Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...