Homeಮುಖಪುಟರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು

ರೋಹಿಂಗ್ಯಾ ಅಲ್ಪ ಸಂಖ್ಯಾತರ ವಿರುದ್ದ ಮ್ಯಾನ್ಮಾರ್‌ ಸೇನೆ ಮಾಡಿದ ಅನ್ಯಾಯ ಬಿಚ್ಚಿಟ್ಟ ಸೈನಿಕರು

- Advertisement -
- Advertisement -

ಸೈನ್ಯದಿಂದ ಹೊರಬಂದಿರುವ ಇಬ್ಬರು ಸೈನಿಕರು ‘ರೋಹಿಂಗ್ಯಾ ಅಲ್ಪಸಂಖ್ಯಾತರ’ ವಿರುದ್ದ ಮ್ಯಾನ್ಮಾರ್‌ ಸೈನ್ಯ ಎಸಗಿರುವ ಅಮಾನವೀಯ ಘಟನೆಗಳ ಬಗ್ಗೆ ಮಾತನಾಡಿದ್ದು, ಅಲ್ಪಸಂಖ್ಯಾತರು ವಾಸಿಸುತ್ತಿದ್ದ ಹಳ್ಳಿಗಳಲ್ಲಿ ನೀವು ಏನನ್ನು ನೋಡುತ್ತೀರೋ, ಕೇಳುತ್ತೀರೋ ಎಲ್ಲವನ್ನೂ ಶೂಟ್ ಮಾಡಿ ಎಂದು ಅಧಿಕಾರಿಗಳು ಆದೇಶಿಸಿದ್ದರು ಎಂದು ಮಾನವ ಹಕ್ಕುಗಳ ಗುಂಪು ಹೇಳಿದ್ದಾಗಿ ಎಪಿ ನ್ಯೂಸ್ ವರದಿ ಮಾಡಿದೆ.

ಬೌದ್ಧ- ಬಹುಸಂಖ್ಯಾತ ದೇಶವಾದ ಮ್ಯಾನ್ಮಾರ್‌ನಲ್ಲಿ ಸೈನ್ಯದಿಂದಲೇ ನಡೆದ ಹತ್ಯಾಕಾಂಡಗಳು, ಅತ್ಯಾಚಾರಗಳು ಮತ್ತು ಹಿಂಸಾಚಾರಗಳ ಬಗ್ಗೆ ಸೈನಿಕರು ಮಾಡಿರುವ ಮೊದಲ ಸಾರ್ವಜನಿಕ ತಪ್ಪೊಪ್ಪಿಗೆ ಇದಾಗಿದೆ ಎಂದು ಎಪಿ ನ್ಯೂಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಫೋರ್ಟಿಫೈ ರೈಟ್ಸ್ ಎಂಬ ಮಾನವ ಹಕ್ಕುಗಳ ಗುಂಪು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಕೋರ್ಟ್ ತನಿಖೆಗೆ ಪ್ರಮುಖ ಪುರಾವೆಯಾಗಿ ಇದನ್ನು ಒದಗಿಸಬಹುದೆಂದು ಸೂಚಿಸಿದೆ. ಇಬ್ಬರು ಸೈನಿಕರು ಮ್ಯಾನ್ಮಾರ್‌‌ನ ರಾಖೈನ್‌ನಲ್ಲಿ ಜನರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಗಿ ಫ್ರೋರ್ಟಿಫೈ ಹೇಳಿದೆ.

ರೋಹಿಂಗ್ಯಾಗಳ ವಿರುದ್ಧದ ಹಿಂಸಾಚಾರದ ವಿಚಾರಣೆಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನಡೆಸುತ್ತಿದೆ. ಇಬ್ಬರು ಸೈನಿಕರು ಕಳೆದ ತಿಂಗಳು ತಮ್ಮ ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹತ್ಯಾಕಾಂಡದಲ್ಲಿ ನೇರವಾಗಿ ಭಾಗವಹಿಸಿದ 19 ಸೈನಿಕರು ಹಾಗೂ ಆದೇಶಗಳನ್ನು ನೀಡಿದ 6 ಹಿರಿಯ ಕಮಾಂಡರ್‌ಗಳ ಹೆಸರುಗಳು ಮತ್ತು ಅವರ ಹುದ್ದೆಗಳ ವಿವರಗಳನ್ನು ಈ ಸೈನಿಕರು ನೀಡಿದ್ದಾರೆ.

