Homeಅಂಕಣಗಳುಸರ್ವಾಧಿಕಾರಿಗಳಿಗೆ ಸತ್ಯವಲ್ಲ, ಗೆಲುವು ಮುಖ್ಯ!

ಸರ್ವಾಧಿಕಾರಿಗಳಿಗೆ ಸತ್ಯವಲ್ಲ, ಗೆಲುವು ಮುಖ್ಯ!

- Advertisement -
- Advertisement -

“ಸತ್ಯ ಮುಖ್ಯವಲ್ಲ; ಗೆಲುವು ಮಾತ್ರ!” ಇದು ಕುಖ್ಯಾತ ನರಹಂತಕ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ತನ್ನ ಕಟ್ಟಾ ಬೆಂಬಲಿಗರಿಗೆ ಹೇಳಿದ ಮಾತು.
ಅತ ತನ್ನ ಪಕ್ಷದ ನಾಯಕರಿಗೆ ಇನ್ನೊಂದು ಮಾತನ್ನೂ ಹೇಳಿದ್ದ. ಅದೆಂದರೆ, “ಜನರು ಹೇಳಿದಂತೆ ಕೇಳಲು ನಾವಿರುವುದಲ್ಲ; ನಾವು ಹೇಳಿದ್ದನ್ನು ಅವರು ಕೇಳುವಂತೆ ಮಾಡಬೇಕು!”
ಇಂತದ್ದೇ ಮಾತನಾಡುತ್ತಾ, ಸಾವಿರಾರು ಸುಳ್ಳುಗಳನ್ನು ಹೇಳುತ್ತಾ, ಕಮ್ಯೂನಿಸ್ಟರು, ಯಹೂದಿಗಳು ಮುಂತಾಗಿ ಬೇರೆ ಬೇರೆ ಜನವಿಭಾಗಗಳನ್ನು ದೇಶದ್ರೋಹಿಗಳು ಎಂದು ಬಿಂಬಿಸುತ್ತಾ, ಪೋಲೆಂಡ್, ಫ್ರಾನ್ಸ್ ಮುಂತಾದ ನೆರೆಯ ದೇಶಗಳನ್ನು ಚಿರಶತ್ರುಗಳು ಎಂದು ಕಾಣಿಸುತ್ತಾ, ಬಣ್ಣ ಬಣ್ಣದ ಕನಸುಗಳನ್ನು ಬಿತ್ತುತ್ತಾ, ಮೆಲ್ಲಮೆಲ್ಲನೆ ಅಧಿಕಾರಕ್ಕೇರಿ, ನಂತರ ಒಂದೇ ಏಟಿಗೆ ಎಲ್ಲಾ ಅಧಿಕಾರಗಳನ್ನು ತನ್ನ ಮುಷ್ಟಿಯೊಳಗೆ ಮಾಡಿಕೊಂಡು ಲಕ್ಷಾಂತರ ಜನರ ಯಾತನಾಮಯ ಸಾವಿಗೆ ಕಾಣನಾದ ಹಿಟ್ಲರನ ಕತೆ ಮೇಲುಮೇಲಿಗೆ ಎಲ್ಲರಿಗೂ ಗೊತ್ತಿರುವಂತದ್ದೇ!
ಇಲ್ಲಿ ನಮ್ಮದೇ ದೇಶದಲ್ಲಿಯೂ ಇಂತಹ ಪ್ರಯತ್ನಗಳು ನಡೆಯುತ್ತಿವೆಯೇ ಎಂಬುದನ್ನು ಎಚ್ಚರಿಕೆಯಿಂದ ನೋಡಬೇಕಾದ ಅಗತ್ಯವಿದೆ ಎಂದು ಹೇಳಿದರೆ ಇದು ಪ್ಯಾರನಾಯ್ಡ್ (ಹುಚ್ಚು ಭಯ) ಚಿಂತನೆ ಎಂದು ಹೇಳುವವರು ಅನೇಕರಿರಬಹುದು! ಆದರೆ, ಹಿಟ್ಲರ್ ಮೇಲೇರಿದ ರೀತಿಗೂ, ಇಲ್ಲಿಯೂ ಕಣ್ಣಿಗೆ ರಾಚುವಂತೆ ನಡೆಯುತ್ತಿರುವ ಕೆಲವು ಯೋಜಿತ ವಿದ್ಯಮಾನಗಳಿಗೂ ಇರುವ ಸಾಮ್ಯತೆಗಳನ್ನು ನಾವು ಸ್ವಲ್ಪ ಹೆಚ್ಚು ಸೂಕ್ಷ್ಮವಾಗಿ ಗಮನಿಸಿ ಹೋಲಿಸಿ ನೋಡಿದರೆ, ಇಂತಹ ಭಯ ಸಂಪೂರ್ಣ ಅಕಾರಣವಲ್ಲ ಎಂಬುದು ಗೊತ್ತಾಗುತ್ತದೆ.
