Homeಮುಖಪುಟಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ಮತ್ತು ಬಾಲಿವುಡ್ ನಟಿ ಕಂಗನಾ ರಾಣಾವತ್ ನಡುವಿನ ಜಟಾಪಟಿಯಿಂದ ದೂರ ಉಳಿಯಲು ಕೇಂದ್ರ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

“ಹೌದು, ಇದು ಹೆಚ್ಚು ರಾಜಕೀಯಗೊಳಿಸಿದ ವಿಷಯವಾಗಿದೆ. ಬಿಜೆಪಿ ಬಯಸುವುದು ಕೂಡ ಇದನ್ನೇ. ಕೋವಿಡ್ ಮತ್ತು ಆರ್ಥಿಕತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸದಂತೆ ಅವರು ಇಡೀ ರಾಜಕೀಯವನ್ನು ವಿವಾದಕ್ಕೆ ಎಳೆಯಲು ಬಯಸುತ್ತಾರೆ ” ಆದ್ದರಿಂದ, ಇದರಿಂದ ದೂರವಿರಲು ಮತ್ತು ಅವರ ಬಲೆಗೆ ಬೀಳದಂತೆ ನಾವು ತತ್ವಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದೇವೆ ಎಐಸಿಸಿ ಮಾಧ್ಯಮ ವಿಭಾಗದ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಆದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಹೇಳಿಕೆಗಳು ಶಿವಸೇನೆಯನ್ನು ಹೆಚ್ಚು ಕೆಣಕಿದ್ದವು.

ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ನಂತರ ಬುಧವಾರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಸದ್ಯ ಬಿಜೆಪಿ ಆಕೆಯ ಹೇಳಿಕೆ ವಿರೋಧಿಸುತ್ತಲೇ ರಾಣಾವತ್‌ಗೆ ಬೆಂಬಲ, ರಕ್ಷಣೆ ಕೊಡಲು ಆರಂಭಿಸಿದೆ.

ಶಿವಸೇನಾ ಪ್ರಸ್ತುತ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯೊಂದಿಗೆ ಪಾಲುದಾರರಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ.

ಇದನ್ನೂ ಓದಿ: ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯ!

ಕೇಂದ್ರದ ಕಾಂಗ್ರೆಸ್ ನಾಯಕರು ಈ ವಿವಾದದಿಂದ ದೂರವೂಳಿಯಲು ನಿರ್ಧರಿಸಿದ್ದರೇ ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಕಂಡು ಬರುತ್ತಿವೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಟಿ ರಾಣಾವತ್ ವಿವಾದದ ಮೇಲೆ ಕೇಂದ್ರೀಕರಿಸುವುದಕ್ಕಿಂತ  ಆಡಳಿತದಲ್ಲಿ ಕೋವಿಡ್ -19, ಆರ್ಥಿಕತೆ, ಚೀನಾದೊಂದಿಗಿನ ನಿಲುವು ಮುಂತಾದ ತುಂಬಾ ಮುಖ್ಯವಾದ ವಿಷಯಗಳಿವೆ ಎಂದು ತಿಳಿಸಿದ್ದಾರೆ.

“ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡಲಿ. ಕ್ರಿಮಿನಲ್ ಏಜೆನ್ಸಿಗಳಿಗೆ ಮಾಧ್ಯಮ ಅಥವಾ ಯಾವುದೇ ರಾಜಕೀಯ ಮುಖಂಡರ ಸಹಾಯ ಅಗತ್ಯವಿಲ್ಲ ”ಎಂದು ಚವಾಣ್ ಹೇಳಿದರು.

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿವೋರಾ ಕೂಡ ರಾಜಕೀಯ ಬಿಟ್ಟು ಮುಖ್ಯವಾದ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

ಮುಂಬೈನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ನಿರುಪಮ್ ಅವರು ಬಿಎಂಸಿಯ ಈ ಕ್ರಮವನ್ನು “ಪ್ರತೀಕಾರದ ಕ್ರಮ” ಎಂದು ಬಣ್ಣಿಸಿದ್ದಾರೆ. ಹೈಕೋರ್ಟ್ ಈ ಕ್ರಮವನ್ನು ತಪ್ಪೆಂದು ಪರಿಗಣಿಸಿ ತಕ್ಷಣ ಅದನ್ನು ತಡೆಹಿಡಿದಿದೆ. ಇಡೀ ಕ್ರಮವು ಪ್ರತೀಕಾರದಿಂದ ಕೂಡಿದೆ. ಆದರೆ ಸೇಡು ರಾಜಕೀಯದ ರಾಜಕಾರಣ ಬಹಳ ಚಿಕ್ಕದು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, ರಾಣಾವತ್ ಮಾಡಿದ ಆರೋಪಗಳಿಗೆ ಮಾತ್ರ ಪಕ್ಷ ಉತ್ತರಿಸುತ್ತದೆ ಎಂದರು. ನಾವು ಆಡಳಿತದತ್ತ ಗಮನ ಹರಿಸುತ್ತಿದ್ದೇವೆ. ಆದರೆ ಕಂಗನಾ ಮುಂಬೈಯನ್ನು ಪಿಒಕೆಗೆ ಸಮಾನ ಎಂದು ಕರೆಯುವಾಗ, ನಾವು ಮಾತನಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

