸುವಂತೆ ಕೋರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಡಪ ಜಿಲ್ಲೆಯಲ್ಲಿ ಗಂಡಿಕೋಟ ಜಲಾಶಯವನ್ನು ನಿರ್ಮಿಸಲಾಗುತ್ತಿದ್ದು, ಕೃಷ್ಣಾ ನದಿನೀರನ್ನು ಪೆನ್ನಾ ನದಿ ಜಲಾನಯನ ಪ್ರದೇಶಕ್ಕೆ ಎರಡು ಹಂತಗಳಲ್ಲಿ ಪೂರೈಸಲಿದೆ. ಹಾಗಾಗಿ ಈ ಎರಡನೇ ಹಂತದ ಯೋಜನೆಗಾಗಿ ತಮ್ಮನ್ನು ಬಲವಂತದಿಂದ ಹೊರಹಾಕುತ್ತಿರುವುದನ್ನು ವಿರೋಧಿಸಿ ತಲ್ಲಾಪ್ರೊದ್ದತ್ತೂರು ಗ್ರಾಮದ ಸುಮಾರು 2000 ಕ್ಕೂ ಹೆಚ್ಚು ಕುಟುಂಬಗಳು ಹೋರಾಟ ಮಾಡುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಯಶಸ್ವಿಯಾಯಿತೇ? ಇಲ್ಲವೇ? – ಡಾ.ಅಕ್ಕಮಹಾದೇವಿ ಹಿಮಾಂಶು

ಸರ್ಕಾರವು ಈ ಯೋಜನೆಯ ಸಾಮರ್ಥ್ಯವನ್ನು 22 ಟಿಎಂಸಿ ಮೀಟರ್‌ಗೆ ಹೆಚ್ಚಿಸಿದ್ದರಿಂದ, ಕಡಪ ಜಿಲ್ಲೆಯ ಚಾಮಲೂರು, ಯೆರ್ರಗುಡಿ ಮತ್ತು ತಲ್ಲಾಪ್ರೊದ್ದತ್ತೂರು ಗ್ರಾಮಗಳ ಮೇಲೆ ಪರಿಣಾಮ ಬೀರಲಿವೆ.

ಸ್ಥಳಾಂತರಗೊಳ್ಳುತ್ತಿರುವ 1300 ಕುಟುಂಬಗಳ ಪೈಕಿ, ಈ ​​ಗ್ರಾಮಗಳಲ್ಲಿ 3500 ವಯಸ್ಕರಿಗೆ ಪರಿಹಾರ ಪುನರ್ವಸತಿ ಪರಿಹಾರ ತಲುಪಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದ್ದು, ಅವರನ್ನು ಹೊರಹಾಕಲು ಕಂದಾಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಗ್ರಾಮಸ್ಥರು ಸಂಪೂರ್ಣ ಪುನರ್ವಸತಿ ಪಡೆದ ನಂತರವೇ ಹೊರಡುವುದಾಗಿ ಹೇಳುತ್ತಿದ್ದಾರೆ. ಈ ಯೋಜನೆಯಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ ಎಂದು ಉಲ್ಲೇಖಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಪೊಲೀಸ್ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ನಮ್ಮನ್ನು ಸ್ಥಳಾಂತರಿಸಲು ಸೂಚನೆ ನೀಡದೇ, ತಕ್ಷಣದ ನೋಟೀಸ್ ಹೊರಡಿಸಿ, ಈಗಲೇ ಹೊರಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಮಗೆ ಕಾಲಾವಕಾಶವೇ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅದಾಗ್ಯೂ, ತಮಗೆ ಪುನರ್ವಸತಿ ಕಲ್ಪಿಸಿರುವ ಜೋಗುಲಾಪುರಂ ಬಳಿಯ 100 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿರ್ಮಾಣ ಕಾರ್ಯವು ಇನ್ನೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ದಿ ನ್ಯೂಸ್ ಮಿನಿಟ್‌ಗೆ ಹೇಳಿದ್ದಾರೆ.

ಹಳ್ಳಿಯಲ್ಲಿ ಪ್ರತಿಭಟನೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಕೆಲವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 4,000 ಕೋಟಿ ನೆರೆ ಪರಿಹಾರ ಕೇಳಿದ ಕರ್ನಾಟಕ: ಪರಿಹಾರ ಹಣ ಘೋಷಿಸದ ಮೋದಿ!