ಮೊದಲಿಗೆ ಹಿಟ್ಲರ್ ಅಧಿಕಾರಕ್ಕೆ ಬಂದ ಮತ್ತು ನಂತರ ಬೆಳೆದ ರೀತಿಯನ್ನು ಗಮನಿಸೋಣ. ಆತ ಒಮ್ಮಲೇ ಅಧಿಕಾರಕ್ಕೆ ಏರಿದವನಲ್ಲ. ಸೇನಾ ಹಿನ್ನೆಲೆ ಇದ್ದರೂ ಯಾವುದೇ ಸೇನಾ ಕ್ಷಿಪ್ರ ಕ್ರಾಂತಿಯ ಮೂಲಕ ಅಧಿಕಾರಕ್ಕೆ ಬಂದವನೂ ಅಲ್ಲ! ಆತ ಮೊದಲನೆಯ ಜಾಗತಿಕ ಯುದ್ಧದಲ್ಲಿ ಸೋಲಿನ ಬಳಿಕ ಜರ್ಮನಿಯಲ್ಲಿ ಇದ್ದ ವೈಮರ್ ರಿಪಬ್ಲಿಕ್ ಎಂಬ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ರೈಕ್‍ಸ್ಟಾಗ್ ಎಂಬ ಸಂಸತ್ತಿನ ವ್ಯವಸ್ಥೆಯನ್ನೇ ಚಾಣಾಕ್ಷತನದಿಂದ ಬಳಸಿಕೊಂಡು ಅಧಿಕಾರದ ಹಜಾರದೊಳಗೆ ಜಿರಳೆಯಂತೆ ಮೀಸೆ ತೂರಿಸಿ, ನಂತರ ಇಡೀ ಹಜಾರವನ್ನೇ ಆಕ್ರಮಿಸಿದವ! ಅದೂ ಜನರ ಮೂಗಿನ ಅಡಿಯಲ್ಲಿಯೇ, ಮತ್ತು ಅವರ ಬೆಂಬಲದ ಜೊತೆಗೆಯೇ!
ಹಿಟ್ಲರ್ ಸಂದರ್ಶನವೊಂದರಲ್ಲಿ ಆಡಿದ ಮಾತನ್ನು ನಾವು ಗಮನಿಸಬೇಕು. “ಹತ್ತು ವರ್ಷಗಳ ಹಿಂದೆ ನಾನು ಜರ್ಮನಿಯನ್ನು ಆಳುತ್ತೇನೆ ಎಂದಾಗ ಜನರು ನಕ್ಕಿದ್ದರು. ನಂತರ ನಾನು ಅಧಿಕಾರಕ್ಕೆ ಬಂದಾಗಲೂ ಜನರು ನಕ್ಕಿದ್ದರು. ನಾನು ಮುಂದೆಯೂ ಅಧಿಕಾರದಲ್ಲಿ ಇರಲಿದ್ದೇನೆ ಎಂದಾಗಲೂ ಜನರು ನಗುತ್ತಲೇ ಇದ್ದಾರೆ!” ಅಂದರೆ, ಏನು ಮಾಡಿದರೂ ಮೂರ್ಖ ಜನರು ವಿರೋಧಿಸುವುದಿಲ್ಲ; ಅವರನ್ನು ಮೂರ್ಖರನ್ನಾಗಿಯೇ ಇರಿಸುವ ಕಲೆ ತನಗೆ ಸಿದ್ಧಿಸಿದೆ ಎಂಬ ಅಹಂಕಾರ ಈ ಮಾತಿನಲ್ಲಿ ಕಾಣಿಸುತ್ತಿಲ್ಲವೆ? ಇಂತಹ ಅಹಂಕಾರವನ್ನು ನೀವು ನಮ್ಮ ದೇಶದಲ್ಲಿ ಕಂಡಿದ್ದೀರಾ? ಗಮನಿಸಿದ್ದೀರಾ?!
