HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...