Homeಅಂಕಣಗಳುಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

ಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

- Advertisement -
- Advertisement -

ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಟ್ಟಾಗ ನಾನು ಪತ್ರಕರ್ತರ ಸಂಘಕ್ಕೆ ಅಧ್ಯಕ್ಷನಾಗಿದ್ದೆ. 1932ರಲ್ಲಿ ಡಿ.ವಿ.ಗುಂಡಪ್ಪನವರ ಅಧ್ಯಕ್ಷತೆಯಲ್ಲಿ ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಆರಂಭವಾಯಿತು. ವಿಶ್ವ ಕರ್ನಾಟಕ ಪತ್ರಿಕೆಯ ಸಂಪಾದಕರಾದ ತಿರುಮಲೆ ತಾತಾಚಾರ್ಯ ಶರ್ಮರು ಆ ಸಂಸ್ಥೆಯ ಪ್ರಥಮ ಕಾರ್ಯದರ್ಶಿ. ಈ ಸಂಘಕ್ಕೆ ಘಟಾನುಘಟಿಗಳು ಅಧ್ಯಕ್ಷರಾಗಿದ್ದರು. ಈ ಸಂಘ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘವಾಗಿ ಮಾರ್ಪಟ್ಟ ಮೇಲೂ ಪೋತನ್ ಜೋಸೆಫ್, ಸೀತಾರಾಮ ಶಾಸ್ತ್ರಿ, ಜಯಶೀಲರಾವ್, ಗಂಗಾಧರ ಮೊದಲಿಯಾರ್, ಕೆ.ಎಂ.ನಾಗರಾಜ್ ಮುಂತಾದ ಖ್ಯಾತ ಪತ್ರಿಕೋದ್ಯಮಿಗಳು ಸಂಘದ ಅಧ್ಯಕ್ಷರಾಗಿದ್ದು ಸಂಘವನ್ನು ಉಜ್ಛ್ರಾಯ ಸ್ಥಿತಿಗೆ ತಂದರು. ಆದರೆ ಕಳೆದ 4-6 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ತನ್ನ ಕೈವಶದಲ್ಲಿ ಇಟ್ಟುಕೊಂಡು ಕಾನೂನು ಕಟ್ಟಲೆಗಳನ್ನೆಲ್ಲವನ್ನೂ ಗಾಳಿಗೆ ತೂರಿ ಲಕ್ಷಾಂತರ ರೂಪಾಯಿಗಳನ್ನು ಗುಳುಂ ಮಾಡಿದ ರಾಜು ಎಂಬಾತ ಘನತೆವೆತ್ತ ಪತ್ರಕರ್ತರ ಸಂಘವನ್ನು ಅಧೋಗತಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮಧ್ಯೆ ಹಲಸೂರು ಪೋಲೀಸ್ ಠಾಣೆಗೆ 25-09-2018ರಲ್ಲಿ ಬಂಗಲೆ ಮಲ್ಲಿಕಾರ್ಜುನ ಎಂಬ ಹೆಸರಿನ ಸಂಘದ ಸದಸ್ಯರು `ಅಧ್ಯಕ್ಷರಾಗಿರುವ ರಾಜು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2013ರಿಂದ 17ರವರೆಗೆ ಮತ್ತು 2018 ರಿಂದ 2021ರವರೆಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಸಂಘದ ನಿಶ್ಚಿತ ಠೇವಣಿ ಹಣ ಮತ್ತು ಇತರೆ ಬಾಬ್ತು ಹಣದ ದುರುಪಯೋಗ ಪಡಿಸಿಕೊಂಡಿದ್ದಾರೆ’ ಎಂದು ಆರೋಪ ಮಾಡಿ ದೂರು ಸಲ್ಲಿಸಿದರು. ಈ ಆರೋಪದ ಹಿನ್ನೆಲೆಯಲ್ಲಿ ಪೋಲೀಸರು ಕೇಸ್ ನಂ.0226/2018ನ್ನು ದಾಖಲೆ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜುರವರ ಮೇಲೆ 12/05/2004 ಚಿಕ್ಕಮಗಳೂರಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 406/2008ರ ಅನ್ವಯ ಕ್ರಿಮಿನಲ್ ಪ್ರಕರಣ ಒಂದರಲ್ಲಿ 3 ತಿಂಗಳ ಶಿಕ್ಷೆ ಆಗಿರುವುದಾಗಿ ತಿಳಿದು ಬಂದಿದೆ. ಈ ಕಾರಣಕ್ಕಾಗಿ ರಾಜುರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಕಾರ್ಯಕಾರಣಿ ಸಮಿತಿ 5.10.2018ರಂದು ಸಭೆ ಸೇರಿ ರಾಜುರವರ ರಾಜೀನಾಮೆಯನ್ನು ಅಂಗೀಕರಿಸಿ ಶಿವಾನಂದ ತಗಡೂರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತು. ಅಲ್ಲದೇ ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ದುರ್ಬಳಕೆಯ ಬಗೆಗೆ ಲೆಕ್ಕ ಸಂಶೋಧನೆ ಮಾಡುವಂತೆ ಗುಡಿಹಳ್ಳಿ ನಾಗರಾಜ್ ಅಧ್ಯಕ್ಷತೆಯಲ್ಲಿ ಸಿ.ಕೆ.ಮಹೇಂದ್ರ, ರವಿಕುಮಾರ್, ರಮೇಶ್ ಕುಟ್ಟಪ್ಪ, ಗಣಪತಿ ಗಂಗೊಳ್ಳಿ ಮೊದಲಾದವರ ಸಮಿತಿ ರಚಿಸಿದ್ದಾರೆ. ಈ ಸಮಿತಿ ಕೂಲಂಕುಶವಾಗಿ ಲೆಕ್ಕ ಸಂಶೋಧನೆ ಮಾಡಿ ವರದಿ ಸಲ್ಲಿಸಿದೆ.