ಜರ್ಮನಿಯಲ್ಲಿ ಲೆಕ್ಕಕ್ಕೇ ಇಲ್ಲದಿದ್ದ ಪಕ್ಷವೊಂದು ಕೆಲವು ಜನಮರುಳು ಮತ್ತು ಕುತಂತ್ರಿ ಯೋಜನೆಗಳ ಮೂಲಕ ಹೇಗೆ ಪ್ರಬಲ ಪಕ್ಷವಾಗಿ ಬೆಳೆಯಿತು ಎಂಬುದನ್ನು ನೋಡಿದರೆ ಭಾರತದಲ್ಲಿಯೂ ಇದಕ್ಕೆ ಸಮಾನಾಂತರವಾದ ಉದಾಹರಣೆ ಸಿಗುತ್ತದೆ. ತಂತ್ರಗಳಲ್ಲಿಯೂ ನೀವು ಹೋಲಿಕೆ ಕಾಣಬಹುದು.
1920ರ ತನಕ ಜರ್ಮನಿಯಲ್ಲಿ ಜರ್ಮನ್ ವರ್ಕರ್ಸ್ ಪಾರ್ಟಿ ಎಂಬ ಹೆಸರಿಗೆ ಮಾತ್ರ ಕಾರ್ಮಿಕರ, ಅದರೆ ಅಂತರಂಗದಲ್ಲಿ ತೀರಾ ಬಲಪಂಥೀಯವಾಗಿದ್ದ ಪಕ್ಷವೊಂದಿತ್ತು. ನಂತರ ಇದು ಹಿಟ್ಲರನ ನ್ಯಾಷನಲಿಸ್ಟ್ ಸೋಷಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿ (ಜರ್ಮನಿಯಲ್ಲಿ ಎನ್‍ಎಸ್‍ಡಿಎಪಿ) ಎಂದಾಯಿತು. ಆಂಟನ್ ಡ್ರೆಕ್ಸರ್ ಎಂಬಾತ ಇದರ ಸ್ಥಾಪಕ. ಕಮ್ಯುನಿಸ್ಟ್ ವಿರೋಧಿಗಳ ಈ ಕೂಟವೂ ಸಮಾಜವಾದಿ ಪದವನ್ನು ರಾಷ್ಟ್ರೀಯತೆಯ ಜೊತೆ ಬೆರೆಸಿತ್ತು! ನಮ್ಮಲ್ಲಿಯೂ ಗಾಂಧೀಜಿಯನ್ನು ಕೊಂದವರ ಬೆಂಬಲಿಗ ಪಕ್ಷವೊಂದು ಕೆಲ ಸಮಯ ರಾಷ್ಟ್ರೀಯವಾದಿ ಗಾಂಧಿಯನ್ ಸಮಾಜವಾದದ ಸ್ಲೋಗನ್ ಹಿಡಿದು ನೇತಾಡಿರಲಿಲ್ಲವೆ? “ಒಂದು ದೇಶ, ಒಂದು ಜನ, ಏಕೈಕ ನಾಯಕ” ಎಂಬುದು ಅದರ ಏಕೈಕ ಘೋಷಣೆ.
