HomeಮುಖಪುಟNRC ಕೊಟ್ಟ ನೋವುಗಳ ಗುಚ್ಛ : 'ನಾಯ್ಸ್ ಆಫ್ ಸೈಲೆನ್ಸ್' ಚಿತ್ರ ಬಿಡುಗಡೆಗೆ ಸಿದ್ಧ

NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

"ನಾಯ್ಸ್ ಆಫ್ ಸೈಲೆನ್ಸ್" ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

- Advertisement -
- Advertisement -

ಅಸ್ಸಾಂನಲ್ಲಿ NRC (ರಾಷ್ಟ್ರೀಯ ನಾಗರಿಕ ನೊಂದಣಿ ಕಾಯ್ದೆ) ಜಾರಿಯಾದಾಗಿನಿಂದ ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧರಿಸಿದ ಮೊದಲ ಬಾಲಿವುಡ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಚಿತ್ರಕ್ಕೆ ನಿರ್ದೇಶಕ ಸೈಫ್ ಬೈದ್ಯಾ “ನಾಯ್ಸ್ ಆಫ್ ಸೈಲೆನ್ಸ್” ಎಂದು ಹೆಸರಿಟ್ಟಿದ್ದಾರೆ.

2019 ರಲ್ಲಿ ಅಸ್ಸಾಂನಲ್ಲಿ ಜಾರಿಯಾದ ಅಂತಿಮ ಎನ್‌ಆರ್‌ಸಿ ಪಟ್ಟಿಯಿಂದ ಆದಿತ್ಯ ಭಟ್ಟಾಚಾರ್ಜಿಯವರ ಹೆಸರನ್ನು ಕೈಬಿಟ್ಟ ನಂತರ ಅವರು ತನ್ನ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ಸೈಫ್ ಬೈದ್ಯಾ ಬಳಿ ತಮ್ಮ ನೋವು ಹಂಚಿಕೊಳ್ಳುತ್ತಾರೆ. ನಂತರ ಬೈದ್ಯಾ ಆದಿತ್ಯ ಭಟ್ಟಾಚಾರ್ಜಿ ಕುಟುಂಬದ ನೋವಿನ ಕತೆಯನ್ನು ಚಿತ್ರದ ಮೂಲಕ ದೇಶದ ಜನರಿಗೆ ತಿಳಿಸಲು ನಿರ್ಧರಿಸಿದರು. ನಂತರ ಬಾಲಿವುಡ್ ನಿರ್ಮಾಪಕ ವಿನಯ್ ಜಿ ರೈ ಚಿತ್ರಕ್ಕೆ ಬಂಡವಾಳ ಹೂಡಲು ಒಪ್ಪಿಕೊಂಡರು, ಅದೀಗ ಡಿಟಿಎಚ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ

“ನಾಯ್ಸ್ ಆಫ್ ಸೈಲೆನ್ಸ್” ಚಿತ್ರವನ್ನು ತ್ರಿಪುರದ ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದು, ಆ ಗಡಿಯುದ್ದಕ್ಕೂ ನಡೆಯುವ ಅಕ್ರಮ ವಲಸೆಯ ಚರ್ಚೆಯು ಚಿತ್ರದಲ್ಲಿದೆ ಎನ್ನಲಾಗಿದೆ.

ಹಿಂದಿ ಭಾಷೆಯಲ್ಲಿರುವ ಈ ಚಿತ್ರದ ಅವಧಿ 1 ಗಂಟೆ 50 ನಿಮಿಷಗಳು. ಚಿತ್ರವೂ ಸುಜೋಯ್ ಘೋಷ್ ಮತ್ತು ಕನಿಕಾ ಘೋಷ್ ಎಂಬ ದಂಪತಿಗಳು NRCಯಿಂದ ಕೈಬಿಟ್ಟ ತಮ್ಮ ಹೆಸರುಗಳನ್ನು ಮತ್ತೆ ಸೇರಿಸಲು, ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ನ್ಯಾಯಾಲಯಗಳಲ್ಲಿ ಹೇಗೆ ಹೋರಾಡುತ್ತಾರೆ ಎಂಬುದನ್ನು ಬಿಚ್ಚಿಡಲಿದೆ.

