Homeಅಂಕಣಗಳುಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

ಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

- Advertisement -
- Advertisement -

ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಟ್ಟಾಗ ನಾನು ಪತ್ರಕರ್ತರ ಸಂಘಕ್ಕೆ ಅಧ್ಯಕ್ಷನಾಗಿದ್ದೆ. 1932ರಲ್ಲಿ ಡಿ.ವಿ.ಗುಂಡಪ್ಪನವರ ಅಧ್ಯಕ್ಷತೆಯಲ್ಲಿ ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಆರಂಭವಾಯಿತು. ವಿಶ್ವ ಕರ್ನಾಟಕ ಪತ್ರಿಕೆಯ ಸಂಪಾದಕರಾದ ತಿರುಮಲೆ ತಾತಾಚಾರ್ಯ ಶರ್ಮರು ಆ ಸಂಸ್ಥೆಯ ಪ್ರಥಮ ಕಾರ್ಯದರ್ಶಿ. ಈ ಸಂಘಕ್ಕೆ ಘಟಾನುಘಟಿಗಳು ಅಧ್ಯಕ್ಷರಾಗಿದ್ದರು. ಈ ಸಂಘ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘವಾಗಿ ಮಾರ್ಪಟ್ಟ ಮೇಲೂ ಪೋತನ್ ಜೋಸೆಫ್, ಸೀತಾರಾಮ ಶಾಸ್ತ್ರಿ, ಜಯಶೀಲರಾವ್, ಗಂಗಾಧರ ಮೊದಲಿಯಾರ್, ಕೆ.ಎಂ.ನಾಗರಾಜ್ ಮುಂತಾದ ಖ್ಯಾತ ಪತ್ರಿಕೋದ್ಯಮಿಗಳು ಸಂಘದ ಅಧ್ಯಕ್ಷರಾಗಿದ್ದು ಸಂಘವನ್ನು ಉಜ್ಛ್ರಾಯ ಸ್ಥಿತಿಗೆ ತಂದರು. ಆದರೆ ಕಳೆದ 4-6 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ತನ್ನ ಕೈವಶದಲ್ಲಿ ಇಟ್ಟುಕೊಂಡು ಕಾನೂನು ಕಟ್ಟಲೆಗಳನ್ನೆಲ್ಲವನ್ನೂ ಗಾಳಿಗೆ ತೂರಿ ಲಕ್ಷಾಂತರ ರೂಪಾಯಿಗಳನ್ನು ಗುಳುಂ ಮಾಡಿದ ರಾಜು ಎಂಬಾತ ಘನತೆವೆತ್ತ ಪತ್ರಕರ್ತರ ಸಂಘವನ್ನು ಅಧೋಗತಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮಧ್ಯೆ ಹಲಸೂರು ಪೋಲೀಸ್ ಠಾಣೆಗೆ 25-09-2018ರಲ್ಲಿ ಬಂಗಲೆ ಮಲ್ಲಿಕಾರ್ಜುನ ಎಂಬ ಹೆಸರಿನ ಸಂಘದ ಸದಸ್ಯರು `ಅಧ್ಯಕ್ಷರಾಗಿರುವ ರಾಜು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2013ರಿಂದ 17ರವರೆಗೆ ಮತ್ತು 2018 ರಿಂದ 2021ರವರೆಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಸಂಘದ ನಿಶ್ಚಿತ ಠೇವಣಿ ಹಣ ಮತ್ತು ಇತರೆ ಬಾಬ್ತು ಹಣದ ದುರುಪಯೋಗ ಪಡಿಸಿಕೊಂಡಿದ್ದಾರೆ’ ಎಂದು ಆರೋಪ ಮಾಡಿ ದೂರು ಸಲ್ಲಿಸಿದರು. ಈ ಆರೋಪದ ಹಿನ್ನೆಲೆಯಲ್ಲಿ ಪೋಲೀಸರು ಕೇಸ್ ನಂ.0226/2018ನ್ನು ದಾಖಲೆ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜುರವರ ಮೇಲೆ 12/05/2004 ಚಿಕ್ಕಮಗಳೂರಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 406/2008ರ ಅನ್ವಯ ಕ್ರಿಮಿನಲ್ ಪ್ರಕರಣ ಒಂದರಲ್ಲಿ 3 ತಿಂಗಳ ಶಿಕ್ಷೆ ಆಗಿರುವುದಾಗಿ ತಿಳಿದು ಬಂದಿದೆ. ಈ ಕಾರಣಕ್ಕಾಗಿ ರಾಜುರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಕಾರ್ಯಕಾರಣಿ ಸಮಿತಿ 5.10.2018ರಂದು ಸಭೆ ಸೇರಿ ರಾಜುರವರ ರಾಜೀನಾಮೆಯನ್ನು ಅಂಗೀಕರಿಸಿ ಶಿವಾನಂದ ತಗಡೂರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತು. ಅಲ್ಲದೇ ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ದುರ್ಬಳಕೆಯ ಬಗೆಗೆ ಲೆಕ್ಕ ಸಂಶೋಧನೆ ಮಾಡುವಂತೆ ಗುಡಿಹಳ್ಳಿ ನಾಗರಾಜ್ ಅಧ್ಯಕ್ಷತೆಯಲ್ಲಿ ಸಿ.ಕೆ.ಮಹೇಂದ್ರ, ರವಿಕುಮಾರ್, ರಮೇಶ್ ಕುಟ್ಟಪ್ಪ, ಗಣಪತಿ ಗಂಗೊಳ್ಳಿ ಮೊದಲಾದವರ ಸಮಿತಿ ರಚಿಸಿದ್ದಾರೆ. ಈ ಸಮಿತಿ ಕೂಲಂಕುಶವಾಗಿ ಲೆಕ್ಕ ಸಂಶೋಧನೆ ಮಾಡಿ ವರದಿ ಸಲ್ಲಿಸಿದೆ.