ಇದಕ್ಕಿಂತ ಮುಂಚೆ ಬವೇರಿಯಾದ ಅರಸ ಲುಡ್ವಿಗ್ III ಎಂಬಾತನ ಕಾಲದಲ್ಲಿ ಮೊದಲ ಮಹಾಯುದ್ಧ ಆರಂಭವಾಗಿತ್ತು! ಇದು 1914ರಲ್ಲಿ ಆರಂಭವಾಗಿ ಜರ್ಮನಿಯ ಹೀನಾಯ ಸೋಲಿನೊಂದಿಗೆ ಕೊನೆಗೊಂಡಿತು. ಜರ್ಮನಿಯು 1918ರಲ್ಲಿ ಅವಮಾನಕಾರಿ ಶರತ್ತುಗಳಿದ್ದ ಶರಣಾಗತಿ ಒಪ್ಪಂದಕ್ಕೆ ಸಹಿಹಾಕಬೇಕಾಯಿತು. ಇದನ್ನೇ ಮುಂದೆ ಹಿಟ್ಲರ್ ಜರ್ಮನರಲ್ಲಿ ಹುಸಿ ದೇಶಪ್ರೇಮ ಬಡಿದೆಬ್ಬಿಸಲು ಬಳಸಿಕೊಂಡ. ನಮ್ಮಲ್ಲಿ ದೇಶ ವಿಭಜನೆ, ಪಾಕಿಸ್ತಾನ ಮತ್ತು ಚೀನಾ ಜೊತೆಗಿನ ಯುದ್ಧವನ್ನು ಈಗಲೂ ದ್ವೇಷವನ್ನು ಜೀವಂತವಾಗಿಡಲು ಬಳಸಿಕೊಳ್ಳುತ್ತಿರುವ ಮಾದರಿಯೇ ಇದು! ಜರ್ಮನಿಯಲ್ಲಿ ಮೇಲ್ನೋಟಕ್ಕೆ ಪ್ರಜಾಪ್ರಭುತ್ವ ಎನಿಸಿಕೊಂಡ ವೈಮರ್ ರಿಪಬ್ಲಿಕ್ ಸ್ಥಾಪನೆಯಾಯಿತು.
ಜರ್ಮನರ ಮೇಲೆ ಸವಾರಿ ಮಾಡಿದ್ದ ಹಿಟ್ಲರ್ ಮೂಲತಃ ಆಸ್ಟ್ರಿಯಾದವನು. ಆತ ಜರ್ಮನ್ ಪ್ರಜೆಯೂ ಆಗಿರಲಿಲ್ಲ. ಅದರೆ, ರಾಜ ಲುಡ್ವಿಗ್‍ನ ಶಿಫಾರಸು ಪಡೆದು ಸೇನೆಯ ಬವೇರಿಯನ್ ರೆಜಿಮೆಂಟ್ ಒಂದಕ್ಕೆ ಸೇರಿದ. ನಂತರ ಗುಪ್ತಚರ ಅಧಿಕಾರಿಯಾದ. ಇಲ್ಲಿ ಪಡೆದ ಸೇನಾಧಿಕಾರಿಗಳ ಗುಪ್ತ ಸಂಪರ್ಕಗಳನ್ನು ಆತ ಮುಂದೆ ಚೆನ್ನಾಗಿ ಬಳಸಿಕೊಂಡ. ಇಲ್ಲಿಯೂ ಕೆಲವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಾವು ವೇಷ ಮರೆಸಿ ಪಕ್ಷದ ಗುಪ್ತಚರನಾಗಿ ತಿರುಗಾಡುತ್ತಿದ್ದಾಗಿ ಹೇಳಿಕೊಳ್ಳುತ್ತಾರೆ!
ಯುದ್ಧ ಮುಗಿದ ತಕ್ಷಣವೇ ಆತ 1919ರಲ್ಲಿಯೇ ಜರ್ಮನ್ ವರ್ಕರ್ಸ್ ಪಾರ್ಟಿ ಸೇರಿದ. ಅದು ಎನ್‍ಎಸ್‍ಡಿಎಪಿ ಆದಾಗ, ಅವನ ಪ್ರಭಾವ ಬೆಳೆಯಿತು. 1920ರಲ್ಲಿ ಕೇವಲ ಅರವತ್ತಕ್ಕೂ ಕಡಿಮೆ ಇದ್ದ ಸದಸ್ಯ ಬಲವನ್ನು ಆತ 1945ರ ಹೊತ್ತಿಗೆ 85 ಲಕ್ಷಕ್ಕೆ ಏರಿಸಿದ್ದ. ಜನರನ್ನು ಉದ್ರೇಕಿಸಿ, ಸುಳ್ಳುಹೇಳಿ ರೊಚ್ಚಿಗೆಬ್ಬಿಸುವ ಕಲೆ ಆತನಿಗೆ ಸಿದ್ದಿಸಿತ್ತು. ಆತನ ಭಾಷಣ ನಾಟಕೀಯವಾಗಿರುತ್ತಿತ್ತು. ಕೈಕಾಲು ಆಡಿಸುತ್ತಾ ಭಯಂಕರ ಹಾವಭಾವ, ಅಣಕಗಳೊಂದಿಗೆ ಜನರನ್ನು ಹುಚ್ಚೆಬ್ಬಿಸಿ ಮೈಮರೆಯುವಂತೆ ಮಾಡುತ್ತಿದ್ದ. ಇದರಿಂದ ಅವನ ಜನಪ್ರಿಯತೆ ಹೆಚ್ಚಿತು.
