Homeಕರೋನಾ ತಲ್ಲಣಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ.

- Advertisement -
- Advertisement -

ಪ್ಲಾಸ್ಮಾ ಚಿಕಿತ್ಸೆಯ ಬಗ್ಗೆ ICMR ನಡೆಸಿದ ವಿಶ್ವದ ಅತಿದೊಡ್ಡ ಟ್ರಯಲ್‌ನ ಫಲಿತಾಂಶದ ಪ್ರಕಾರ, ’ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡುವುದಿಲ್ಲ” ಎಂದು ತಿಳಿದುಬಂದಿದೆ. ಇದು ಜಗತ್ತಿನಾದ್ಯಂತ ನೀತಿನಿರೂಪಕರು, ವೈದ್ಯರು, ರೋಗಿಗಳು ಮತ್ತು ಅವರ ಕುಟುಂಬದವರ ಭರವಸೆಯನ್ನು ಹುಸಿಗೊಳಿಸಿದೆ.

PLACID ಎಂದು ಕರೆಯಲ್ಪಡುವ ಈ ಪ್ರಯೋಗವನ್ನು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 39 ಆಸ್ಪತ್ರೆಗಳಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಆಶ್ರಯದಲ್ಲಿ ನಡೆಸಲಾಯಿತು.

ಅಧ್ಯಯನವು, ಉಸಿರಾಟದ ತೊಂದರೆ ಇರುವ ಮತ್ತು ಆಮ್ಲಜನಕದ ಶುದ್ಧಿಯ ಮಟ್ಟವು 93% ಕ್ಕಿಂತ ಕಡಿಮೆ ಇರುವ 464 ಮಧ್ಯಮ ಮಟ್ಟದ ಅನಾರೋಗ್ಯದ ರೋಗಿಗಳನ್ನು ಒಳಗೊಂಡಿತ್ತು. ಅವುಗಳಲ್ಲಿ, 235 ಜನರಿಗೆ ರೋಗದ ವಿರುದ್ಧ ಪ್ರತಿಕಾಯಗಳನ್ನು ಹೊಂದಿರುವವರಿಗೆ, ಚೇತರಿಸಿಕೊಂಡವರಿಂದ ಸಂಗ್ರಹಿಸಿದ ’CP’ (convalescent plasma) ನೀಡಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಉಳಿದ 229 ಮಂದಿ ಕೇವಲ ಗುಣಮಟ್ಟದ ಆರೈಕೆಯನ್ನು ಪಡೆದರು. ಸ್ವತಂತ್ರ ಗುಂಪಿನಲ್ಲಿದ್ದವರಿಗೆ 24 ಗಂಟೆಗಳ ಅಂತರದಲ್ಲಿ 200 ಮಿಲಿ ಪ್ಲಾಸ್ಮಾವನ್ನು ಎರಡು ಪ್ರಮಾಣದಲ್ಲಿ ವರ್ಗಾಯಿಸಲಾಯಿತು. ಸ್ವತಂತ್ರ ಮತ್ತು ನಿಯಂತ್ರಣ ಗುಂಪುಗಳನ್ನು 28 ದಿನಗಳ ನಂತರ ಅಧ್ಯಯನ ಮಾಡಲಾಯಿತು.

ಪ್ರಿಪ್ರಿಂಟ್ ಸರ್ವರ್‌ನಲ್ಲಿ ಬಿಡುಗಡೆಯಾದ ಫಲಿತಾಂಶಗಳು, ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಪ್ರತಿ ಗುಂಪಿನಲ್ಲಿಯೂ 17 ರೋಗಿಗಳು ತೀವ್ರ ರೋಗದ ಮಟ್ಟವನ್ನು ಹೊಂದಿದ್ದಾರೆ.

“CP ಬಳಕೆಯು ಉಸಿರಾಟದ ತೊಂದರೆ ಮತ್ತು ಆಯಾಸದ ಪರಿಹಾರವನ್ನು ಸುಧಾರಿಸುತ್ತದೆ ಎಂದು ತೋರುತ್ತದೆಯಾದರೂ, ಇದು 28 ದಿನಗಳ ಮರಣವನ್ನು ಕಡಿಮೆ ಮಾಡಲು ಅಥವಾ ಮಧ್ಯಮ ಮಟ್ಟದ ಕೊರೊನಾ ರೋಗಿಗಳಲ್ಲಿ ತೀವ್ರ ಕಾಯಿಲೆಗೆ ಒಳಗಾಗುವುದನ್ನು ತಡೆಯಲಿಲ್ಲ” ಎಂಬುದನ್ನು ಅಧ್ಯಯನವು ತಿಳಿಸಿದೆ ಎಂದು ICMR ನ ವಿಜ್ಞಾನಿ ಡಾ.ಅಪರ್ಣ ಮುಖರ್ಜಿ ಹೇಳಿದರು.

ಇದನ್ನೂ ಓದಿ:  ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ಹಲವಾರು ರಾಜ್ಯ ಸರ್ಕಾರಗಳು ಪ್ಲಾಸ್ಮಾ ಚಿಕಿತ್ಸೆಯನ್ನು ಸಕ್ರಿಯವಾಗಿ ಉತ್ತೇಜಿಸುತ್ತಿರುವುದರಿಂದ ಈ ಸಂಶೋಧನಾ ಫಲಿತಾಂಶಗಳು ಪ್ರಸ್ತುತ ಸಾಂಕ್ರಾಮಿಕದಲ್ಲಿ ಮಹತ್ವವನ್ನು ಪಡೆದುಕೊಳ್ಳುತ್ತವೆ.

ಏನಿದು ಪ್ಲಾಸ್ಮಾ ಚಿಕಿತ್ಸೆ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಆರಂಭಗೊಂಡು, ಹಲವು ಕಡೆ ಯಶಸ್ವಿಯೂ ಆಗಿದೆ.

ಅದಾಗ್ಯೂ,‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಸ್ವತಃ ICMR ಕರೆ ನೀಡಿತ್ತು. ದೇಶ-ವಿದೇಶಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯಿಂದ ನೂರಾರು ಜನ ರೋಗಿಗಳು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಭಾರತದಲ್ಲಿಯೂ ಸಹ ಸರ್ಕಾರವೇ ಪ್ಲಾಸ್ಮಾ ಚಿಕಿತ್ಸೆಗೆ ಪ್ರೋತ್ಸಾಹವನ್ನು ನೀಡಿತ್ತು. ಕರ್ನಾಟಕದಲ್ಲಿಯೂ ಪ್ಲಾಸ್ಮಾ ಚಿಕಿತ್ಸೆಯನ್ನು ತೃಪ್ತಿದಾಯಕವಾಗಿದೆ, ಹಾಗಾಗಿ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದರು.

ರಾಷ್ಟ್ರೀಯ ಕೋವಿಡ್ -19 ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಇದನ್ನು ತನಿಖಾ ಚಿಕಿತ್ಸೆಯಾಗಿ ಅನುಮತಿಸಿದ ನಂತರ ಕೆಲವರು ಪ್ಲಾಸ್ಮಾ ಬ್ಯಾಂಕುಗಳನ್ನು ಸ್ಥಾಪಿಸಿದ್ದರು.


ಇದನ್ನೂ ಓದಿ: ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...