Homeಮುಖಪುಟಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ಮತ್ತು ಬಾಲಿವುಡ್ ನಟಿ ಕಂಗನಾ ರಾಣಾವತ್ ನಡುವಿನ ಜಟಾಪಟಿಯಿಂದ ದೂರ ಉಳಿಯಲು ಕೇಂದ್ರ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

“ಹೌದು, ಇದು ಹೆಚ್ಚು ರಾಜಕೀಯಗೊಳಿಸಿದ ವಿಷಯವಾಗಿದೆ. ಬಿಜೆಪಿ ಬಯಸುವುದು ಕೂಡ ಇದನ್ನೇ. ಕೋವಿಡ್ ಮತ್ತು ಆರ್ಥಿಕತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸದಂತೆ ಅವರು ಇಡೀ ರಾಜಕೀಯವನ್ನು ವಿವಾದಕ್ಕೆ ಎಳೆಯಲು ಬಯಸುತ್ತಾರೆ ” ಆದ್ದರಿಂದ, ಇದರಿಂದ ದೂರವಿರಲು ಮತ್ತು ಅವರ ಬಲೆಗೆ ಬೀಳದಂತೆ ನಾವು ತತ್ವಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದೇವೆ ಎಐಸಿಸಿ ಮಾಧ್ಯಮ ವಿಭಾಗದ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಆದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಹೇಳಿಕೆಗಳು ಶಿವಸೇನೆಯನ್ನು ಹೆಚ್ಚು ಕೆಣಕಿದ್ದವು.

ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ನಂತರ ಬುಧವಾರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಸದ್ಯ ಬಿಜೆಪಿ ಆಕೆಯ ಹೇಳಿಕೆ ವಿರೋಧಿಸುತ್ತಲೇ ರಾಣಾವತ್‌ಗೆ ಬೆಂಬಲ, ರಕ್ಷಣೆ ಕೊಡಲು ಆರಂಭಿಸಿದೆ.

ಶಿವಸೇನಾ ಪ್ರಸ್ತುತ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯೊಂದಿಗೆ ಪಾಲುದಾರರಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ.

ಇದನ್ನೂ ಓದಿ: ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯ!

ಕೇಂದ್ರದ ಕಾಂಗ್ರೆಸ್ ನಾಯಕರು ಈ ವಿವಾದದಿಂದ ದೂರವೂಳಿಯಲು ನಿರ್ಧರಿಸಿದ್ದರೇ ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಕಂಡು ಬರುತ್ತಿವೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಟಿ ರಾಣಾವತ್ ವಿವಾದದ ಮೇಲೆ ಕೇಂದ್ರೀಕರಿಸುವುದಕ್ಕಿಂತ  ಆಡಳಿತದಲ್ಲಿ ಕೋವಿಡ್ -19, ಆರ್ಥಿಕತೆ, ಚೀನಾದೊಂದಿಗಿನ ನಿಲುವು ಮುಂತಾದ ತುಂಬಾ ಮುಖ್ಯವಾದ ವಿಷಯಗಳಿವೆ ಎಂದು ತಿಳಿಸಿದ್ದಾರೆ.

“ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡಲಿ. ಕ್ರಿಮಿನಲ್ ಏಜೆನ್ಸಿಗಳಿಗೆ ಮಾಧ್ಯಮ ಅಥವಾ ಯಾವುದೇ ರಾಜಕೀಯ ಮುಖಂಡರ ಸಹಾಯ ಅಗತ್ಯವಿಲ್ಲ ”ಎಂದು ಚವಾಣ್ ಹೇಳಿದರು.