“ಘಟನೆ ನಡೆದ ಸಮಯವನ್ನು ಪ್ರಶ್ನಿಸಬಹುದು, ಆದರೆ ಅದರ ಕಾನೂನುಬದ್ಧತೆಯಲ್ಲ. ಅದು ಅಕ್ರಮ ಕಟ್ಟಡವಾಗಿದ್ದರೇ, ಅದನ್ನು ಕೆಡವಬೇಕಿದೆ,” ಎಂದರು. ಜೊತೆಗೆ ಮೋದಿ ಸರ್ಕಾರವು ಇಡಿ ಮತ್ತು ಸಿಬಿಐ ದುರುಪಯೋಗಕ್ಕೆ ಹೆಸರುವಾಸಿಯಾಗಿದೆ, ಆದರೆ ಆಗ ಯಾರೂ ಏನನ್ನೂ ಹೇಳುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಂಸಿಯ ಕ್ರಮ ತೆಗೆದುಕೊಳ್ಳುವುದನ್ನು ನಿಲ್ಲಿಸಬಹುದ್ದಿತ್ತು. ಮುಂಬೈನಲ್ಲಿ ಅಕ್ರಮ ನಿರ್ಮಾಣವು ಹೊಸತೇನಲ್ಲ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಬಿಎಂಸಿಯ ಕ್ರಮವು ಜನರಿಗೆ ಅದರ ಬಗ್ಗೆ ಅನುಮಾನಗಳನ್ನು ಮೂಡಿಸಲು ಅವಕಾಶ ನೀಡುತ್ತದೆ ಎಂದರು. ಅದು “ಕಾನೂನುಬಾಹಿರ ಕಟ್ಟಡ ಇದೆಯೇ ಎಂದು ನನಗೆ ಗೊತ್ತಿಲ್ಲ. ನಾನು ಅದರ ಬಗ್ಗೆ ಸುದ್ದಿಯಲ್ಲಿ ಮಾತ್ರ ಓದಿದ್ದೇನೆ. ನಿಖರವಾದ ಮಾಹಿತಿಯಿಲ್ಲದೆ ಈ ಕುರಿತು ಪ್ರತಿಕ್ರಿಯಿಸುವುದು ನನಗೆ ಸೂಕ್ತವಲ್ಲ. ಬಿಎಂಸಿಗೆ ತನ್ನದೇ ಆದ ನಿಯಮಗಳಿವೆ ಮತ್ತು ಅವುಗಳಿಂದ ಕಾರ್ಯ ನಿರ್ವಹಿಸಿರಬಹುದು ಎಂದೂ ತಿಳಿಸಿದ್ದಾರೆ.

ಒಟ್ಟಾರೆ ನಟಿ ಕಂಗನಾ ಮುಂಬೈನಲ್ಲಿ ಹಚ್ಚಿರುವ ಕಿಚ್ಚು ಬಾಲಿವುಡ್ ಅಂಗಳ ಬಿಟ್ಟು ರಾಜಕೀಯ ಪಕ್ಷಗಳ ಜಟಾಪಟಿಗೆ, ಮೌನಕ್ಕೆ ಕಾರಣವಾಗಿದೆ. ಯಾವಾಗ ಬಿಜೆಪಿ ಕಂಗನಾ ರಾಣಾವತ್ ಬೆಂಬಲಕ್ಕೆ ನಿಂತು ಆಕೆಗೆ ವೈ-ಪ್ಲಸ್ ಭದ್ರತೆ ನೀಡಿತೋ ಆಗಿನಿಂದ ಟ್ವಿಟ್ಟರ್‌ನಲ್ಲಿ ಬಾಲಿವುಡ್ ಮಂದಿ ಕೂಡ ಈ ಬಗ್ಗೆ ವಿರೋಧವಾಗಿ ಟ್ವೀಟ್ ಮಾಡುವುದು ಬಿಟ್ಟಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...