Homeಕರ್ನಾಟಕಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದ್ದಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮವಾಗಿ ಘೋಷಿಸಿಲ್ಲವಾದರೂ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಹುರಿದುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ದೇವಸ್ಥಾನಗಳಿಗೆ ಹಣ ಕೊಡುವ ಹಾಗೂ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಚಾರ ಮುಂದಿಟ್ಟು ಮತಯಾಚನೆಯಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಜನರಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮದಲೂರು ಕೆರೆಗೆ ನೀರು ಹರಿಸುವಂತೆ ಮನವಿ ಮಾಡಲಾಗಿದೆ. ಮದಲೂರು ಕೆರೆಗೆ ಯಾವುದೇ ಅಲೋಕೇಷನ್ ಇಲ್ಲ. ಆದರೂ ವಿಶೇಷ ಪ್ರಕರಣವೆಂದು ಪರಿಗಣಿಸಿ ಹೇಮಾವತಿ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಇದುವರೆಗೂ ಮೌನವಾಗಿದ್ದ ಬಿಜೆಪಿ ಮುಖಂಡರು ಉಪಚುನಾವಣೆ ಎದುರಾಗಿರುವಾಗಲೇ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

ದನಕರುಗಳು ನೀರಿಲ್ಲದೆ ಮೇವಿಲ್ಲದೆ ಚಕ್ಕಳೆ ಬಿಟ್ಟುಕೊಂಡಿವೆ ಮತ್ತು ಜನರಿಗೆ ಕುಡಿಯುವ ನೀರಿಲ್ಲ. ಪ್ಲೋರೈಡ್ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಇದೆ. ಮದಲೂರು ಕೆರೆಗೆ ನೀರು ಹರಿಸಿದರೆ ಈ ಭಾಗದಲ್ಲಿ ಏಳೆಂಟು ವರ್ಷ ಅಂತರ್ಜಲ ಹೆಚ್ಚಳವಾಗುತ್ತದೆ. ಪಶುಪಕ್ಷಿಗಳಿಗೂ ನೀರು ಲಭ್ಯವಾಗುತ್ತದೆ ಎಂದು ಸಿಎಂ. ಬಿ.ಎಸ್.ಯಡಿಯೂರಪ್ಪಅವರಿಗೆ ಭಾವನಾತ್ಮಕವಾಗಿ ಮನವಿ ಪತ್ರ ಸಲ್ಲಿಸಿದ್ದು ಇದು ಮತದಾರರ ಮೇಲೂ ಪರಿಣಾಮ ಬೀರಲಿದೆ. ಮತದಾರರನ್ನು ಭಾವನಾತ್ಮಕ ವಿಚಾರಗಳಿಂದ ಸೆಳೆಯಲು ಇದು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ ಅವರು ಜೀವಂತವಾಗಿರುವವರೆಗೆ ಮೌನವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ ಅವರು ಶಿರಾದ ಬಿ.ಕೆ.ಮಂಜುನಾಥ್ ಎಸ್.ಆರ್.ಗೌಡರನ್ನು ನಿಯೋಗದಲ್ಲಿ ತೆರಳಿ ನೀರಿನ ಅಲೋಕೇಷನ್ ಇಲ್ಲದ ಮದಲೂರು ಕೆರೆಗೆ ಹೇಮವಾತಿ ನೀರು ಹರಿಸುವ ವಿಫಲ ಯತ್ನಕ್ಕೆ ಕೈಹಾಕಿರುವುದು ರಾಜಕೀಯ ಗಿಮಿಕ್. ಸಧ್ಯಕ್ಕಂತೂ ನೀರು ಹರಿಸಲು ಸಾಧ್ಯವಿಲ್ಲ. ಬಿಜೆಪಿ ಮುಖಂಡರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದರು. ನಂತರ ಕೆಲ ಹೊತ್ತು ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸಮಾಲೋಚನೆ ಮಾಡಿದರು. ಈ ಮೂಲಕ ಚುನಾವಣೆ ಘೋಷಣೆಗೂ ಮೊದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆಪದಲ್ಲಿ ಪ್ರಚಾರವೂ ನಡೆದಿದೆ.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡಿದ್ದು ಈ ಬಗ್ಗೆ ಬಿಜೆಪಿ ಮುಖಂಡರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಬಿಜೆಪಿಯ ಆರ್. ಅಶೋಕ್  ಗಣಿ ಮಾಲಿಕರೂ ಆದ ಸಚಿವ ಆನಂದ ಸಿಂಗ್ ಬಂದು ಹೋಗಿರುವುದು ಕ್ಷೇತ್ರದ ಮತದಾರರಲ್ಲಿ ಕುತೂಹಲವನ್ನು ಹೆಚ್ಚಿಸಿದೆ..

ಚುನಾವಣೆ ಘೋಷಣೆಗೂ ಮುನ್ನವೇ ಶಿರಾ ಕ್ಷೇತ್ರದಲ್ಲಿ ರಾಜಕೀಯ ಕಾವು ತೀವ್ರ ಗತಿಯಲ್ಲಿ ಏರತೊಡಗಿದೆ. ಬಿಜೆಪಿ ಪ್ರಚಾರದಲ್ಲಿ ಮುಂದಿದ್ದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತಾರೂಢ ಪಕ್ಷದ ಪಟ್ಟುಗಳಿಗೆ ಪ್ರತಿ ತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿವೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...