ಈ ವರದಿಯ ಸಾರಾಂಶ ಹೀಗಿದೆ. ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ಹಣಕಾಸು ಅವ್ಯವಹಾರಗಳು ನಡೆಸಿರುವುದು ಮೇಲ್ನೋಟಕ್ಕೆ ಕಂಡು¨ರುತ್ತದೆ. ಇದರಲ್ಲಿ ರಾಜುರವರ ಪಾತ್ರವು ನೇರವಾಗಿ ಕಂಡುಬರುತ್ತದೆ. ಜೊತೆಗೆ ಈ ಅವ್ಯವಹಾರಗಳಿಗೆ ಸಂಘದ ಪ್ರಧಾನ(ಧನ) ಕಾರ್ಯದರ್ಶಿ ಕೆ.ಜೆ.ಭೀಮನಗೌಡ ಹಾಗೂ ಖಜಾಂಚಿ ಕೂಡ ಜವಾಬ್ಧಾರರು ಎಂದು ಈ ವಿಚಾರಣಾ ಸಮಿತಿ ಅಭಿಪ್ರಾಯಪಟ್ಟಿದೆ. 2014-15ನೇ ಸಾಲಿನಲ್ಲಿ ಅಧ್ಯಕ್ಷ ರಾಜುರವರು ಪ್ರಯಾಣ ಭತ್ಯೆಯಾಗಿ 2,66,200 ರೂಗಳನ್ನು 2017-18ನೇ ಸಾಲಿನ ಲೆಕ್ಕಪತ್ರದಲ್ಲಿ 8,61,777 ರೂಗಳನ್ನೂ ಬಳಕೆ ಮಾಡಿಕೊಂಡಿದ್ದಾರೆ. ಈ ಮೂರು ಅವಧಿಯಲ್ಲಿ ರಾಜು ಭಾರೀ ಮೊತ್ತದ ಸಂಚಾರ ವೆಚ್ಚ ಮಾಡಿರುವುದು ಸೂಕ್ತವಲ್ಲ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.
ರಾಜು ನಿವೇಶನಕ್ಕಾಗಿ ಎಂದು ಹೇಳಿ ಬ್ಯಾಂಕುಗಳಿಂದ 26 ಲಕ್ಷ ರೂಗಳನ್ನು ತೆಗೆದಿದ್ದಾರೆ. ಸಂಘಕ್ಕೆ ನಿವೇಶನ ನೀಡಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿ ಸರ್ಕಾರ 20 ಗುಂಟೆ ಜಮೀನನ್ನು ನೀಡಲೂ ನಿರ್ಧರಿಸಿದೆ. ಆದರೆ ಈವರೆಗೆ ಸರ್ಕಾರದಿಂದ ಮಂಜೂರಾತಿ ಪತ್ರ ಸಂಘಕ್ಕೆ ಬಂದಿಲ್ಲ. ಕ್ರಯಪತ್ರ ರಿಜಿಸ್ಟಾರ್ ಆಗಿಲ್ಲ. ಸರ್ಕಾರ ಪುಕ್ಕಟ್ಟೆ ನಿವೇಶನ ಕೊಟ್ಟಿದ್ದರು ರಾಜುರವರು 26 ಲಕ್ಷ ರೂಗಳನ್ನು ನಿವೇಶನಕ್ಕಾಗಿ ಪಡೆದಿದ್ದಾರೆ. ನಿವೇಶನವನ್ನು ರಾಜು ಕೊಂಡುಕೊಂಡರೇ? ಹೇಗೆ?
ಹಾಸನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಮ್ಮೇಳನ ನಡೆಯಿತು. ಈ ಸಮ್ಮೇಳನಕ್ಕೆ ಸರ್ಕಾರ 10 ಲಕ್ಷ ರೂಪಾಯಿ ನೀಡಿತ್ತು. ಸಮ್ಮೇಳನದ ಖರ್ಚಿಗೆಂದು ಶ್ರವಣಬೆಳಗೊಳದ ಜೈನಮಠ ಹಣ ನೀಡಿದೆ. ಹೀಗಿದ್ದರೂ ರಾಜುರವರು 11,39,949 ರೂಗಳನ್ನು ಸಂಘ ಅಧಿವೇಶನಕ್ಕೆ ಖರ್ಚು ಮಾಡಿರುವುದಾಗಿ ಲೆಕ್ಕ ಬರೆದಿದ್ದಾರೆ. ಸಂಘ ಅಧಿವೇಶನಕ್ಕಾಗಿ ಖರ್ಚು ಮಾಡಿದ ಬಗೆಗೆ ಒಂದು ವೋಚರೂ ಇಲ್ಲ ಎಂದು ತನಿಖಾ ತಂಡ ವರದಿ ಮಾಡಿದೆ. ಮೇಲ್ನೋಟಕ್ಕೆ ಹಣ ದುರುಪಯೋಗವಾದಂತೆ ಕಂಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಫಿಕ್ಸೆಡ್ ಡೆಪಾಸಿಟ್ ಹಣವನ್ನು ಅವಧಿ ಮುಗಿಯುವವರೆಗೂ ಬ್ಯಾಂಕಿನಿಂದ ತೆಗೆಯುವಂತಿಲ್ಲ ಆದರೆ ರಾಜುರವರು ಅನೇಕ ಠೇವಣಿ ಹಣವನ್ನು ಹಿಂತೆಗೆಯುವ ಚಾಳಿ ಬೆಳೆಸಿಕೊಂಡಿದ್ದರು.
ಹೀಗೆ ಕಾನೂನಿನ ಭಯವೂ ಇಲ್ಲದೆ ಸೆರೆಮನೆಗೆ ಹೋಗಬೇಕಾದ ಪ್ರಮೇಯ ಬರಬಹುದು ಎಂಬ ಪ್ರಜ್ಞೆಯೂ ಇಲ್ಲದೆ ಹುಂಬರಂತೆ ಸಂಘದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಶಾಸಕರಿಂದ ಶಾಸಕರ ನಿಧಿಯಲ್ಲಿ 2017-18 ಸಾಲಿನಲ್ಲಿ ಕೆ.ಜೆ.ಜಾರ್ಜ್‍ರವರು 5 ಲಕ್ಷ, ಕೆ.ಎಸ್.ಈಶ್ವರಪ್ಪನವರು 3 ಲಕ್ಷ, ವಿನಯ್ ಕುಲಕರ್ಣಿ ಒಂದು ಲಕ್ಷ, ಸಿ.ಪಿ.ಯೋಗೀಶ್ವರ್ 2.5 ಲಕ್ಷ ದೇಣಿಗೆ ನೀಡಿದ್ದಾರೆ.
ಹಲಸೂರು ಠಾಣೆಯ ಪೊಲೀಸ್ ಅಧಿಕಾರಿಗಳು ರಾಜುರವರನ್ನು ಬಂಧಿಸಿದ್ದರು. ಈಗ ರಾಜು ಹೈಕೋರ್ಟ್‍ನ ಮೊರೆ ಹೋಗಿದ್ದಾರೆ. ಸಂಘದ ಹಣ ನುಂಗಿರುವ ರಾಜುರವರಿಗೆ ಹೈಕೋರ್ಟ್‍ನಲ್ಲಿ ರಕ್ಷಣೆ ಸಿಗಬಾರದು. ಪತ್ರಕರ್ತರ ಸಂಘದಂತಹ ಘನತೆವೆತ್ತ ಸಂಸ್ಥೆಯಲ್ಲಿ ಈ ಹಗಲು ದರೋಡೆ ನಡೆದಿರುವುದು ಲಜ್ಬಾಸ್ಪದ ವಿಚಾರವಾಗಿದೆ. ಪೊಲೀಸರು ನಿಷ್ಠೆಯಿಂದ ನಡೆದುಕೊಂಡು ರಾಜುನಂತಹ ಹಗಲು ದರೋಡೆಕೋರರಿಗೆ ಪಾಠ ಕಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...