Homeಕರ್ನಾಟಕಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಹೋರಾಟಗಾರ ಕೆ.ಎಲ್‌. ಅಶೋಕ್‌‌ಗೆ ನಿಂದನೆ: ರಾಜ್ಯದಾದ್ಯಂತ ಖಂಡನೆ; ಪೊಲೀಸರ ಅಮಾನತಿಗೆ ಆಗ್ರಹ

ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿದೆ.

- Advertisement -
- Advertisement -

ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಕೆ. ಎಲ್. ಅಶೋಕ್ ಮತ್ತು ಅವರ ಕುಟುಂಬ ಸದಸ್ಯರನ್ನು ಟ್ರಾಫಿಕ್ ನಿಯಮ ಉಲ್ಲಂಘನೆಯ ನೆಪದಲ್ಲಿ ಕೊಪ್ಪ ಪೊಲೀಸರು ಅವಮಾನಿಸಿರುವುದು ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಘಟನೆಯನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ತಮ್ಮ ಕರ್ತವ್ಯ ದಲ್ಲಿ ಲೋಪವೆಸಗಿ ಅಶೋಕ್ ಮತ್ತು ಕಾರಿನಲ್ಲಿದ್ದ ಅವರ ಕುಟುಂಬ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಹಾಗೂ ಆ ಮೂಲಕ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿರುವ ಪೇದೆ ಹಾಗೂ ಎಸ್ ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಹಲವಾರು ಸಂಘಟನೆಗಳು ಆಗ್ರಹಿಸಿದೆ.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

“ಇಂತಹ ಕ್ಷುಲ್ಲಕ ಕುತಂತ್ರಗಳಿಂದ ಭಿನ್ನಮತಗಳನ್ನು ಮಟ್ಟಹಾಕಬಹುದು ಎಂದು ಈ ಪೊಲೀಸರು ಭಾವಿಸಿದ್ದಲ್ಲಿ ಅವರು ಖಾಕಿ ಧರಿಸಲು ಅಯೋಗ್ಯರು ಎಂದೇ ಅರ್ಥ. ಇಂತಹ ಜನಕ್ಕೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂಬುದು ಶೀಘ್ರದಲ್ಲೇ ಅರಿವಾಗುವಂತೆ ಮಾಡುವುದು ಜಿಲ್ಲಾ ಎಸ್ ಪಿ ಯವರ ನೈತಿಕ ಜವಾಬ್ದಾರಿಯೂ ಆಗಿದೆ” ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಲೋಲಾಕ್ಷ ಹೇಳಿದ್ದಾರೆ.

ವಿಜಯಪುರದಲ್ಲಿ ಜನಶಕ್ತಿ, ಮಹಿಳಾ ಮುನ್ನಡೆ, ಕೋಮು ಸೌಹಾರ್ದ ವೇದಿಕೆ, ನಾವೂ ಭಾರತೀಯರು ವೇದಿಕೆ ಜಂಟಿಯಾಗಿ ವಿಜಯಪುರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಕಿರುಕುಳ ನೀಡಿದ ಪೊಲೀಸರ ವಿರುದ್ದ ಕ್ರಮಕೈಗೊಳ್ಳವಂತೆ ಕೇಳಿಕೊಳ್ಳಲಾಯಿತು.

ಹೋರಾಟಗಾರ ಮತ್ತು ಕಾರಿನಲ್ಲಿದ್ದ ಅವರ ಕುಟುಂಬದ ಸದಸ್ಯರ ಘನತೆಗೆ ಚ್ಯುತಿ ತಂದಿರುವ ಪೇದೆ ಹಾಗೂ ಎಸ್ಐ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕೆಂದು ಚಿಕ್ಕಮಗಳೂರಿನಲ್ಲಿ ಕೂಡಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಪೀಪಲ್ ಲಾಯರ್ಸ್ ಗಿಲ್ಡ್ ಬೆಂಗಳೂರು ಘಟನೆಯನ್ನು ಖಂಡಿಸಿದ್ದು, ಇದರ ರಾಜ್ಯ ಸಂಚಾಲಕ ಕೆ.ಕೆ.ವಕೀಲ “ಇಂತಹ ಘಟನೆ ಸಮಾಜದಲ್ಲಿ ಜನಸಾಮಾನ್ಯರು ಪೊಲೀಸರ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳುವಂತಾಗುತ್ತದೆ ಇಂತಹ ದುರಂಕಾರಿ ಪೊಲೀಸರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಪೊಲೀಸರಿಂದ ಇಡೀ ಪೊಲೀಸ್ ಸಮೂಹಕ್ಕೆ ಕಪ್ಪುಚುಕ್ಕೆ ಯಾಗಿರುತ್ತದೆ. ಅಶೋಕ್‌ರವರು ತಮ್ಮ ಜೀವನಪೂರ್ತಿ ಬಡ, ನಿರ್ಗತಿಕ, ಅಲ್ಪಸಂಖ್ಯಾತರ, ದಲಿತ ಮತ್ತು ಮಹಿಳೆಯರ ಪರ ಹೋರಾಟ ಮಾಡಿಕೊಂಡು ಬಂದಂತಹ ವ್ಯಕ್ತಿಯಾಗಿದ್ದು ಅವರ ಕುಟುಂಬದ ಸಮ್ಮುಖದಲ್ಲೆ ಸಣ್ಣ ವಿಚಾರವಾಗಿ ಕೆಟ್ಟ ಶಬ್ದ ಉಪಯೋಗಿಸಿ ನಿಂದಿಸಿರುವುದು ಪೊಲೀಸ್ ಗೂಂಡಾಗಿರಿಯಾಗಿರುತ್ತದೆ. ಪೊಲೀಸರ ವರ್ತನೆ ಹೀಗೆ ಮುಂದುವರಿದರೆ ಮುಂದೊಂದು ದಿನ ಪೊಲೀಸರ ವಿರುದ್ಧ ಜನ ತಿರುಗಿ ಬೀಳುವುದರಲ್ಲಿ ಅನುಮಾನ ಇಲ್ಲ ಆದ್ದರಿಂದ ಪೊಲೀಸ್ ವರಿಷ್ಠಾಧಿಕಾರಿಯವರು ದುರಹಂಕಾರಿ ಕೊಪ್ಪ ಪಿ.ಎಸ್.ಐ ಮತ್ತು ಕಾನ್ ಸ್ಟೇಬಲ್ ಅವರನ್ನು ತಕ್ಷಣವೇ ಅಮಾನತು ಮಾಡಿ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಶಿಕ್ಷೆಗೆ ಗುರಿ ಮಾಡಬೇಕು ಇಲ್ಲದಿದ್ದರೆ ನಾವು ಎಲ್ಲಾ ರೀತಿಯ ಕಾನೂನು ಹೋರಾಟ ಮಾಡಬೇಕಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...