ಪಕ್ಷವನ್ನು ಬೆಳೆಸಲು ಹಲವು ಕುಟಿಲ ತಂತ್ರಗಳನ್ನು ಬಳಸಿಕೊಂಡ. ಹಿಂದೆ ರಾಜಸತ್ತೆ ಇದ್ದ ಬವೇರಿಯಾದಲ್ಲಿ ಕ್ಯಾಥೊಲಿಕ್ ಕ್ರೈಸ್ತರು ಪ್ರಬಲರಾಗಿದ್ದರು. ಅವರಿಗೆ ಪ್ರೊಟೆಸ್ಟೆಂಟ್ ಪ್ರಾಬಲ್ಯ ಇರುವ ಬರ್ಲಿನ್ ಆಡಳಿತದ ಮೇಲೆ ಅಸಮಾಧಾನವಿತ್ತು. ಅದನ್ನು ಬಳಸಿಕೊಂಡ. ಕಮ್ಯುನಿಸ್ಟ್ ಮತ್ತು ಯಹೂದಿ ವಿರೋಧಿ ನಿಲುವನ್ನು ತೀವ್ರಗೊಳಿಸಿದ. ಸಂಘರ್ಷ-ಹೊಡೆದಾಟಗಳೂ ತೀವ್ರಗೊಂಡವು. ಪರಿಣಾಮವಾಗಿ 1920ರಲ್ಲಿ ನಡೆದ ಚುನಾವಣೆಯಲ್ಲಿ ಆತನ ಪಕ್ಷ 555 ಸದಸ್ಯ ಬಲದ ರೈಖ್‍ಸ್ಟಾಗ್‍ನಲ್ಲಿ 101 ಸ್ಥಾನ ಗಳಿಸಿತು. ಇದಕ್ಕೆ ಕಾರಣ ಜನರಲ್ಲಿ ಯುದ್ಧದ ಸೋಲಿನ ಅವಮಾನವಿದ್ದು, ದೇಶಪ್ರೇಮದ ಹೆಸರು ಹೇಳಿ ಮತ ಪಡೆಯುವುದು ಸುಲಭವಾಗಿತ್ತು!
ನಂತರ ಆತನ ಪ್ರಭಾವ ಪಕ್ಷದೊಳಗೆ ಎಷ್ಟು ಹೆಚ್ಚಾಯಿತೆಂದರೆ, ಹಿಟ್ಲರ್ ಅಂದರೆ ಪಕ್ಷ, ಪಕ್ಷ ಎಂದರೆ ಹಿಟ್ಲರ್ ಎಂಬಂತಾಯಿತು. ನಮ್ಮಲ್ಲಿಯೂ ವ್ಯಕ್ತಿಯ ಹೆಸರಿನಲ್ಲಿ ಬ್ರಿಗೇಡುಗಳು, ಟೀಮುಗಳು, ಕಿಡಿಗೇಡಿ ಪುಂಡರ ಪಡೆಗಳು ಸ್ಥಾಪನೆ ಆಗಿರುವಂತೆಯೇ ಅಲ್ಲಿಯೂ ಹಿಟ್ಲರ್ ಯೂತ್ ಲೀಗ್, ಮಹಿಳೆಯರ ಲೀಗ್, ಕಾರ್ಮಿಕರ ಲೀಗ್, ಶಿಕ್ಷಕರ ಲೀಗ್ ಇತ್ಯಾದಿ ಸ್ಥಾಪನೆಯಾದವು.
