Homeಮುಖಪುಟಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ಮತ್ತು ಬಾಲಿವುಡ್ ನಟಿ ಕಂಗನಾ ರಾಣಾವತ್ ನಡುವಿನ ಜಟಾಪಟಿಯಿಂದ ದೂರ ಉಳಿಯಲು ಕೇಂದ್ರ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

“ಹೌದು, ಇದು ಹೆಚ್ಚು ರಾಜಕೀಯಗೊಳಿಸಿದ ವಿಷಯವಾಗಿದೆ. ಬಿಜೆಪಿ ಬಯಸುವುದು ಕೂಡ ಇದನ್ನೇ. ಕೋವಿಡ್ ಮತ್ತು ಆರ್ಥಿಕತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸದಂತೆ ಅವರು ಇಡೀ ರಾಜಕೀಯವನ್ನು ವಿವಾದಕ್ಕೆ ಎಳೆಯಲು ಬಯಸುತ್ತಾರೆ ” ಆದ್ದರಿಂದ, ಇದರಿಂದ ದೂರವಿರಲು ಮತ್ತು ಅವರ ಬಲೆಗೆ ಬೀಳದಂತೆ ನಾವು ತತ್ವಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದೇವೆ ಎಐಸಿಸಿ ಮಾಧ್ಯಮ ವಿಭಾಗದ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಆದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಹೇಳಿಕೆಗಳು ಶಿವಸೇನೆಯನ್ನು ಹೆಚ್ಚು ಕೆಣಕಿದ್ದವು.

ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ನಂತರ ಬುಧವಾರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಸದ್ಯ ಬಿಜೆಪಿ ಆಕೆಯ ಹೇಳಿಕೆ ವಿರೋಧಿಸುತ್ತಲೇ ರಾಣಾವತ್‌ಗೆ ಬೆಂಬಲ, ರಕ್ಷಣೆ ಕೊಡಲು ಆರಂಭಿಸಿದೆ.

ಶಿವಸೇನಾ ಪ್ರಸ್ತುತ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯೊಂದಿಗೆ ಪಾಲುದಾರರಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ.

ಇದನ್ನೂ ಓದಿ: ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯ!

ಕೇಂದ್ರದ ಕಾಂಗ್ರೆಸ್ ನಾಯಕರು ಈ ವಿವಾದದಿಂದ ದೂರವೂಳಿಯಲು ನಿರ್ಧರಿಸಿದ್ದರೇ ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಕಂಡು ಬರುತ್ತಿವೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಟಿ ರಾಣಾವತ್ ವಿವಾದದ ಮೇಲೆ ಕೇಂದ್ರೀಕರಿಸುವುದಕ್ಕಿಂತ  ಆಡಳಿತದಲ್ಲಿ ಕೋವಿಡ್ -19, ಆರ್ಥಿಕತೆ, ಚೀನಾದೊಂದಿಗಿನ ನಿಲುವು ಮುಂತಾದ ತುಂಬಾ ಮುಖ್ಯವಾದ ವಿಷಯಗಳಿವೆ ಎಂದು ತಿಳಿಸಿದ್ದಾರೆ.

“ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡಲಿ. ಕ್ರಿಮಿನಲ್ ಏಜೆನ್ಸಿಗಳಿಗೆ ಮಾಧ್ಯಮ ಅಥವಾ ಯಾವುದೇ ರಾಜಕೀಯ ಮುಖಂಡರ ಸಹಾಯ ಅಗತ್ಯವಿಲ್ಲ ”ಎಂದು ಚವಾಣ್ ಹೇಳಿದರು.

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿವೋರಾ ಕೂಡ ರಾಜಕೀಯ ಬಿಟ್ಟು ಮುಖ್ಯವಾದ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

ಮುಂಬೈನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ನಿರುಪಮ್ ಅವರು ಬಿಎಂಸಿಯ ಈ ಕ್ರಮವನ್ನು “ಪ್ರತೀಕಾರದ ಕ್ರಮ” ಎಂದು ಬಣ್ಣಿಸಿದ್ದಾರೆ. ಹೈಕೋರ್ಟ್ ಈ ಕ್ರಮವನ್ನು ತಪ್ಪೆಂದು ಪರಿಗಣಿಸಿ ತಕ್ಷಣ ಅದನ್ನು ತಡೆಹಿಡಿದಿದೆ. ಇಡೀ ಕ್ರಮವು ಪ್ರತೀಕಾರದಿಂದ ಕೂಡಿದೆ. ಆದರೆ ಸೇಡು ರಾಜಕೀಯದ ರಾಜಕಾರಣ ಬಹಳ ಚಿಕ್ಕದು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, ರಾಣಾವತ್ ಮಾಡಿದ ಆರೋಪಗಳಿಗೆ ಮಾತ್ರ ಪಕ್ಷ ಉತ್ತರಿಸುತ್ತದೆ ಎಂದರು. ನಾವು ಆಡಳಿತದತ್ತ ಗಮನ ಹರಿಸುತ್ತಿದ್ದೇವೆ. ಆದರೆ ಕಂಗನಾ ಮುಂಬೈಯನ್ನು ಪಿಒಕೆಗೆ ಸಮಾನ ಎಂದು ಕರೆಯುವಾಗ, ನಾವು ಮಾತನಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

