Homeಅಂಕಣಗಳುಮನೋರೋಗಕ್ಕೆ ಚಿಕಿತ್ಸೆಯುಂಟು: ಅದನ್ನು ಗುರುತಿಸಿದರೆ ಮಾತ್ರ : ಯೋಗೇಶ್ ಮಾಸ್ಟರ್

ಮನೋರೋಗಕ್ಕೆ ಚಿಕಿತ್ಸೆಯುಂಟು: ಅದನ್ನು ಗುರುತಿಸಿದರೆ ಮಾತ್ರ : ಯೋಗೇಶ್ ಮಾಸ್ಟರ್

ತನ್ನಲ್ಲಿ ಮತ್ತು ಇತರರಲ್ಲಿ ರೋಗಲಕ್ಷಣಗಳನ್ನು ಕಂಡುಕೊಂಡು, ಎಚ್ಚೆತ್ತುಕೊಂಡು ಮಾನಸಿಕವಾಗಿ ಎಲ್ಲರೂ ಗುಣಮುಖರಾಗಲಿ ಎಂಬುದೇ ಸಿ ಆರ್ ಚಂದ್ರಶೇಖರ್ ಅವರ ಈ ಕೃತಿಯ ಉದ್ದೇಶ.

- Advertisement -
- Advertisement -

ಮನೋರೋಗ ಅಂದರೆ ಯಾವುದು? ಮನೋರೋಗಿಗಳು ಎಂದರೆ ಯಾರು?

ಯಾರನ್ನೂ ಸೇರದೇ, ತಮ್ಮ ಪಾಡಿಗೆ ತಾವು ಏನೇನೋ ಮಾತಾಡಿಕೊಂಡು, ಯಾವುದೋ ಮೂಲೆಯಲ್ಲಿ, ಕತ್ತಲೆಯಲ್ಲಿ, ಯಾರಿಗೂ, ಯಾವುದಕ್ಕೂ ಸ್ಪಂದಿಸದೇ, ಅಥವಾ ಎಲ್ಲಕ್ಕೂ ಭಯಂಕರವಾಗಿ ಪ್ರತಿಕ್ರಿಯಿಸುತ್ತಾ ಇರುವವರೋ ಅಥವಾ ಬಟ್ಟೆ ಹರಿದುಕೊಂಡು, ಯಾರನ್ನೂ ಗುರುತಿಸದೇ, ಯಾರೆಂದರೆ ಅವರಿಗೆ ಕಲ್ಲುಗಳಲ್ಲಿ ಹೊಡೆಯುತ್ತಾ ಇರುವವರು ಎಂದೇನಾದರೂ ಅಂದುಕೊಂಡಿದ್ದರೆ ಅವರ ಬಗ್ಗೆ ನನಗೆ ತೀವ್ರ ಅನುಕಂಪವಿದೆ.