1923ರಲ್ಲಿ ಪಕ್ಷದಲ್ಲಿ ಸೆಕ್ಯುರಿಟಿ ಗಾರ್ಡ್‍ಗಳಂತೆ ನಿರುದ್ಯೋಗಿ ಯುವಕರ ಗೂಂಡಾ ಪಡೆಯನ್ನು ಸ್ಥಾಪಿಸಲಾಯಿತು. ಜೊತೆಗೆ ಸಶಸ್ತ್ರ ಸೇನಾ ವಿಭಾಗವಾಗಿ ಶುಟ್ಝ್ ಸ್ಟಾಫೆಲ್ (Sಣಚಿಜಿಜಿ ಉuಚಿಡಿಜ) ಎಂಬ ಅಂಧ ಭಕ್ತರ ಕ್ರೂರ ಪಡೆಯನ್ನು ಸ್ಥಾಪಿಸಲಾಯಿತು. ಇದುವೇ ಮುಂದೆ ಎಸ್‍ಎಸ್ ಎಂದು ಕುಖ್ಯಾತವಾಗಿ ಮೊದಲಿಗೆ ಯಹೂದಿ ಮತ್ತಿತರ ಅಲ್ಪಸಂಖ್ಯಾತ ಜನಾಂಗಗಳು ಮತ್ತು ಕಮ್ಯುನಿಷ್ಟರ ಮೇಲೆ ಗೂಂಡಾಗಿರಿಗೆ ಬಳಕೆಯಾಯಿತು. ಹಿಟ್ಲರ್ ಅಧಿಕಾರಕ್ಕೆ ಬಂದ ಮೇಲೆ ಸೇನೆಯ ಭಾಗವಾಗಿ ವರ್‍ಮ್ಯಾಷ್ ಎನ್ನಲಾಗುತ್ತಿದ್ದ, ಅಧಿಕೃತ ಸೇನೆಯ ಅಧಿಕಾರಿಗಳೂ ಹೆದರುತ್ತಿದ್ದಂತೆ ಕೊಲೆಗಡುಕ ವಿಭಾಗವಾಯಿತು!
ಇದೇ ಹೊತ್ತಿಗೆ ಯುದ್ದದಲ್ಲಿ ಹಿಟ್ಲರನ ಸಾಹಸಗಳ ಬಗ್ಗೆ ಕಟ್ಟುಕತೆಗಳನ್ನು ಹರಿದುಬಿಡಲಾಯಿತು. ಆತ ಹಿಂದೊಮ್ಮೆ ಪ್ಯಾರಿಸ್‍ನಲ್ಲಿ ಚಿತ್ರಕಲಿಯಲು ಹೋಗಿ ಅರ್ಧದಲ್ಲೇ ಬಿಟ್ಟುಬಂದಿದ್ದ. ಅದನ್ನೇ ಉತ್ಪೇಕ್ಷಿಸಿ ಆತ ಮಹಾನ್ ಕಲೆಗಾರ, ಕವಿ ಹೃದಯಿ ಇತ್ಯಾದಿ ಬೊಗಳೆಗಳನ್ನು ಹರಿಯಬಿಡಲಾಯಿತು. ನಮ್ಮಲ್ಲಿಯ ಚಹಾ ಮಾರಾಟ, ಹಿಮಾಲಯದಲ್ಲಿ ತಿರುಗಾಟ, ಮೊಸಳೆಯೊಂದಿಗೆ ಹೋರಾಟ, ಎಂಟೈರ್ ಪೊಲಿಟಿಕಲ್ ಸಾಯನ್ಸ್ ಇತ್ಯಾದಿಗಳು ಓದುಗರಿಗೆ ನೆನಪಿಗೆ ಬಂದರೆ ಅಚ್ಚರಿಯಿಲ್ಲ!
