Homeಕರ್ನಾಟಕಮುಂದಿನ ವರ್ಷದಿಂದ 'ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್' ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ, ಮುಂದಿನ ವರ್ಷ ರೈತರೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಿದ್ದು, ಆ್ಯಪ್ ಮೂಲಕ ರಾಜ್ಯದಲ್ಲಿ ಬಿತ್ತನೆಯಾಗಿರೋ ಬೆಳೆಗಳ ಕುರಿತು ನಿಖರ ಮಾಹಿತಿ ಕಲೆಹಾಕಲು ನಿರ್ಧರಿಸಲಾಗಿದೆ. ಆದರೆ ಈ ಆ್ಯಪ್‌ ಮೂಲಕ ತಾವು ಹೊಲಗಳಲ್ಲಿ ಬೆಳೆಯುತ್ತಿರುವ ಬೆಳೆ ಬಗ್ಗೆ ರೈತರೇ ಸಂಪೂರ್ಣ ಮಾಹಿತಿ ಒದಗಿಸಬೇಕಾಗುತ್ತದೆ.

ತಮ್ಮ ಹೊಲಗಳಿಗೆ ಹೋಗಿ ಫೋಟೋ ತೆಗೆದು ಆಪ್‌ಲೋಡ್ ಮಾಡುವ ಜೊತೆಗೆ ಆ್ಯಪ್‌‌ನಲ್ಲಿ ಕೇಳಲಾದ ಪ್ರಶ್ನೆಗಳಿಗೂ ಅಲ್ಲಿಯೇ ಉತ್ತರ ನೀಡಬೇಕು. ಏಕೆಂದರೆ, ಜಿಪಿಎಸ್ ಮೂಲಕ ಹೊಲ ಇರುವ ಗ್ರಾಮ, ಹೋಬಳಿ, ಸರ್ವೆ ನಂಬರ್ ಇತ್ಯಾದಿ ವಿವರಗಳನ್ನು ತಾಳೆ ಮಾಡಿ ನೋಡಬೇಕಾದ ಕಾರಣ ಸರ್ವೆ ನಂಬರ್ ನೀಡಿರುವ ಹೊಲದಿಂದಲೇ ಎಲ್ಲ ವಿವರ ತುಂಬಬೇಕು. ಇಲ್ಲದಿದ್ದರೇ ಬೆಳೆ ವಿಮೆಯಾಗಲಿ, ಪರಿಹಾರವಾಗಲಿ ರೈತರಿಗೆ ಸಿಗುವುದಿಲ್ಲ.

ಆದರೆ ವಿವರ ತುಂಬಲು ನೀಡಲಾಗಿದ್ದ ಅವಧಿ ಮುಗಿದು, ದಿನಾಂಕ ವಿಸ್ತರಿಸಿದ್ದರೂ ಶೇಕಡಾ 50 ರಷ್ಟು ರೈತರು ಇದನ್ನು ಬಳಸಿಲ್ಲ. ಕಾರಣಗಳು ಅನೇಕ ಆ್ಯಪ್‌ಗಳನ್ನು ಬಳಸುವಷ್ಟು ತಾಂತ್ರಿಕ ಅರಿವು ರೈತರಿಗೆ ಇಲ್ಲದಿರುವುದು. ಹಳ್ಳಿಗಳಲ್ಲಿ ಸರಿಯಾದ ಇಂಟರ್‌ನೆಟ್ ಸಂಪರ್ಕ ಸಿಗದೇ ಇರುವುದು ದೊಡ್ಡ ಕಾರಣವಾಗಿವೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಆ್ಯಪ್‌ ಬಳಸಲು ರೈತರಿಗೆ ಕಷ್ಟವಾಗುವಂತಿದೆ. ಕಾರಣ ಇಲ್ಲಿನ ಹಂತಗಳು ಮತ್ತು ಗುಣಮಟ್ಟದ ಇಂಟರ್‌ನೆಟ್‌ ಕಡ್ಡಾಯವಾಗಿರುವುದು. ಆದರೂ ಕೃಷಿ ಸಚಿವರು ಮಾತ್ರ ಇದರಿಂದ ರೈತರಿಗೆ ಲಾಭ ಎನ್ನುತ್ತಲೇ ಇದ್ದಾರೆ.

ಇಂದು ಜಿಕೆವಿಕೆಯಲ್ಲಿ ನಡೆದ  ರಾಜ್ಯದ ಎಲ್ಲ ಜಿಲ್ಲೆಗಳ ಕೃಷಿ ಅಧಿಕಾರಿಗಳ ಪ್ರಗತಿಪರಿಶೀಲನೆ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‌‌ ಮಾತನಾಡಿ, ಈ ವರ್ಷ ತಂತ್ರಜ್ಞಾನ ಬಳಕೆಯ ತೊಡಕು ಮತ್ತು ಮಳೆಯಿಂದ ತೊಂದರೆ ಆಗಿರಬಹುದು. ಆದರೆ, ಬಹುತೇಕ ಕಡೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ ಎಂದರು.

PC: twitter@Kourava B.C.Patil

ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ಈ ವರ್ಷ ಪ್ರಾಯೋಗಿಕವಾಗಿ ಆರಂಭಿಸಿದ್ದರೂ ಮುಂದಿನ ವರ್ಷ ರೈತರು ತಾವೇ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕು ಎಂದು ಕೃಷಿ ಸಚಿವರು ಹೇಳಿದ್ದಾರೆ.

ಸರ್ಕಾರದ ಸೌಲಭ್ಯಗಳನ್ನು ಪಡೆಯಲು ರೈತರು ಆ್ಯಪ್‌ ಮೂಲಕ ತಪ್ಪದೇ ಬೆಳೆ ಸಮೀಕ್ಷೆ ನಡೆಸಬೇಕು. ರೈತರೇ ಸ್ವಯಂ ಬೆಳೆ ಸಮೀಕ್ಷೆ ನಡೆಸುವುದಕ್ಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಹೆಚ್ಚು ಹೆಚ್ಚು ರೈತರು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು ಎಂದರು.

ಇನ್ನು ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರದ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದು. ಆದರೆ ಕೊರತೆಯಿಲ್ಲ. ಕಾಳಸಂತೆಕೋರರು ಮತ್ತು ಸುಳ್ಳು ಸುದ್ದಿಹಬ್ಬಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲ ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯೂರಿಯಾ ಕೊರತೆ ನೀಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...