ತಲೆಗೆ, ಕಣ್ಣಿಗೆ, ಹೊಟ್ಟೆಗೆ, ಬೆನ್ನಿಗೆ, ಚರ್ಮಕ್ಕೆ, ಕೈ ಕಾಲಿಗೆ ನೋವೋ, ಬಾವೋ, ತುರಿಕೆಯೋ, ಊತವೋ, ಉರಿಯೋ ಎಂತದ್ದೋ ಬರುತ್ತದೆ. ಯಾವುದೇ ಕಾರಣದಿಂದ ಸಮಸ್ಯೆ ಬಂದು ಅದು ಆ ಹೊತ್ತಿಗೆ, ಒಂದು ಮಟ್ಟಕ್ಕೆ ಕಾಣಿಸಿಕೊಳ್ಳುವುದು. ಅದಕ್ಕೆ ಬೇಕಾದ ಔಷಧವನ್ನು ತೆಗೆದುಕೊಳ್ಳುತ್ತೇವೆ. ನಿವಾರಿಸಿಕೊಳ್ಳುತ್ತೇವೆ. ನೋವು, ಬಾವು, ಊತ, ಉರಿ ಹೋಯಿತೆಂದರೆ ಸಮಸ್ಯೆ ಹೋಯಿತೆಂದರ್ಥ. ಒಂದು ವೇಳೆ ಯಾವುದೇ ಒಂದು ಸಮಸ್ಯೆ ಬಂದು, ಸಣ್ಣ ಪುಟ್ಟ ಮದ್ದುಗಳಿಂದ, ಉಪಚಾರಗಳಿಂದ ಹೋಗದೇ ಒಂದೇ ಸಮನೆ ಕಾಡುತ್ತಿದ್ದರೆ ಅದಕ್ಕೆ ರೋಗ ಎನ್ನಬಹುದೇನೋ. ಅದಕ್ಕೂ ದೀರ್ಘಕಾಲದ ಉಪಚಾರ, ನಿಯಮಿತ ಮದ್ದಿನ ಸೇವನೆ ಇರುತ್ತದೆ. ಒಟ್ಟಾರೆ ದೇಹಕ್ಕೆ ಏನಾದರೂ ಆದರೆ ಕಾಣುವಂತಹ ಲಕ್ಷಣಗಳಿಂದ ಸಮಸ್ಯೆಯನ್ನೋ, ರೋಗವನ್ನೋ ಪತ್ತೆ ಹಚ್ಚಿ ಅದಕ್ಕೆ ಅಗತ್ಯವಿರುವ ಚಿಕಿತ್ಸೆ ಮಾಡುತ್ತೇವೆ ಅಥವಾ ಮಾಡಿಕೊಳ್ಳುತ್ತೇವೆ. ಅದೇ ರೀತಿ ಮನಸ್ಸಿಗೂ ಆಗಾಗ ಸಮಸ್ಯೆ ಬರುತ್ತದೆ. ಆ ಸಮಸ್ಯೆಯನ್ನು, ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಅದು ರೋಗವಾಗಿ ಮುಂದುವರಿಯುತ್ತದೆ. ವಿಪರ್ಯಾಸವೆಂದರೆ ತಮಗೆ ತಲೆನೋವು ಇದೆ ಎಂದು ಒಪ್ಪಿಕೊಂಡಂತೆ, ಸಕ್ಕರೆ ಖಾಯಿಲೆ ಅಥವಾ ರಕ್ತದೊತ್ತಡ ಇದೆ ಎಂದು ಒಪ್ಪಿಕೊಂಡಂತೆ ಮನೋರೋಗವಿದೆ ಎಂದು ಒಪ್ಪಿಕೊಳ್ಳಲು ಸಾಮಾನ್ಯವಾಗಿ ತಯಾರಿರುವುದಿಲ್ಲ. ಅದೇ ಸಮಸ್ಯೆ.

ಮೂಡುವ ಭಾವನೆಗಳಿಂದಾಗಿ, ಮಾಡುವ ಆಲೋಚನೆಗಳಿಂದಾಗಿ, ತೋರುವ ವರ್ತನೆಗಳಿಂದಾಗಿ, ನೀಡುವ ಪ್ರತಿಕ್ರಿಯೆಗಳಿಂದಾಗಿ, ಸ್ಪಂದಿಸುವ ರೀತಿಗಳಿಂದಾಗಿ ರೋಗಗ್ರಸ್ತ ಮನಸ್ಥಿತಿಯು ಕಾಣಿಸಿಕೊಳ್ಳುತ್ತಲೇ ಇರುತ್ತದೆ. ಆದರೆ ಅದನ್ನು ಆ ಹೊತ್ತಿನ ಸಂಗತಿ ಅಥವಾ ಸನ್ನಿವೇಶಕ್ಕೆ ತಮ್ಮ ಪ್ರತಿಕ್ರಿಯೆ ಅಥವಾ ತಮ್ಮ ಮೇಲಾಗಿರುವ ಪ್ರಭಾವ ಎಂದುಕೊಂಡು ಸುಮ್ಮನಾಗಿಬಿಡುತ್ತಾರೆ. ಅದು ಮತ್ತೂ ದೊಡ್ಡ ಸಮಸ್ಯೆ. ಹೀಗಾಗಿ ತಾವೇ ತಮ್ಮ ಮನೋರೋಗವನ್ನು ಪತ್ತೆ ಹಚ್ಚಿಕೊಳ್ಳುವುದಿಲ್ಲ. ಒಂದು ವೇಳೆ ಬೇರೆಯವರು ಪತ್ತೆ ಹಚ್ಚಿದರೆ ಒಪ್ಪಿಕೊಳ್ಳುವುದಿಲ್ಲ. ಹೀಗಾಗಿ ಸಮಾಜದಲ್ಲಿ ಮನೋರೋಗಿಗಳು ತುಂಬಾ ಸಹಜವಾಗಿ ಬಹಳ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನೋಡಿ ಸ್ವಾಮಿ ನಾವಿರೋದು ಹೀಗೆ ಅಂತ ಅವರೂ ಇರ್ತಾರೆ. ಅವರಿರೋದೇ ಹಾಗೆ ಅಂತ ಉಳಿದವರೂ ಇರ್ತಾರೆ.