ಇಷ್ಟು ಹೊತ್ತಿಗೆ ಹಿಟ್ಲರ್ ಒಂದು ದುಸ್ಸಾಹಸಕ್ಕೆ ಕೈ ಹಾಕಿದ. 1923ರಲ್ಲಿ ಸಶಸ್ತ್ರವಾಗಿ ಅಧಿಕಾರ ಪಡೆಯುವ ಈ ವಿಫಲ ಯತ್ನವನ್ನು ಬಿಯರ್ ಹಾಲ್ ದಂಗೆ ಎಂದು ಕರೆಯಲಾಗುತ್ತದೆ. ತನ್ನ ವಿರುದ್ದ ನಡೆದ ದೇಶದ್ರೋಹದ ವಿಚಾರಣೆಯನ್ನು ಚೆನ್ನಾಗಿ ಬಳಸಿಕೊಂಡ ಆತ, ನಾನು ಯುದ್ಧದಲ್ಲಿ ಹೋರಾಡಿದ ವೀರನೆಂದೂ, ತನ್ನನ್ನೇ ರಾಷ್ಟ್ರದ್ರೋಹಿ ಎಂದು ಜೈಲಿಗಟ್ಟುವ ಸಂಚು ನಡೆಯುತ್ತಿದೆ ಎಂದೂ ಬಿಂಬಿಸಿದ. ಆದರೂ ಆತನಿಗೆ ಐದು ವರ್ಷ ಜೈಲಾಯಿತು. ಅದರೆ, ಆತ ಪ್ರಾಸಿಕ್ಯೂಟರ್‍ಗಳ ವಿರೋಧದ ನಡುವೆಯೂ 1924ರಲ್ಲೇ ಹೊರಬಂದ.
ಜೈಲಿನಲ್ಲಿ ಇದ್ದ ಅವಧಿಯನ್ನು ಚೆನ್ನಾಗಿ ಬಳಸಿಕೊಂಡು ‘ಮೈನ್ ಕಾಂಫ್’ ಎಂಬ ಅತ್ಮಚರಿತ್ತಾತ್ಮಕ ಪುಸ್ತಕ ಬರೆದು ತನ್ನನ್ನು ಮಹಾತ್ಮನಂತೆ ಚಿತ್ರಿಸಿದ್ದಲ್ಲದೇ, ತನ್ನ ದ್ವೇಷದ ವಿಚಾರಧಾರೆಗೆ ದೇಶಪ್ರೇಮ ಮತ್ತು ರಾಷ್ಟ್ರೀಯತೆಯ ಬಣ್ಣ ನೀಡಿ ಅದಕ್ಕೊಂದು ತತ್ವದ ರೂಪ ನೀಡಿದ. ಅದು ಯುವಜನರಲ್ಲಿ ದ್ವೇಷದ ಬೀಜ ಬಿತ್ತಿತು.
ಇಷ್ಟಿದ್ದರೂ 1928ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅತ ಸ್ಪರ್ಧಿಸಿದಾಗ ಸಿಕ್ಕಿದ ಮತ ಕೇವಲ 1.1 ಶೇಕಡಾ ಮಾತ್ರ. ಆದರೂ ಮುಂದಿನ ಕೆಲವೇ ವರ್ಷಗಳಲ್ಲಿ ಆತ ಆ ಮಟ್ಟಕ್ಕೆ ಅಪಾಯಕಾರಿಯಾಗಿ ಬೆಳೆದದ್ದು ಹೇಗೆ? ಇದಕ್ಕೆ ಕಾರಣಗಳೇನು!? ಐತಿಹಾಸಿಕ ಪರಿಸ್ಥಿತಿ ಹಾಗಿತ್ತು ಎನ್ನೋಣವೆ? ಜರ್ಮನ್ ಜನರ ಮೂರ್ಖತನ ಎನ್ನೋಣವೇ? ಆತನ ಚಾಣಾಕ್ಷತನ ಎನ್ನೋಣವೇ? ಅಥವಾ ಬಂಡವಾಳಿಗರ ಸಂಚು ಎನ್ನೋಣವೆ? ವಿರೋಧಿಗಳ ಅಸಡ್ಡೆ ಅಥವಾ ನಿಷ್ಕ್ರಿಯತೆ ಎನ್ನೋಣವೆ!? ಈ ಕುರಿತು ಮುಂದೆ ನೋಡೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....