Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಅತ್ಯಂತ ಕ್ರೂರವಾಗಿ ಯುವತಿಯನ್ನು ಕೊಲ್ಲಲಾಗಿದ್ದು ಕೊಲೆಗಾರನಿಗೂ ಅಂತಹದ್ದೇ ಶಿಕ್ಷೆ ನೀಡಬೇಕು ಎಂದು ಹಲವರು ಯುಪಿ ಪೋಲಿಸರೊಂದಿಗೆ ಆಗ್ರಹಿಸಿದ್ದರು.

- Advertisement -
- Advertisement -

ಯುವತಿಯೊಬ್ಬಳನ್ನು ಕೊಡಲಿಯಿಂದ ಅಮಾನುಷವಾಗಿ ಹತ್ಯೆಗೈದ ವಿಡಿಯೋ  ಸಾಮಾಜಿಕ ಜಾಲತಾಣಲ್ಲಿ ಹರಿದಾಡುತ್ತಿದ್ದು, ಇದು ಭಾರತದಲ್ಲಿ ನಡೆದ ಘಟನೆಯಾಗಿದೆ ಎಂದು ವೈರಲ್‌ ಆಗಿದೆ. ವೀಡಿಯೊದಲ್ಲಿ ಯುವತಿಯೊಬ್ಬಳನ್ನು ಕಟ್ಟಿ, ಸಾಯುವವರೆಗೂ ಕೊಡಲಿಯಿಂದ ತಲೆಗೆ ಕ್ರೂರವಾಗಿ ಹೊಡೆಯುವುದು ದಾಖಲಾಗಿದೆ.

ವಿಡಿಯೋ ಅತೀ ಹಿಂಸಾತ್ಮಕ ಆಗಿರುವುದರಿಂದ ಅದನ್ನು ನಾನುಗೌರಿ.ಕಾಮ್‌ ಪ್ರಸಾರ ಮಾಡುತ್ತಿಲ್ಲ.

ಹಲವಾರು ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಭಾರತದ್ದು ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌‌ಗಳಲ್ಲಿ “ಮಾನವೀಯತೆ ಸತ್ತಿದೆ. ಇದು ಅನಾಗರಿಕ, ಆಘಾತಕಾರಿ. ಅವನನ್ನು ಕೂಡಾ ಅದೇ ರೀತಿಯಲ್ಲಿ ಶಿಕ್ಷಿಸುವಂತೆ ನಾನು ದೇಶದ ಎಲ್ಲ ಪೊಲೀಸರನ್ನು ವಿನಂತಿಸುತ್ತೇನೆ” ಎಂದು ಬರೆದಿದ್ದಾರೆ. ಟ್ವೀಟ್‌ ಅನ್ನು ಯುಪಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದ್ದು, ಇದು ಭಾರತ ವಿಡಿಯೋ ಆಗಿರಬಹುದು ಎಂದು ಪ್ರತಿಪಾದಿಸುತ್ತದೆ.

ಪೇಸ್‌ಬುಕ್ ಸ್ಕ್ರೀನ್‌ಶಾರ್ಟ್

ಫ್ಯಾಕ್ಟ್‌‌ಚೆಕ್‌

ವಿಡಿಯೋಗಳನ್ನು ಹಲವಾರು ಕೀಫ್ರೇಮ್‌ಗಳಾಗಿ ವಿಭಜಿಸಿ ಅವುಗಳನ್ನು ರಿವರ್ಸ್ ಸರ್ಚ್ ಮಾಡಿದಾಗ ಇದರ ಬಗೆಗಿನ ವರದಿ ರೆಡ್ಡಿಟ್‌ನಲ್ಲಿ ಕಂಡುಕೊಳ್ಳಲಾಗಿದೆ. ಬ್ರೆಜಿಲ್‌ನಲ್ಲಿ ಮಹಿಳೆಯನ್ನು ಕೊಲ್ಲಲಾಗಿದೆ ಎಂದು ತೋರಿಸಿಸುವ ಮಾಹಿತಿಯೊಂದಿಗೆ ವೀಡಿಯೊವನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಇಷ್ಟೇ ಅಲ್ಲದೆ ಕೀವರ್ಡ್‌ಗಳನ್ನು ಬಳಸಿ ಜಾಲತಾಣದಲ್ಲಿ ಮತ್ತಷ್ಟು ಹುಡುಕಾಟ ನಡೆಸಿದಾಗ ಫೇಸ್‌ಬುಕ್‌ನಲ್ಲಿ, “ಫೆಮಿನಿಕೇಡಿಯೊ – ಪ್ಯಾರೆಮ್ ಡೆ ನಾಸ್ ಮಾತಾರ್” ಎಂಬ ಪೇಜ್‌ನಲ್ಲಿ ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅಲ್ಲಿ ಸೆಪ್ಟೆಂಬರ್ 1 ರ ಪೋಸ್ಟ್, ಥಾಲಿಯಾ ಟೊರೆಸ್ ಡಿ ಸೋಜಾ ಎಂಬ 23 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್ ಪ್ರಕಾರ, ಈ ಘಟನೆ ಬ್ರೆಜಿಲ್‌ನ ಫೋರ್ಟಲೆಜಾದ ಗ್ರ್ಯಾಂಜಾ ಪೋರ್ಚುಗಲ್‌ನಲ್ಲಿ ನಡೆದಿದೆ. ಮೃತ ದೇಹವು ಅತ್ಯಂತ ಹಿಂಸಾತ್ಮಕ ಸಾವಿನ ಚಿಹ್ನೆಗಳನ್ನು ಹೊಂದಿದ್ದು, ಬಹುಶಃ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಲಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಇದಲ್ಲದೆ, ಯುವತಿಯ ಹೆಸರನ್ನು ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಕೀವರ್ಡ್ ಮೂಲಕ ಹುಡುಕಾಟ ನಡೆಸಿದಾಗ ಅರಾಕಟಿ ಪೋಲೇಶಿಯಾ 24 ಹೆಚ್ಎಸ್ ಎಂಬ ಪೇಜ್‌ನಲ್ಲೂ ಈ ಬಗ್ಗೆ ಬರೆಯಲಾಗಿದ್ದು, ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದಲ್ಲಿರುವ ಮಹಿಳೆಯಂತೆಯೇ ಅದೇ ಬಟ್ಟೆಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ ಗೂಗಲ್‌ನಲ್ಲಿ ಯುವತಿಯ ಹೆಸರಿನೊಂದಿಗೆ ಹುಡುಕಾಟ ನಡೆಸಿದಾಗ ಕೂಡಾ ಘಟನೆಯ ಕುರಿತು ಸಿಎನ್‌ನ್ಯೂಸ್ ವರದಿ ಮಾಡಿರುವ ಸುದ್ದಿಯನ್ನು ಓದಬಹುದಾಗಿದೆ.

ಆದ್ದರಿಂದ, ಕ್ರೂರವಾಗಿ ಕೊಲ್ಲಲ್ಪಟ್ಟ ಈ ಮಹಿಳೆಯ ವೀಡಿಯೊ ಬ್ರೆಜಿಲ್‌ನದ್ದಾಗಿದ್ದು, ಭಾರತದಲ್ಲಿ ಸಂಭವಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳಾಗಿದೆ ಎಂದು ಈ ಮೂಲಕ ತಿಳಿದುಕೊಳ್ಳಬಹುದು.


ಇದನ್ನೂ ಓದಿ:  ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...