photo courtesy: Amazon

ತನ್ನನ್ನು ತಾನು ಅರಿಯುವಂತಹ, ತನ್ನೊಳಗಿನ ಮತ್ತು ವಿಶ್ವದ ಆಂತರ್ಯದ ರಹಸ್ಯವನ್ನು ತಿಳಿಯುವಂತಹ ಆಧ್ಯಾತ್ಮದಲ್ಲಿ ಆತ್ಮ ಸಾಕ್ಷಾತ್ಕಾರ ಅತ್ಯಂತ ಮಹತ್ತರವಾದದ್ದು ಮತ್ತು ಉನ್ನತವಾದದ್ದು. ಹಾಗೆಯೇ ಯಾರೊಬ್ಬರೂ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ತನ್ನನ್ನು ತಾನು ಮಾನಸಿಕ ನೆಲೆಯಿಂದ ತಿಳಿಯುವುದು ಮತ್ತು ಸಮಸ್ಯೆಗಳಿದ್ದಲ್ಲಿ ಪತ್ತೆ ಹಚ್ಚುವುದು, ರೋಗವಾಗಿದ್ದಲ್ಲಿ ಅದನ್ನು ಗುಣಪಡಿಸಿಕೊಳ್ಳೋದು ಬಹಳ ಮುಖ್ಯವಾದದ್ದು. ಇದು ಆಧ್ಯಾತ್ಮಿಕ ಸಾಧನೆಗಿಂತಲೂ ಬಹಳ ಹೆಚ್ಚಿನದು ಎಂದು ನನ್ನ ಅಭಿಪ್ರಾಯ. ತಾನೂ, ತನ್ನೊಂದಿಗೆ ಇತರರು, ಕುಟುಂಬ, ಸಮಾಜ, ದೇಶ ಎಲ್ಲವೂ ಆರೋಗ್ಯವಾಗಿರಲು ಸಾಧ್ಯವಾಗುವುದು ಇದರಿಂದ ಎಂದೇ ನನ್ನ ಅಂಬೋಣ.

ಯಾವುದೇ ಒಬ್ಬ ವ್ಯಕ್ತಿಯು ತನ್ನನ್ನು ತಾನು ಮತ್ತು ಇತರರನ್ನು ಅವರವರ ವರ್ತನೆಗಳ, ಭಾವನೆಗಳ, ವಿಚಾರಗಳ, ಕ್ರಿಯೆ-ಪ್ರತಿಕ್ರಿಯೆಗಳ ಮೂಲಕ ಮನೋವೈಜ್ಞಾನಿಕವಾಗಿ ಅರಿಯುತ್ತಾನೋ ಆಗ ಅವನಿಗೆ ಸಮಸ್ಯೆಗಳನ್ನು, ಸಂಘರ್ಷಗಳ ಕಾರಣಗಳನ್ನು, ಸಂಬಂಧಗಳಲ್ಲಿನ ಬಿರುಕುಗಳನ್ನು, ಖಿನ್ನತೆಗೆ ಮೂಲಗಳನ್ನು, ಭಿನ್ನ ಮನಸ್ಥಿತಿಗಳನ್ನು ಅರಿಯಲು ಸಾಧ್ಯವಾಗುತ್ತದೆ. ಆಗ್ರಹ ತೋರುವ ಎಡೆಯಲ್ಲಿ ಅನುಕಂಪ ತೋರಲು ಸಾಧ್ಯವಾಗುತ್ತದೆ. ದ್ವೇಷ ಸಾಧಿಸುವ ಬದಲು ಪ್ರೀತಿಸಲು ಸಾಧ್ಯವಾಗುತ್ತದೆ. ದೂರುವ ಬದಲು ತಿದ್ದಲು ಸಾಧ್ಯವಾಗುತ್ತದೆ. ದೂಷಿಸುವ ಬದಲು ಅರಿಯಲು ಸಾಧ್ಯವಾಗುತ್ತದೆ. ವ್ಯಕ್ತಿಯೊಬ್ಬನ ಮಾತಿಗೆ, ಕೃತ್ಯಕ್ಕೆ ಆತನನ್ನೇ ಎತ್ತಿ ಎಸೆಯುವ ಬದಲು, ಅವನ ಯಾವುದೋ ದೋಷಪೂರಿತ ಗುಣದ ಕಣವನ್ನು ಹೆಕ್ಕಿ ಎಸೆಯಲು ಸಾಧ್ಯವಾಗುತ್ತದೆ. ಮೆತ್ತಿಕೊಂಡಿರುವ ಮಲಿನವನ್ನು ತೊಳೆಯಲು ಸಾಧ್ಯವಾಗುತ್ತದೆ. ಕಾಟ ಕೊಡುವ ಅವರ್ಯಾರದೋ ಹಟಕ್ಕೆ, ಮುಂದುವರಿಯಲು ಬಿಡದ ಇವರ್ಯಾರದೋ ಮೌಢ್ಯಕ್ಕೆ, ಎಷ್ಟೇ ತಿಳಿಯಾದ ತಿಳುವಳಿಕೆಯನ್ನು ನೀಡಿದರೂ ತಾವೆಂದಿಗೂ ಬಿಡದ ತಮ್ಮ ವಾದಕ್ಕೆ ಕಾರಣಗಳು ತಿಳಿಯುತ್ತವೆ.

