Homeಮುಖಪುಟಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ಕರ್ನಾಟಕದಲ್ಲಿ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ.

- Advertisement -
- Advertisement -

ಪ್ರತಿ ವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ. ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (ಐಎಎಸ್ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಸೆಪ್ಟೆಂಬರ್ 10, 2003 ರಂದು ಈ ದಿನವನ್ನು ಜಾರಿಗೆ ತಂದವು. ಮೊದಲ ಬಾರಿ ವಿಶ್ವ ಆತ್ಮಹತ್ಯೆ ವರದಿಯನ್ನು 2014 ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿತು.

ಆತ್ಮಹತ್ಯೆ ಪ್ರಕರಣಗಳು ಪ್ರತಿವರ್ಷ ಹೆಚ್ಚಾಗುತ್ತಲೇ ಸಾಗುತ್ತಿವೆ. ಆದರೆ ಸೆಲೆಬ್ರಟಿಗಳು ಆತ್ಮಹತ್ಯೆ ಮಾಡಿಕೊಂಡಾಗ ಹೆಚ್ಚು ಚರ್ಚೆಗೆ ಬರುತ್ತವೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ.

ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಸ್ನೇಹಿತರ ಚಿಂತೆ, ಆರೋಗ್ಯದ ಕಡೆ ಗಮನ ಕೊಡದಿರುವುದು ಹಣಕಾಸು ಮತ್ತು ಕೆಲಸದ ಹೊರೆ, ಜೊತೆಗೆ ಭವಿಷ್ಯದ ಅನಿಶ್ಚಿತತೆಯ ಬಗ್ಗೆ ಚಿಂತೆ ಒಂದಾ, ಎರಡಾ… ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾನೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಹಾಗಾದರೇ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಪರಿಹಾರವೇ..? ಖಂಡಿತ ಇಲ್ಲ. ಮನುಷ್ಯ ಹುಟ್ಟಲೂ ಸಹ ಹೋರಾಟ ನಡೆಸಿರುತ್ತಾನೆ. ಅಂತಹದರಲ್ಲಿ ಜೀವನದ ಸಮಸ್ಯೆಗಳು ಎಂದಿಗೂ ದೊಡ್ಡದಲ್ಲ. ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆಯಲ್ಲಿ ನಿರ್ಧಾರ ತೆಗೆದುಕೊಳ್ಳಬಾರದು ಅಷ್ಟೇ. ಇಂದು ದೊಡ್ಡ ಬೆಟ್ಟವಾಗಿ ಕಾಣುವ ಸಮಸ್ಯೆ, ನಾಳೆ ಕುಳಿತು ಯೋಚಿಸಿದರೇ ಅದು ಸಮಸ್ಯೆಯೇ ಅಲ್ಲ ಎನ್ನಿಸಬಹುದು.

ಇತ್ತಿಚೆಗೆ ಭಾರಿ ಸದ್ದು ಮಾಡಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಲ್ಲವೋ ಎಂಬುದರ ಕುರಿತು ದೊಡ್ಡ ಚರ್ಚೆಯೆಬ್ಬಿಸಿದೆ. ಆತ ತಾನು ಖಿನ್ನತೆಯಿಂದ ಬಳಲುತ್ತಿದೆ ಎಂದು ಆತನೇ ಹೇಳಿದರೂ ಕೂಡ ಪ್ರಕರಣ ಬೇರೆಡೆಗೆ ಹಾದಿ ತಪ್ಪುತ್ತಿದೆ. ಇಲ್ಲಿ ನಾವು ಪ್ರಾಮುಖ್ಯತೆ ನೀಡಬೇಕಾಗಿದದ್ದು, ಮಾನಸಿಕ ಖಿನ್ನತೆ ಜನರ ಜೀವವನ್ನು ಹೇಗೆ ಸಾವಿನೆಡೆಗೆ ತಳ್ಳುತ್ತದೆ ಎಂಬ ವಿಚಾರದ ಬಗ್ಗೆ. ನಾವು ಈ ಪ್ರಕರಣದಿಂದ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬಹುದಾಗಿತ್ತು. ಮಾನಸಿಕ ಖಿನ್ನತೆಗೆ ಬಡವ, ಶ್ರೀಮಂತ ಎಂಬ ಭೇದವಿಲ್ಲ ಎಂಬುದನ್ನು ಅರಿಯಬೇಕು. ಯಾವುದೇ ಜಾತಿ, ವಯಸ್ಸು, ವರ್ಗ, ವರ್ಣಗಳ ಭೇದವಿಲ್ಲದೆ ಮುಂದುವರಿದ ಹಾಗೆ ಜಗತ್ತೇ ಎದುರಿಸುತ್ತಿರುವ ಅತೀ ಅಪಾಯಕಾರಿ ಪಿಡುಗು ಈ ಆತ್ಮಹತ್ಯೆ.