“ಎನ್‌ಆರ್‌ಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದ ನಂತರ ಅವರನ್ನು ಸಮಾಜವು ಹೇಗೆ ಅಪಹಾಸ್ಯ ಮಾಡುತ್ತದೆ ಮತ್ತು ಅಂತವರನ್ನು ಬಾಂಗ್ಲಾದೇಶಿ ಎಂದು ಕರೆಯುವುದನ್ನು ನಾವು ಚಿತ್ರಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಹ-ನಿರ್ಮಾಪಕರು ಮತ್ತು ಕೆಲವು ನಟರು ತ್ರಿಪುರದಿಂದ ಬಂದಿರುವ ಕಾರಣ ಚಿತ್ರವನ್ನು ಈ ಹಿನ್ನೆಲೆಯಾಗಿ ಮಾಡಲು ನಾವು ನಿರ್ಧರಿಸಿದ್ದೇವೆ” ಎಂದು ಚಿತ್ರದ ನಿರ್ದೇಶಕ ಸೈಫ್ ಬೈದ್ಯ ತಿಳಿಸಿದ್ದಾರೆ.

PC: EastMojo

“ನಾವು ಎರಡು ಭಾಗಗಳಲ್ಲಿ ಪೌರತ್ವ ಬಿಕ್ಕಟ್ಟನ್ನು ಚಿತ್ರಿಸಲು ಪ್ರಯತ್ನಿಸಿದ್ದೇವೆ. ಎನ್‌ಆರ್‌ಸಿ ಅಪ್‌ಡೇಟ್ ನಡೆಯುತ್ತಿರುವ ಸಮಯದಲ್ಲಿ ಮ್ಯಾನ್ಮಾರ್‌ನ ರೋಹಿಂಗ್ಯಾ ಮುಸ್ಲಿಂ ಹುಡುಗಿ ಕಳೆದುಹೋದ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ (ತ್ರಿಪುರ) ಬರುವುದು ಒಂದು. ಎರಡನೆಯ ಕಥಾವಸ್ತು, ಒಂದು ದಂಪತಿಯ ಕುರಿತು. ಅಂತಿಮ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಕಾಣಿಸಿಕೊಂಡಿದ್ದರೂ ಸಹ, NRCಯಿಂದ ಹೊರಗುಳಿದ ದಂಪತಿಗಳ ದುಃಸ್ಥಿತಿಯನ್ನು ನಾವು ಎತ್ತಿ ಹಿಡಿಯಲು ಪ್ರಯತ್ನಿಸಿದ್ದೇವೆ “ಎಂದು ಸೈಫ್ ಹೇಳಿದರು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ಫಿರ್ದೌಸ್ ಹಸನ್, ನಟಿ ಪೂಜಾ ಜಾ, ತ್ರಿಪುರದ ರಿಷಿ ರಾಜ್ ನಿರ್ವಹಿಸಿದ್ದಾರೆ. ನಾಯ್ಸ್ ಆಫ್ ಸೈಲೆನ್ಸ್‌ನ ಸಹ-ನಿರ್ಮಾಪಕ ಸತದೀಪ್ ಮಾತನಾಡಿ, ಈ ಚಿತ್ರವು ದೇಶದ ಇತರ ಭಾಗಗಳಲ್ಲಿನ ವೀಕ್ಷಕರಿಗೆ ಎನ್‌ಆರ್‌ಸಿಯ ನೋವುಗಳನ್ನು ತೋರಿಸುವುದಲ್ಲದೆ, ತ್ರಿಪುರದ ನಟರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ.

ಅಸ್ಸಾಂನ ಒಟ್ಟು 3.29 ಕೋಟಿ ಅರ್ಜಿದಾರರಲ್ಲಿ 19.06 ಲಕ್ಷಕ್ಕೂ ಹೆಚ್ಚು ಜನರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ನ್ಯಾಯಾಲಯದಲ್ಲಿ ತಮ್ಮ ಭಾರತೀಯ ಪೌರತ್ವವನ್ನು ಸಾಬೀತು ಮಾಡಲಾಗದವರನ್ನು ವಿದೇಶಿಯರು ಎಂದು ಘೋಷಿಸಲಾಗುತ್ತದೆ ಮತ್ತು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲು ಬಂಧನ ಶಿಬಿರಗಳಲ್ಲಿ ದಾಖಲಿಸಲಾಗುತ್ತದೆ. ಈ ಭಯವು ಜನರಲ್ಲಿ ತುಂಬಾ ಆತಂಕವನ್ನುಂಟುಮಾಡಿದ್ದು, ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರನ್ನೇ ಬಂಧಿಸಿದ್ದ ಸರ್ಕಾರ ಈ ಬಗ್ಗೆ ಚಿತ್ರ ಮಾಡಿ ಬಿಡುಗಡೆ ಮಾಡಲು ಹೊರಟಿರುವವರಿಗೆ ಅದೆಷ್ಟು ಅಡೆತಡೆ ನೀಡುತ್ತದೋ ಎಂಬ ಆತಂಕ ಜನರಲ್ಲಿರುವುದು ಸುಳ್ಳಲ್ಲ.


ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...