‘‘ನನಗೆ 2017 ರಲ್ಲಿ ಸ್ಫಷ್ಟ ಆದೇಶ ನೀಡಲಾಗಿತ್ತು, ನಿಮಗೆ ಏನು ಕಾಣುತ್ತದೋ ಮತ್ತು ಏನು ಕೇಳುತ್ತದೋ ಅಲ್ಲಿಗೆ ಗುಂಡು ಹೊಡೆಯಿರಿ, ನಾವು ಮಹಿಳೆಯರು ಮತ್ತ ಮಕ್ಕಳು ಸೇರಿದಂತೆ 30 ಜನರನ್ನು ಕೊಂದು ಸಾಮೂಹಿಕ ಸಮಾಧಿ ಮಾಡಿದ್ದೇವೆ” ಎಂದು ಎಂದು ಮ್ಯ ವಿನ್ ಟುನ್ ಎಂಬ ಸೈನಿಕ ವೀಡಿಯೊ ಸಂದೇಶದಲ್ಲಿ ಹೇಳಿದ್ದು, “ಮಹಿಳೆಯರನ್ನು ಕೊಲ್ಲುವ ಮೊದಲು ಅತ್ಯಾಚಾರ ಮಾಡಲಾಗಿತ್ತು” ಎಂದಿದ್ದಾರೆ.

ಇದನ್ನೂಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ.

ಮತ್ತೊಬ್ಬ ಸೈನಿಕ ಝಾವ್‌ ನೈಂಗ್‌ ಟುನ್ ತನ್ನ ಘಟಕವು 20 ರೋಹಿಂಗ್ಯಾ ಗ್ರಾಮಗಳನ್ನು ಹೇಗೆ ಅಳಿಸಿಹಾಕಿತು ಎಂಬುದನ್ನು ವಿವರಿಸಿದ್ದಾರೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದಂತೆ ಸುಮಾರು 80 ಜನರ ಹತ್ಯೆಗಳನ್ನು ಅವರ ಬೆಟಾಲಿಯನ್ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಆಗಸ್ಟ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆಯು ‘ಜನಾಂಗೀಯ ಶುದ್ಧೀಕರಣ’ ಎಂಬ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಆ ದೇಶದಿಂದ 7 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ. ಸೇನೆ ನಡೆಸಿರುವ ಈ ಹತ್ಯಾಕಾಂಡದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ಇದು ಜನಾಂಗೀಯ ಹತ್ಯೆಗೆ ಪರಿಪೂರ್ಣ ಉದಾಹರಣೆ ಎಂಬುದಾಗಿ ಬಣ್ಣಿಸಿದೆ.

ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದಾರೆ ಎಂದು ಮ್ಯಾನ್ಮಾರ್ ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಿದೆ. ಅವರ ಕುಟುಂಬಗಳು ಮ್ಯಾನ್ಮಾರ್‌ನಲ್ಲಿ ತಲೆಮಾರುಗಳಿಂದ ವಾಸಿಸುತ್ತಿದ್ದರೂ ಸಹ 1982 ರಿಂದ ಬಹುತೇಕ ಎಲ್ಲರಿಗೂ ಪೌರತ್ವ ನಿರಾಕರಿಸಲಾಗಿದೆ. ಮೂಲಭೂತ ಹಕ್ಕುಗಳನ್ನು ಸಹ ನಿರಾಕರಿಸಲಾಗಿದೆ.


ಓದಿ: ಪೌರತ್ವ ತಿದ್ದುಪಡಿ ಕಾಯ್ದೆ: ಮತ್ತೊಂದು ದೇಶವಿಭಜನೆಯ ಹೊಸ್ತಿಲಿನಲ್ಲಿ? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...