ಕೊವೀಡ್ ಸಾಂಕ್ರಾಮಿಕದಿಂದಾಗಿ ಈ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಮಾನಸಿಕ ಖಿನ್ನತೆಯನ್ನು ತಪ್ಪಿಸಲು, ನಿಯಂತ್ರಿಸಲು ಈ ಪರಿಸ್ಥಿತಿ ಮತ್ತೊಮ್ಮೆ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ಸ್ಥಳೀಯ ಮಟ್ಟದಲ್ಲೂ ಜಾಗೃತಿ ಮೂಡಿಸುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳುತ್ತದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿಗೆ ಕಾರಣ ತಿಳಿಯಬೇಕಾದರೆ ಬಾಲಿವುಡ್ ಎಂಬ ಚಕ್ರವ್ಯೂಹ ಅರಿಯಿರಿ..

ಕೊರೊನಾದ ಭಾವನಾತ್ಮಕ ಪರಿಣಾಮವನ್ನು ತಿಳಿಯಲು ಮಾನಸಿಕ ಆರೋಗ್ಯ ಮತ್ತು ವರ್ತನೆಯ ವಿಜ್ಞಾನ ಇಲಾಖೆ, ಮ್ಯಾಕ್ಸ್ ಹೆಲ್ತ್‌ಕೇರ್ (ನವದೆಹಲಿ) ನಡೆಸಿದ ವೆಬ್ ಆಧಾರಿತ ಅಧ್ಯಯನದ ಪ್ರಕಾರ, ಭಾರತದಾದ್ಯಂತ ಒಟ್ಟು 1,069 ಪ್ರತಿಕ್ರಿಯೆಗಳಲ್ಲಿ 25 ಪ್ರತಿಶತದಷ್ಟು ಜನರಲ್ಲಿ ಸಾವು ಮತ್ತು ಆತ್ಮಹತ್ಯೆಯ ಕಲ್ಪನೆ ಇದ್ದರೆ, ಇನ್ನು ಶೇಕಡಾ 10 ರಷ್ಟು ಜನರಿಗೆ ಆಗ್ಗಾಗ್ಗೆ ಆತ್ಮಹತ್ಯೆ ಬಗ್ಗೆ ಆಲೋಚನೆ ಬರುತ್ತದೆ ಎಂದು ತಿಳಿದುಬಂದಿದೆ.

ದೇಶದಲ್ಲಿ 2015ರಿಂದ 2019ರ 5 ವರ್ಷಗಳ ತುಲನಾತ್ಮಕ ವರದಿ ಪ್ರಕಾರ ಪ್ರತಿವರ್ಷ 1.33 ಲಕ್ಷ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ತಿಳಿಸಿದೆ. 2019ರಲ್ಲಿ ದೇಶದಲ್ಲಿ 1.36 ಲಕ್ಷ ಆತ್ಮಹತ್ಯೆ ಸಂಭವಿಸಿವೆ. ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ಸಂಭವಿಸಿರುವುದು ಮಹಾರಾಷ್ಟ್ರದಲ್ಲಿ.

ಇನ್ನು ರಾಜ್ಯದಲ್ಲಿ ನೋಡುವುದಾದರೇ 5 ವರ್ಷಗಳ ಅವಧಿಯಲ್ಲಿ 56,035 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ ಶೇಕಡಾ 75ರಷ್ಟು ಮಂದಿ ಪುರುಷರು ಮತ್ತು ಶೇಕಡಾ 24.96 ಮಂದಿ ಮಹಿಳೆಯರಿದ್ದಾರೆ. ಅನಾರೋಗ್ಯ ಜನರ ಆತ್ಮಹತ್ಯೆಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ.

PC: Rastriya Khabars

ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್

ಆತ್ಮಹತ್ಯೆ ತಡೆಗಟ್ಟುವಲ್ಲಿ ನಮ್ಮ ಪಾತ್ರವೇನು..?

  • ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ, ಸಾವಿನ ಕುರಿತು ಮಾತಾಡುತ್ತಿದ್ದಾನೆಂದರೆ ಅವರನ್ನು ಒಂದೆರಡು ಗಂಟೆ, ಒಂದೆರಡು ದಿನಗಳ ಮಟ್ಟಿಗೆ ನಮ್ಮ ಆಪ್ತ ಪರಿಧಿಯೊಳಗೆ ಇಟ್ಟುಕೊಳ್ಳುವುದು.
  • ಖಿನ್ನತೆಯಲ್ಲಿರುವವರಿಗೆ ಆಪ್ತ ಸಮಾಲೋಚನೆ ಕೊಡಿಸಲು ಪ್ರಯತ್ನಿಸುವುದು.
  • ಅತಿಯಾಗಿ ಒಂಟಿತನ ಬಯಸುವವರ ಮೇಲೆ ನಿಗಾ ಇಡುವುದು
  • ಇನ್ನೊಬ್ಬರ ಸಮಸ್ಯೆಗೆ, ನೋವಿಗೆ ಕಿವಿಯಾಗುವ ಕನಿಷ್ಠ ಹೃದಯವಂತಿಕೆ ತೋರಿಸೋದು
  • ಸಮಸ್ಯೆ ತಿಳಿದು, ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡುವುದು. ಚಿಕಿತ್ಸೆ ಪಡೆಯಲು ಅವರನ್ನು ಓಲೈಸುವುದು.
  • ಜೀವನದಲ್ಲಿ ಗೆಲ್ಲುವುದೇ ಮುಖ್ಯವಲ್ಲ ಎಂಬುದನ್ನು ಅರ್ಥ ಮಾಡಿಸಿದರೇ ಆತ್ಮಹತ್ಯೆಯೆಂಬ ಯೋಚನೆಯಿಂದ ಮುಕ್ಕಾಲು ಭಾಗ ಗೆದ್ದಂತೆಯೇ.
  • ಜೀವದ ಮಹತ್ವವನ್ನು ಅರ್ಥ ಮಾಡಿಸುವುದು.
  • ತನ್ನ ಕುಟುಂಬ, ಸ್ನೇಹ ಬಳಗದ ಜೊತೆ ಆದಷ್ಟು ಸಂಪರ್ಕದಲ್ಲಿರುವಂತೆ ಮಾಡುವುದು
  • ಉತ್ತಮ ಹವ್ಯಾಸಗಳನ್ನು, ಸೃಜನಾತ್ಮಕ ಚಟುವಟಿಕೆಗಳನ್ನು ಪರಿಚಯಿಸುವುದು. ಇದರಿಂದ ಮನಸ್ಸು ಬೇರೆಡೆಗೆ ಹರಿಯುತ್ತದೆ.
  • ಆತ್ಮಹತ್ಯೆ ಬಗ್ಗೆ ತಿಳಿದಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು.

ಮನುಷ್ಯ ತನ್ನ ಜೀವಿತಾವಧಿಯಲ್ಲಿ ಕನಿಷ್ಠ 5 ಬಾರಿಯಾದರೂ ಆತ್ಮಹತ್ಯೆ ಬಗ್ಗೆ ಯೋಚಿಸುತ್ತಾನೆ ಎಂದು ಸಂಶೋಧನೆಯೊಂದು ತಿಳಿಸುತ್ತದೆ. ಇಂದಿನ ಯುಗದಲ್ಲಿ ಮನುಷ್ಯ ಸಂಬಂಧಗಳಿಂದ ಕೊಂಡಿ ಕಳಚಿಕೊಂಡು ಓಡುತ್ತಿರುವವರಿಗೆ ಈ ದಿನದ ಅಗತ್ಯತೆಯ ಅರಿವಾಗಬೇಕಿದೆ.

ತನ್ನ ಹುಟ್ಟು ತನ್ನ ಆಯ್ಕೆ ಆಗದಿದ್ದಾಗ ಸಾವನ್ನು ತನ್ನಿಷ್ಟದಂತೆ ಆಯ್ಕೆ ಮಾಡುವುದು ಅಪರಾಧವೂ, ಪ್ರಕೃತಿಗೆ ವಿರೋದ್ಧವೂ ಹೌದು. ಹೀಗಾಗಿಯೇ ಆತ್ಮಹತ್ಯೆಯನ್ನು ಅಪರಾಧ ಎಂದು ಪರಿಗಣಿಸಲಾಗಿದೆ. ಆತ್ಮಹತ್ಯೆಗೆ ಮುಂದಾಗುವ ವ್ಯಕ್ತಿ ಯಾವುದಾದರೂ ರೂಪದಲ್ಲಿ ಸೂಚನೆ ನೀಡಿಯೇ ಇರುತ್ತಾನೆ. ಅದನ್ನು ಗಮನಿಸುವ ತಾಳ್ಮೆ, ಸೂಕ್ಷ ಮನಸ್ಸು, ತಮ್ಮ ಸುತ್ತಲಿನವರ ಬಗ್ಗೆ ಕೊಂಚ ಕಾಳಜಿ ಇದ್ದರೂ ಸಾಕು ಅದೇಷ್ಟೋ ಆತ್ಮಹತ್ಯೆಗಳು ತಪ್ಪುತ್ತವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...