Homeಮುಖಪುಟಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, "ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ" ಎಂದು ತಿಳಿಸಿದ್ದಾರೆ.

- Advertisement -
- Advertisement -

PUBG ನಿಷೇಧವು ಭಾರತದ ಆರ್ಥಿಕತೆಯನ್ನು ಇನ್ನಷ್ಟು ಹಾಳು ಮಾಡುತ್ತದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ಹೇಳಿದ್ದಾರೆ ಎಂದು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು PUBG ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಈ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್: #PUBG ಅನ್ನು ನಿಷೇಧಿಸುವುದರಿಂದ ಭಾರತೀಯ ಆರ್ಥಿಕತೆಯು ಹೆಚ್ಚು ಹಾಳಾಗುತ್ತದೆ” ಎಂಬ ಹೇಳಿಕೆಯಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ತ್ರಿಪುರದ ಮಾಜಿ ಗವರ್ನರ್ ತಥಾಗತ ರಾಯ್ ಅವರು ಹೀಗೆ ಹೇಳಿದವರಿಗೆ ಚಪ್ಪಲಿಯಿಂದ ಹೊಡೆಯಬೇಕು ಎಂಬರ್ಥದ ಫೋಟೊ ಇರುವ ಪೋಸ್ಟ್ ಅನ್ನು ಷೇರ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಇದೇ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ರಚ್ನಾ ಶ್ರೀವಾಸ್ತವ್ ಎಂಬುವವರು ಹಂಚಿಕೊಂಡಿರುವ ಈ ಪೋಸ್ಟ್ ಸುಳ್ಳು ಹರಡುತ್ತದೆ ಎಂಬ ಕಾರಣಕ್ಕೆ ಅದನ್ನು ಫೇಸ್‌ಬುಕ್ ನಿರ್ಬಂಧಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್ ಚೆಕ್:

“Amartya Sen PUBG” ಎಂಬ ಕೀವರ್ಡ್ ಹುಡುಕಾಡವು ನಮ್ಮನ್ನು ಭಾರತ್ ನ್ಯೂಸ್ ಎಂಬ ಬ್ಲಾಗ್‌ಗೆ ಕರೆದೊಯ್ಯಿತು. ಅಲ್ಲಿ ಇದರ ಕುರಿತ ಲೇಖನವೊಂದು ಸೆಪ್ಟಂಬರ್ 4 ರಂದು ಪ್ರಕಟವಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

“PUBGಯನ್ನು ನಿಷೇಧಗೊಳಿಸುವ ಮೂಲಕ ಮೋದಿ ದೇಶದ ಆರ್ಥಿಕತೆಯನ್ನು ಮತ್ತಷ್ಟು ಹಿಂದಕ್ಕೆ ತಳ್ಳಿದ್ದಾರೆ: ಅಮರ್ತ್ಯ ಸೇನ್” ಎಂಬ ಶೀರ್ಷಿಕೆಯಡಿಯಲ್ಲಿ ಈ ಲೇಖನವು ಪ್ರಕಟವಾಗಿದೆ. ಅಮರ್ತ್ಯ ಸೇನ್ ಅಂತಹ ಹೇಳಿಕೆ ನೀಡಿದ್ದಾರೆ ಎಂದು ಬ್ಲಾಗ್‌ಪೋಸ್ಟ್ ಹೇಳಿಕೊಂಡಿದೆ. ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಿರುವುದನ್ನು ಅಮರ್ಥ್ಯ ಸೇನ್ ಹೇಗೆ ಖಂಡಿಸಿದ್ದಾರೆ ಎಂಬುದರ ಕುರಿತು ಲೇಖನವು ಹೇಳುತ್ತದೆ. ಆದರೆ ಈ ಲೇಖನವನ್ನು ಅಲ್ಲಿಂದ ತೆಗೆದುಹಾಕಲಾಗಿದೆ ಎಂಬುದು ಗಮನಾರ್ಹ

ಈ ಮೇಲೆ ಬಳಸಲಾದ ಕೀವರ್ಡ್‌ಗಳನ್ನು ಬಳಸಿ, ಮತ್ತಷ್ಟು ಹುಡುಕಾಟ ನಡೆಸಿದಾಗ, ಅವರು ಇಂತಹ ಹೇಳಿಕೆ ನೀಡಿರುವ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

ಇದಲ್ಲದೆ, ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, “ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ” ಎಂದು ತಿಳಿಸಿದ್ದಾರೆ.

ಹಾಗಾಗಿ, “ಭಾರತೀಯ ಆರ್ಥಿಕತೆಯ ಮೇಲೆ PUBG ನಿಷೇಧದ ಪರಿಣಾಮ ಭೀರುತ್ತದೆ” ಎಂಬ ಯಾವುದೇ ಹೇಳಿಕೆಯನ್ನು ಅಮರ್ಥ್ಯ ಸೇನ್ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಆದರೆ ಇದನ್ನು ಪರಿಶೀಲಿಸದೆ ಹಲವರು ಹಂಚಿಕೊಂಡು ಗೊಂದಲ ಸೃಷ್ಟಿಸಿದ್ದಾರೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...