ಈ ಬಗ್ಗೆ ಮಾತನಾಡಿದ ರಾಜೇಶ್ ಎಂಬ ಗ್ರಾಮಸ್ಥ, “ಗ್ರಾಮದಲ್ಲಿ 400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂದಾಯ ಅಧಿಕಾರಿಗಳು ನಮ್ಮನ್ನು ಬಲವಂತವಾಗಿ ಹೊರಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದರು. ರಾಜೇಶ್ ಅವರನ್ನು ಅಕ್ಟೋಬರ್ 15 ರೊಳಗೆ ಖಾಲಿ ಮಾಡುವಂತೆ ಕೋರಲಾಗಿದೆ.

“ಇಲ್ಲಿಯವರೆಗೆ ಕೇವಲ 700 ಘಟಕಗಳಿಗೆ ಮಾತ್ರ (ಪರಿಹಾರಕ್ಕೆ ಅರ್ಹರಾದ ವಯಸ್ಕರಿಗೆ)  ಆರ್‌ & ಆರ್‌ ಪ್ಯಾಕೇಜ್ (Rehabilitation and Resettlement package) ಅಡಿಯಲ್ಲಿ ಪರಿಹಾರ ದೊರೆತಿದೆ. ಪರ್ಯಾಯ ವಸತಿ ಸೌಲಭ್ಯವಿಲ್ಲದ ಜನರು ಎಲ್ಲಿರಬೇಕು? ಪುನರ್ವಸತಿ ಕಾಲೋನಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ 2013 ರ ಪ್ರಕಾರ ನಮ್ಮ ಪರಿಹಾರ ಮತ್ತು ಪುನರ್ವಸತಿಯನ್ನು ಸರ್ಕಾರ ಇತ್ಯರ್ಥಪಡಿಸಬೇಕೆಂದು ನಾವು ಬಯಸುತ್ತೇವೆ. ಆಗ ಮಾತ್ರ ನಾವು ಈ ಸ್ಥಳವನ್ನು ಬಿಡುತ್ತೇವೆ” ಎಂದು ಗ್ರಾಮಸ್ತರು ಹೇಳುತ್ತಾರೆ.

7000 ಕ್ಕೂ ಹೆಚ್ಚು ಜನರಿರುವ ಗ್ರಾಮದಲ್ಲಿ 1300 ಕುಟುಂಬಗಳಿವೆ. ಇಲ್ಲಿ ವಾಸಿಸುವ 400 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಕುಟುಂಬಗಳಲ್ಲಿ, 30% ಕುಟುಂಬಗಳಿಗೂ ಸಹ ಪುನರ್ವಸತಿಗಾಗಿ ಪರಿಹಾರವನ್ನು ನೀಡಲಾಗಿಲ್ಲ.

“ಗ್ರಾಮದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಬಂಧನಗಳನ್ನು ಮಾಡಿಲ್ಲ. ಯಾವುದೇ ಪ್ರಕರಣಗಳು ದಾಖಲಾಗಿಲ್ಲ, ಎಲ್ಲವೂ ಶಾಂತಿಯುತವಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ.ಕೆ.ಅನ್ಬುರಾಜನ್ ಹೇಳಿದ್ದರೆ. ಪುನರ್ವಸತಿಗೆ ಸಂಬಂಧಿಸಿದ ವಿಷಯಗಳು ಜಿಲ್ಲಾಧಿಕಾರಿಯ ವ್ಯಾಪ್ತಿಯಲ್ಲಿದೆ ಎಂದೂ ಹೇಳಿದರು.

ಮಾನವ ಹಕ್ಕುಗಳ ವೇದಿಕೆಯ(ಎಚ್‌ಆರ್‌ಎಫ್) ಜಯಶ್ರೀ ಕಾಕುಮಣಿ, ಆದಾಯ ಮತ್ತು ಪೊಲೀಸ್ ಅಧಿಕಾರಿಗಳ ಈ ವರ್ತನೆಯನ್ನು  ಖಂಡಿಸಿ,”ವೈಎಸ್‌ಆರ್‌ಸಿಪಿ ಸರ್ಕಾರವು ನ್ಯಾಯದ ಭರವಸೆಯನ್ನು ಕಿತ್ತುಕೊಂಡಿದೆ. ಆದರೆ ಈಗ ಅದೇ ಗ್ರಾಮಸ್ಥರು ನ್ಯಾಯಯುತ ಪರಿಹಾರಕ್ಕಾಗಿ ಒತ್ತಾಯಿಸಿದಾಗ ಅವರನ್ನು ಮೌನಗೊಳಿಸುತ್ತದೆ” ಎಂದು ಹೇಳಿದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...