“ಘಟನೆ ನಡೆದ ಸಮಯವನ್ನು ಪ್ರಶ್ನಿಸಬಹುದು, ಆದರೆ ಅದರ ಕಾನೂನುಬದ್ಧತೆಯಲ್ಲ. ಅದು ಅಕ್ರಮ ಕಟ್ಟಡವಾಗಿದ್ದರೇ, ಅದನ್ನು ಕೆಡವಬೇಕಿದೆ,” ಎಂದರು. ಜೊತೆಗೆ ಮೋದಿ ಸರ್ಕಾರವು ಇಡಿ ಮತ್ತು ಸಿಬಿಐ ದುರುಪಯೋಗಕ್ಕೆ ಹೆಸರುವಾಸಿಯಾಗಿದೆ, ಆದರೆ ಆಗ ಯಾರೂ ಏನನ್ನೂ ಹೇಳುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಂಸಿಯ ಕ್ರಮ ತೆಗೆದುಕೊಳ್ಳುವುದನ್ನು ನಿಲ್ಲಿಸಬಹುದ್ದಿತ್ತು. ಮುಂಬೈನಲ್ಲಿ ಅಕ್ರಮ ನಿರ್ಮಾಣವು ಹೊಸತೇನಲ್ಲ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಬಿಎಂಸಿಯ ಕ್ರಮವು ಜನರಿಗೆ ಅದರ ಬಗ್ಗೆ ಅನುಮಾನಗಳನ್ನು ಮೂಡಿಸಲು ಅವಕಾಶ ನೀಡುತ್ತದೆ ಎಂದರು. ಅದು “ಕಾನೂನುಬಾಹಿರ ಕಟ್ಟಡ ಇದೆಯೇ ಎಂದು ನನಗೆ ಗೊತ್ತಿಲ್ಲ. ನಾನು ಅದರ ಬಗ್ಗೆ ಸುದ್ದಿಯಲ್ಲಿ ಮಾತ್ರ ಓದಿದ್ದೇನೆ. ನಿಖರವಾದ ಮಾಹಿತಿಯಿಲ್ಲದೆ ಈ ಕುರಿತು ಪ್ರತಿಕ್ರಿಯಿಸುವುದು ನನಗೆ ಸೂಕ್ತವಲ್ಲ. ಬಿಎಂಸಿಗೆ ತನ್ನದೇ ಆದ ನಿಯಮಗಳಿವೆ ಮತ್ತು ಅವುಗಳಿಂದ ಕಾರ್ಯ ನಿರ್ವಹಿಸಿರಬಹುದು ಎಂದೂ ತಿಳಿಸಿದ್ದಾರೆ.

ಒಟ್ಟಾರೆ ನಟಿ ಕಂಗನಾ ಮುಂಬೈನಲ್ಲಿ ಹಚ್ಚಿರುವ ಕಿಚ್ಚು ಬಾಲಿವುಡ್ ಅಂಗಳ ಬಿಟ್ಟು ರಾಜಕೀಯ ಪಕ್ಷಗಳ ಜಟಾಪಟಿಗೆ, ಮೌನಕ್ಕೆ ಕಾರಣವಾಗಿದೆ. ಯಾವಾಗ ಬಿಜೆಪಿ ಕಂಗನಾ ರಾಣಾವತ್ ಬೆಂಬಲಕ್ಕೆ ನಿಂತು ಆಕೆಗೆ ವೈ-ಪ್ಲಸ್ ಭದ್ರತೆ ನೀಡಿತೋ ಆಗಿನಿಂದ ಟ್ವಿಟ್ಟರ್‌ನಲ್ಲಿ ಬಾಲಿವುಡ್ ಮಂದಿ ಕೂಡ ಈ ಬಗ್ಗೆ ವಿರೋಧವಾಗಿ ಟ್ವೀಟ್ ಮಾಡುವುದು ಬಿಟ್ಟಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....