ಹೀಗೆ ಮನೋವಿಜ್ಞಾನವು ವ್ಯಕ್ತಿಯ ಮತ್ತು ಸಮಾಜದ ಹೂರಣವನ್ನು ಅರಿವಿಗೆ ತರುತ್ತಾ ವ್ಯಕ್ತಿಗತವಾದ ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವುದರಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಈ ಕೃತಿಯನ್ನು ಓದುವಾಗ ಯಾವುದೇ ಸಮಾಜದ ಮಟ್ಟಿಗಾದರೂ ರಾಕೆಟ್ ವಿಜ್ಞಾನವು ಮನೋವಿಜ್ಞಾನದ ಅಗತ್ಯದ ಮುಂದೆ ಮೊದಲನೆಯ ಪ್ರಾಧಾನ್ಯತೆ ಆಗಲಾರದು ಎಂಬುದು ನಾನು ಗ್ರಹಿಸಿದ್ದು.

ಇರಲಿ, ತನ್ನಲ್ಲಿ ಮತ್ತು ಇತರರಲ್ಲಿ ರೋಗಲಕ್ಷಣಗಳನ್ನು ಕಂಡುಕೊಂಡು, ಎಚ್ಚೆತ್ತುಕೊಂಡು ಮಾನಸಿಕವಾಗಿ ಎಲ್ಲರೂ ಗುಣಮುಖರಾಗಲಿ ಎಂಬುದೇ ಸಿ ಆರ್ ಚಂದ್ರಶೇಖರ್ ಅವರ ಈ ಕೃತಿಯ ಉದ್ದೇಶ.

ಮನೋರೋಗಕ್ಕೆ ನಾನಾ ಕಾರಣಗಳಿದ್ದಂತೆ, ನಾನಾ ಆಯಾಮಗಳೂ, ಮುಖಗಳೂ, ರೀತಿಗಳೂ ಇವೆ. ಯಾವುದೇ ಆದರೂ ಗುರುತು ಹಚ್ಚಲು ಸಾಕಷ್ಟು ಸಾಧ್ಯವಿದೆ. ಮಾನಸಿಕ, ಭಾವನಾತ್ಮಕ ಮತ್ತು ಸಾಂದರ್ಭಿಕ ಸಮಸ್ಯೆಗಳು ಮನೋರೋಗವಾಗಿ ಉಲ್ಬಣಿಸುವ ಮುನ್ನವೇ ಎಚ್ಚೆತ್ತುಕೊಳ್ಳುವ ಮತ್ತು ಉಪಚರಿಸಿಕೊಳ್ಳುವ ಅಗತ್ಯವಿದೆ.

