Homeಕರೋನಾ ತಲ್ಲಣಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ.

- Advertisement -
- Advertisement -

ಪ್ಲಾಸ್ಮಾ ಚಿಕಿತ್ಸೆಯ ಬಗ್ಗೆ ICMR ನಡೆಸಿದ ವಿಶ್ವದ ಅತಿದೊಡ್ಡ ಟ್ರಯಲ್‌ನ ಫಲಿತಾಂಶದ ಪ್ರಕಾರ, ’ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡುವುದಿಲ್ಲ” ಎಂದು ತಿಳಿದುಬಂದಿದೆ. ಇದು ಜಗತ್ತಿನಾದ್ಯಂತ ನೀತಿನಿರೂಪಕರು, ವೈದ್ಯರು, ರೋಗಿಗಳು ಮತ್ತು ಅವರ ಕುಟುಂಬದವರ ಭರವಸೆಯನ್ನು ಹುಸಿಗೊಳಿಸಿದೆ.

PLACID ಎಂದು ಕರೆಯಲ್ಪಡುವ ಈ ಪ್ರಯೋಗವನ್ನು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 39 ಆಸ್ಪತ್ರೆಗಳಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಆಶ್ರಯದಲ್ಲಿ ನಡೆಸಲಾಯಿತು.

ಅಧ್ಯಯನವು, ಉಸಿರಾಟದ ತೊಂದರೆ ಇರುವ ಮತ್ತು ಆಮ್ಲಜನಕದ ಶುದ್ಧಿಯ ಮಟ್ಟವು 93% ಕ್ಕಿಂತ ಕಡಿಮೆ ಇರುವ 464 ಮಧ್ಯಮ ಮಟ್ಟದ ಅನಾರೋಗ್ಯದ ರೋಗಿಗಳನ್ನು ಒಳಗೊಂಡಿತ್ತು. ಅವುಗಳಲ್ಲಿ, 235 ಜನರಿಗೆ ರೋಗದ ವಿರುದ್ಧ ಪ್ರತಿಕಾಯಗಳನ್ನು ಹೊಂದಿರುವವರಿಗೆ, ಚೇತರಿಸಿಕೊಂಡವರಿಂದ ಸಂಗ್ರಹಿಸಿದ ’CP’ (convalescent plasma) ನೀಡಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಉಳಿದ 229 ಮಂದಿ ಕೇವಲ ಗುಣಮಟ್ಟದ ಆರೈಕೆಯನ್ನು ಪಡೆದರು. ಸ್ವತಂತ್ರ ಗುಂಪಿನಲ್ಲಿದ್ದವರಿಗೆ 24 ಗಂಟೆಗಳ ಅಂತರದಲ್ಲಿ 200 ಮಿಲಿ ಪ್ಲಾಸ್ಮಾವನ್ನು ಎರಡು ಪ್ರಮಾಣದಲ್ಲಿ ವರ್ಗಾಯಿಸಲಾಯಿತು. ಸ್ವತಂತ್ರ ಮತ್ತು ನಿಯಂತ್ರಣ ಗುಂಪುಗಳನ್ನು 28 ದಿನಗಳ ನಂತರ ಅಧ್ಯಯನ ಮಾಡಲಾಯಿತು.

ಪ್ರಿಪ್ರಿಂಟ್ ಸರ್ವರ್‌ನಲ್ಲಿ ಬಿಡುಗಡೆಯಾದ ಫಲಿತಾಂಶಗಳು, ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಪ್ರತಿ ಗುಂಪಿನಲ್ಲಿಯೂ 17 ರೋಗಿಗಳು ತೀವ್ರ ರೋಗದ ಮಟ್ಟವನ್ನು ಹೊಂದಿದ್ದಾರೆ.

“CP ಬಳಕೆಯು ಉಸಿರಾಟದ ತೊಂದರೆ ಮತ್ತು ಆಯಾಸದ ಪರಿಹಾರವನ್ನು ಸುಧಾರಿಸುತ್ತದೆ ಎಂದು ತೋರುತ್ತದೆಯಾದರೂ, ಇದು 28 ದಿನಗಳ ಮರಣವನ್ನು ಕಡಿಮೆ ಮಾಡಲು ಅಥವಾ ಮಧ್ಯಮ ಮಟ್ಟದ ಕೊರೊನಾ ರೋಗಿಗಳಲ್ಲಿ ತೀವ್ರ ಕಾಯಿಲೆಗೆ ಒಳಗಾಗುವುದನ್ನು ತಡೆಯಲಿಲ್ಲ” ಎಂಬುದನ್ನು ಅಧ್ಯಯನವು ತಿಳಿಸಿದೆ ಎಂದು ICMR ನ ವಿಜ್ಞಾನಿ ಡಾ.ಅಪರ್ಣ ಮುಖರ್ಜಿ ಹೇಳಿದರು.

ಇದನ್ನೂ ಓದಿ:  ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ಹಲವಾರು ರಾಜ್ಯ ಸರ್ಕಾರಗಳು ಪ್ಲಾಸ್ಮಾ ಚಿಕಿತ್ಸೆಯನ್ನು ಸಕ್ರಿಯವಾಗಿ ಉತ್ತೇಜಿಸುತ್ತಿರುವುದರಿಂದ ಈ ಸಂಶೋಧನಾ ಫಲಿತಾಂಶಗಳು ಪ್ರಸ್ತುತ ಸಾಂಕ್ರಾಮಿಕದಲ್ಲಿ ಮಹತ್ವವನ್ನು ಪಡೆದುಕೊಳ್ಳುತ್ತವೆ.

ಏನಿದು ಪ್ಲಾಸ್ಮಾ ಚಿಕಿತ್ಸೆ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಆರಂಭಗೊಂಡು, ಹಲವು ಕಡೆ ಯಶಸ್ವಿಯೂ ಆಗಿದೆ.

ಅದಾಗ್ಯೂ,‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಸ್ವತಃ ICMR ಕರೆ ನೀಡಿತ್ತು. ದೇಶ-ವಿದೇಶಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯಿಂದ ನೂರಾರು ಜನ ರೋಗಿಗಳು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಭಾರತದಲ್ಲಿಯೂ ಸಹ ಸರ್ಕಾರವೇ ಪ್ಲಾಸ್ಮಾ ಚಿಕಿತ್ಸೆಗೆ ಪ್ರೋತ್ಸಾಹವನ್ನು ನೀಡಿತ್ತು. ಕರ್ನಾಟಕದಲ್ಲಿಯೂ ಪ್ಲಾಸ್ಮಾ ಚಿಕಿತ್ಸೆಯನ್ನು ತೃಪ್ತಿದಾಯಕವಾಗಿದೆ, ಹಾಗಾಗಿ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದರು.

ರಾಷ್ಟ್ರೀಯ ಕೋವಿಡ್ -19 ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಇದನ್ನು ತನಿಖಾ ಚಿಕಿತ್ಸೆಯಾಗಿ ಅನುಮತಿಸಿದ ನಂತರ ಕೆಲವರು ಪ್ಲಾಸ್ಮಾ ಬ್ಯಾಂಕುಗಳನ್ನು ಸ್ಥಾಪಿಸಿದ್ದರು.


ಇದನ್ನೂ ಓದಿ: ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...