ಈ ವರದಿಯ ಸಾರಾಂಶ ಹೀಗಿದೆ. ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ಹಣಕಾಸು ಅವ್ಯವಹಾರಗಳು ನಡೆಸಿರುವುದು ಮೇಲ್ನೋಟಕ್ಕೆ ಕಂಡು¨ರುತ್ತದೆ. ಇದರಲ್ಲಿ ರಾಜುರವರ ಪಾತ್ರವು ನೇರವಾಗಿ ಕಂಡುಬರುತ್ತದೆ. ಜೊತೆಗೆ ಈ ಅವ್ಯವಹಾರಗಳಿಗೆ ಸಂಘದ ಪ್ರಧಾನ(ಧನ) ಕಾರ್ಯದರ್ಶಿ ಕೆ.ಜೆ.ಭೀಮನಗೌಡ ಹಾಗೂ ಖಜಾಂಚಿ ಕೂಡ ಜವಾಬ್ಧಾರರು ಎಂದು ಈ ವಿಚಾರಣಾ ಸಮಿತಿ ಅಭಿಪ್ರಾಯಪಟ್ಟಿದೆ. 2014-15ನೇ ಸಾಲಿನಲ್ಲಿ ಅಧ್ಯಕ್ಷ ರಾಜುರವರು ಪ್ರಯಾಣ ಭತ್ಯೆಯಾಗಿ 2,66,200 ರೂಗಳನ್ನು 2017-18ನೇ ಸಾಲಿನ ಲೆಕ್ಕಪತ್ರದಲ್ಲಿ 8,61,777 ರೂಗಳನ್ನೂ ಬಳಕೆ ಮಾಡಿಕೊಂಡಿದ್ದಾರೆ. ಈ ಮೂರು ಅವಧಿಯಲ್ಲಿ ರಾಜು ಭಾರೀ ಮೊತ್ತದ ಸಂಚಾರ ವೆಚ್ಚ ಮಾಡಿರುವುದು ಸೂಕ್ತವಲ್ಲ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.
ರಾಜು ನಿವೇಶನಕ್ಕಾಗಿ ಎಂದು ಹೇಳಿ ಬ್ಯಾಂಕುಗಳಿಂದ 26 ಲಕ್ಷ ರೂಗಳನ್ನು ತೆಗೆದಿದ್ದಾರೆ. ಸಂಘಕ್ಕೆ ನಿವೇಶನ ನೀಡಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿ ಸರ್ಕಾರ 20 ಗುಂಟೆ ಜಮೀನನ್ನು ನೀಡಲೂ ನಿರ್ಧರಿಸಿದೆ. ಆದರೆ ಈವರೆಗೆ ಸರ್ಕಾರದಿಂದ ಮಂಜೂರಾತಿ ಪತ್ರ ಸಂಘಕ್ಕೆ ಬಂದಿಲ್ಲ. ಕ್ರಯಪತ್ರ ರಿಜಿಸ್ಟಾರ್ ಆಗಿಲ್ಲ. ಸರ್ಕಾರ ಪುಕ್ಕಟ್ಟೆ ನಿವೇಶನ ಕೊಟ್ಟಿದ್ದರು ರಾಜುರವರು 26 ಲಕ್ಷ ರೂಗಳನ್ನು ನಿವೇಶನಕ್ಕಾಗಿ ಪಡೆದಿದ್ದಾರೆ. ನಿವೇಶನವನ್ನು ರಾಜು ಕೊಂಡುಕೊಂಡರೇ? ಹೇಗೆ?
ಹಾಸನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಮ್ಮೇಳನ ನಡೆಯಿತು. ಈ ಸಮ್ಮೇಳನಕ್ಕೆ ಸರ್ಕಾರ 10 ಲಕ್ಷ ರೂಪಾಯಿ ನೀಡಿತ್ತು. ಸಮ್ಮೇಳನದ ಖರ್ಚಿಗೆಂದು ಶ್ರವಣಬೆಳಗೊಳದ ಜೈನಮಠ ಹಣ ನೀಡಿದೆ. ಹೀಗಿದ್ದರೂ ರಾಜುರವರು 11,39,949 ರೂಗಳನ್ನು ಸಂಘ ಅಧಿವೇಶನಕ್ಕೆ ಖರ್ಚು ಮಾಡಿರುವುದಾಗಿ ಲೆಕ್ಕ ಬರೆದಿದ್ದಾರೆ. ಸಂಘ ಅಧಿವೇಶನಕ್ಕಾಗಿ ಖರ್ಚು ಮಾಡಿದ ಬಗೆಗೆ ಒಂದು ವೋಚರೂ ಇಲ್ಲ ಎಂದು ತನಿಖಾ ತಂಡ ವರದಿ ಮಾಡಿದೆ. ಮೇಲ್ನೋಟಕ್ಕೆ ಹಣ ದುರುಪಯೋಗವಾದಂತೆ ಕಂಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಫಿಕ್ಸೆಡ್ ಡೆಪಾಸಿಟ್ ಹಣವನ್ನು ಅವಧಿ ಮುಗಿಯುವವರೆಗೂ ಬ್ಯಾಂಕಿನಿಂದ ತೆಗೆಯುವಂತಿಲ್ಲ ಆದರೆ ರಾಜುರವರು ಅನೇಕ ಠೇವಣಿ ಹಣವನ್ನು ಹಿಂತೆಗೆಯುವ ಚಾಳಿ ಬೆಳೆಸಿಕೊಂಡಿದ್ದರು.
ಹೀಗೆ ಕಾನೂನಿನ ಭಯವೂ ಇಲ್ಲದೆ ಸೆರೆಮನೆಗೆ ಹೋಗಬೇಕಾದ ಪ್ರಮೇಯ ಬರಬಹುದು ಎಂಬ ಪ್ರಜ್ಞೆಯೂ ಇಲ್ಲದೆ ಹುಂಬರಂತೆ ಸಂಘದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಶಾಸಕರಿಂದ ಶಾಸಕರ ನಿಧಿಯಲ್ಲಿ 2017-18 ಸಾಲಿನಲ್ಲಿ ಕೆ.ಜೆ.ಜಾರ್ಜ್‍ರವರು 5 ಲಕ್ಷ, ಕೆ.ಎಸ್.ಈಶ್ವರಪ್ಪನವರು 3 ಲಕ್ಷ, ವಿನಯ್ ಕುಲಕರ್ಣಿ ಒಂದು ಲಕ್ಷ, ಸಿ.ಪಿ.ಯೋಗೀಶ್ವರ್ 2.5 ಲಕ್ಷ ದೇಣಿಗೆ ನೀಡಿದ್ದಾರೆ.
ಹಲಸೂರು ಠಾಣೆಯ ಪೊಲೀಸ್ ಅಧಿಕಾರಿಗಳು ರಾಜುರವರನ್ನು ಬಂಧಿಸಿದ್ದರು. ಈಗ ರಾಜು ಹೈಕೋರ್ಟ್‍ನ ಮೊರೆ ಹೋಗಿದ್ದಾರೆ. ಸಂಘದ ಹಣ ನುಂಗಿರುವ ರಾಜುರವರಿಗೆ ಹೈಕೋರ್ಟ್‍ನಲ್ಲಿ ರಕ್ಷಣೆ ಸಿಗಬಾರದು. ಪತ್ರಕರ್ತರ ಸಂಘದಂತಹ ಘನತೆವೆತ್ತ ಸಂಸ್ಥೆಯಲ್ಲಿ ಈ ಹಗಲು ದರೋಡೆ ನಡೆದಿರುವುದು ಲಜ್ಬಾಸ್ಪದ ವಿಚಾರವಾಗಿದೆ. ಪೊಲೀಸರು ನಿಷ್ಠೆಯಿಂದ ನಡೆದುಕೊಂಡು ರಾಜುನಂತಹ ಹಗಲು ದರೋಡೆಕೋರರಿಗೆ ಪಾಠ ಕಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...