ಮನೋರೋಗಕ್ಕೆ ಮದ್ದಿಲ್ಲ ಎಂಬ ಗಾದೆಯ ಮಾತು ತಿಳಿವಿನ ಕಾಲ ಪಕ್ವವಾಗಿಲ್ಲದಿದ್ದಾಗ ಹುಟ್ಟಿದೆ. ಆದರೆ ಇಂದು ಹಾಗಿಲ್ಲ. ವೇದ ಸುಳ್ಳಾದರೂ ಗಾದೆ ಸುಳ್ಳಲ್ಲ ಎಂಬುದೇನೂ ನಿಜವಲ್ಲ. ಆಯಾ ಕಾಲಘಟ್ಟದಲ್ಲಿ, ಆಯಾ ವ್ಯವಸ್ಥೆಗಳಿಗೆ ಅನುಗುಣವಾಗಿ ಹುಟ್ಟಿರುವ ಗಾದೆಗಳು ಎಲ್ಲ ಕಾಲಕ್ಕೂ ಸಲ್ಲುವುದಿಲ್ಲ. ಇರಲಿ, ಸಧ್ಯಕ್ಕೆ ಇಷ್ಟು ನಂಬೋಣ. ಯಾವುದೇ ಮನೋರೋಗಕ್ಕೆ ಮದ್ದಿದೆ. ಆದರೆ ಗುರುತಿಸಬೇಕು, ಒಪ್ಪಿಕೊಳ್ಳಬೇಕು ಮತ್ತು ಚಿಕಿತ್ಸೆ ನೀಡಬೇಕು. ವ್ಯಕ್ತಿಗತವಾಗಿ ಒಬ್ಬ ಮಾನಸಿಕವಾಗಿ ಆರೋಗ್ಯವಂತನಾದರೆ ಅವನು ಆರೋಗ್ಯಕರವಾದಂತಹ ಪರಿಸರ ನಿರ್ಮಿಸುವುದರಲ್ಲಿ, ಆರೋಗ್ಯಕರವಾದಂತಹ ವಾತಾವರಣವನ್ನು ಮೂಡಿಸುವುದರಲ್ಲಿ ತನ್ನ ಪಾತ್ರ ನಿರ್ವಹಿಸುತ್ತಾನೆ. ತಾನೂ ನೆಮ್ಮದಿಯಾಗಿ ಬಾಳುತ್ತಾನೆ, ಇತರರನ್ನೂ ಬಾಳಗೊಡುತ್ತಾನೆ. ಈ ದಿಕ್ಕಿನಲ್ಲಿ ಈ ಪುಸ್ತಕವೂ ಸೇರಿದಂತೆ ಡಾ ಸಿ ಆರ್ ಚಂದ್ರಶೇಖರ್ ಅವರ ಮನೋವಿಜ್ಞಾನಕ್ಕೆ ಸಂಬಂಧಪಟ್ಟ ಅನೇಕ ನವ ಕರ್ನಾಟಕ ಪ್ರಕಾಶನದಲ್ಲಿ ದೊರಕುತ್ತದೆ. ಕನ್ನಡದಲ್ಲಿ ಲಭ್ಯವಿರುವ ಈ ಪುಸ್ತಕಗಳು ನಮ್ಮ ಮಾನಸಿಕ ಸಮಸ್ಯೆಗಳನ್ನು ಗುರುತಿಸಿಕೊಳ್ಳಲು ಮತ್ತು ಪರಿಹರಿಸಿಕೊಳ್ಳಲು ನೆರವಾಗುತ್ತವೆ ಎಂಬುದರಲ್ಲಿ ಸಂಶಯವಿಲ್ಲ. ಹಾಗಂತ ಅರಿವಿನಿಂದ ಒಪ್ಪಿಕೊಳ್ಳುವುದೇ ಅಲ್ಲವೇ ನಮ್ಮ ಬಹು ದೊಡ್ಡ ಸಮಸ್ಯೆ!


ಇದನ್ನು ಓದಿ: ರೋಹಿಂಗ್ಯಾರನ್ನು ಕಂಡಲ್ಲಿ ಶೂಟ್ ಮಾಡಲು ಆದೇಶಿಸಲಾಗಿತ್ತು: ತಪ್ಪೊಪ್ಪಿಕೊಂಡ ಸೈನಿಕರು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...