Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...