Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

"ಮಲಯಾಳಂ ವೆಬ್ ಸರಣಿಯ ನಟನ ಚಿತ್ರಗಳನ್ನು, ಕೇರಳದಲ್ಲಿ ಆರ್‌ಎಸ್‌ಎಸ್ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಲಾಗಿದೆ" ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ

- Advertisement -
- Advertisement -

ಕೇರಳದ ಮುಸ್ಲಿಂ ವಿವಾಹದಲ್ಲಿ ಪಾಲ್ಗೊಂಡಿದ್ದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಸೇರಿದ ಚಂದ್ರಬಾಸ್ ಎಂದು ಗುರುತಿಸಲ್ಪಟ್ಟ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕೇರಳದಲ್ಲಿ ಹಿಂದೂ ಕಾರ್ಯಕರ್ತನ ವಿರುದ್ಧ ದೌರ್ಜನ್ಯ ಹೇಗೆ ನಡೆಯುತ್ತಿವೆ ಎಂದು ಪ್ರತಿಪಾದಿಸಲು ಚಿತ್ರವನ್ನು ಬಳಸಲಾಗುತ್ತಿದೆ.

ಅದೇ ಹೇಳಿಕೆಯೊಂದಿಗೆ ಈ ಚಿತ್ರವನ್ನು ಟ್ವಿಟರ್ ಬಳಕೆದಾರರೊಬ್ಬರು, “ರಾಷ್ಟ್ರೀಯ ಸ್ವಯಂಸೇವಕರ ಮೇಲಿನ ಇಂತಹ ಹಲ್ಲೆಯ ಘಟನೆಗಳಿಗೆ ಕೇರಳ ಇನ್ನೂ ಎಷ್ಟು ದಿನ ಆಶ್ರಯ ಕೊಡಲು ಸಾಧ್ಯ.  ಕೇರಳದಲ್ಲಿ ಬಿಜೆಪಿ ಬರುವವರೆಗೆ ಮಾತ್ರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ಇದೇ ಚಿತ್ರವನ್ನು “0% ಮಾನವೀಯತೆ, 100% ಸಾಕ್ಷರತೆ, ಕೇರಳಕ್ಕೆ ನಾಚಿಕೆಯಾಗಬೇಕು” ಎಂದು ಹಂಚಿಕೊಂಡಿದ್ದಾರೆ. ಹಲವಾರು ಫೇಸ್‌ಬುಕ್ ಬಳಕೆದಾರರು ಸಹ ಅದೇ ನಿರೂಪಣೆಯೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್: 

ಈ ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯು ನಟನಾಗಿದ್ದು, ಅರ್ಜುನ್ ರತನ್ ಎಂಬುದು ಈತನ ಹೆಸರು. ಈ ದೃಶ್ಯವು ಕರಿಕ್ಕು ಎಂಬ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್‌ಲೋಡ್ ಮಾಡಲಾದ ‘ಸ್ಮೈಲ್ ಪ್ಲೀಸ್’ ಎಂಬ ವೀಡಿಯೊದಲ್ಲಿ ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಹಲವಾರು ಟ್ವಿಟರ್ ಬಳಕೆದಾರರು ಈ ಚಿತ್ರಗಳನ್ನು ಯೂಟ್ಯೂಬ್ ಚಾನೆಲ್‌ನ ‘ಕರಿಕ್ಕು’ ವೀಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂದು ಗುರುತಿಸಿದ್ದಾರೆ. ಈ ವ್ಯಕ್ತಿಯು ನಟಿಸಿರುವ ವೀಡಿಯೋವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದಲ್ಲದೆ, ಕಿತ್ತಳೆ ಬಣ್ಣದ ಕುರ್ತಾ ಧರಿಸಿದ, ವೈರಲ್ ಚಿತ್ರದಲ್ಲಿರುವ ವ್ಯಕ್ತಿಯನ್ನು ವೆಬ್ ಸರಣಿಯಲ್ಲಿ ಅದೇ ಉಡುಪಿನಲ್ಲಿ ಕಾಣಬಹುದು. ವಿಡಿಯೋದಲ್ಲಿ ಅವರ ಪಾತ್ರಕ್ಕೆ ಚಂದ್ರಬಾಸ್ ಎಂದು ಹೆಸರಿಸಲಾಗಿದೆ.

ಈ ವೀಡಿಯೋದಲ್ಲಿನ ಕೊನೆಯ ದೃಶ್ಯಗಳಲ್ಲಿ, ಈ ವ್ಯಕ್ತಿಯನ್ನು ಅದೇ ಗಾಯಗಳು ಮತ್ತು ಅದೇ ಬಟ್ಟೆಯೊಂದಿಗೆ ಕಾಣಬಹುದು. ಆಗಸ್ಟ್ 19 ರಂದು ಈ ನಟ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅದೇ ಚಿತ್ರಗಳನ್ನು ಹಂಚಿಕೊಂಡಿದ್ದಾನೆ.

ವೈರಲ್ ಚಿತ್ರಗಳಲ್ಲಿ ಕಂಡುಬರುವಂತೆ, ಕಾರ್ಯಕರ್ತನ ಕೇಸರಿ ತಿಲಕವಾಗಲಿ, ಪ್ರಸಂಗವಾಗಲಿ ವಾಸ್ತವದ ವೀಡಿಯೋದಲ್ಲಿ ಕಂಡುಬರುವುದಿಲ್ಲ ಎಂಬುದು ಗಮನಾರ್ಹ.

ಹಾಗಾಗಿ, “ಮಲಯಾಳಂ ವೆಬ್ ಸರಣಿಯ ನಟನ ಚಿತ್ರಗಳನ್ನು, ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಗಿದೆ” ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...