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿವೋರಾ ಕೂಡ ರಾಜಕೀಯ ಬಿಟ್ಟು ಮುಖ್ಯವಾದ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

ಮುಂಬೈನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ನಿರುಪಮ್ ಅವರು ಬಿಎಂಸಿಯ ಈ ಕ್ರಮವನ್ನು “ಪ್ರತೀಕಾರದ ಕ್ರಮ” ಎಂದು ಬಣ್ಣಿಸಿದ್ದಾರೆ. ಹೈಕೋರ್ಟ್ ಈ ಕ್ರಮವನ್ನು ತಪ್ಪೆಂದು ಪರಿಗಣಿಸಿ ತಕ್ಷಣ ಅದನ್ನು ತಡೆಹಿಡಿದಿದೆ. ಇಡೀ ಕ್ರಮವು ಪ್ರತೀಕಾರದಿಂದ ಕೂಡಿದೆ. ಆದರೆ ಸೇಡು ರಾಜಕೀಯದ ರಾಜಕಾರಣ ಬಹಳ ಚಿಕ್ಕದು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, ರಾಣಾವತ್ ಮಾಡಿದ ಆರೋಪಗಳಿಗೆ ಮಾತ್ರ ಪಕ್ಷ ಉತ್ತರಿಸುತ್ತದೆ ಎಂದರು. ನಾವು ಆಡಳಿತದತ್ತ ಗಮನ ಹರಿಸುತ್ತಿದ್ದೇವೆ. ಆದರೆ ಕಂಗನಾ ಮುಂಬೈಯನ್ನು ಪಿಒಕೆಗೆ ಸಮಾನ ಎಂದು ಕರೆಯುವಾಗ, ನಾವು ಮಾತನಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

“ಘಟನೆ ನಡೆದ ಸಮಯವನ್ನು ಪ್ರಶ್ನಿಸಬಹುದು, ಆದರೆ ಅದರ ಕಾನೂನುಬದ್ಧತೆಯಲ್ಲ. ಅದು ಅಕ್ರಮ ಕಟ್ಟಡವಾಗಿದ್ದರೇ, ಅದನ್ನು ಕೆಡವಬೇಕಿದೆ,” ಎಂದರು. ಜೊತೆಗೆ ಮೋದಿ ಸರ್ಕಾರವು ಇಡಿ ಮತ್ತು ಸಿಬಿಐ ದುರುಪಯೋಗಕ್ಕೆ ಹೆಸರುವಾಸಿಯಾಗಿದೆ, ಆದರೆ ಆಗ ಯಾರೂ ಏನನ್ನೂ ಹೇಳುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಂಸಿಯ ಕ್ರಮ ತೆಗೆದುಕೊಳ್ಳುವುದನ್ನು ನಿಲ್ಲಿಸಬಹುದ್ದಿತ್ತು. ಮುಂಬೈನಲ್ಲಿ ಅಕ್ರಮ ನಿರ್ಮಾಣವು ಹೊಸತೇನಲ್ಲ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಬಿಎಂಸಿಯ ಕ್ರಮವು ಜನರಿಗೆ ಅದರ ಬಗ್ಗೆ ಅನುಮಾನಗಳನ್ನು ಮೂಡಿಸಲು ಅವಕಾಶ ನೀಡುತ್ತದೆ ಎಂದರು. ಅದು “ಕಾನೂನುಬಾಹಿರ ಕಟ್ಟಡ ಇದೆಯೇ ಎಂದು ನನಗೆ ಗೊತ್ತಿಲ್ಲ. ನಾನು ಅದರ ಬಗ್ಗೆ ಸುದ್ದಿಯಲ್ಲಿ ಮಾತ್ರ ಓದಿದ್ದೇನೆ. ನಿಖರವಾದ ಮಾಹಿತಿಯಿಲ್ಲದೆ ಈ ಕುರಿತು ಪ್ರತಿಕ್ರಿಯಿಸುವುದು ನನಗೆ ಸೂಕ್ತವಲ್ಲ. ಬಿಎಂಸಿಗೆ ತನ್ನದೇ ಆದ ನಿಯಮಗಳಿವೆ ಮತ್ತು ಅವುಗಳಿಂದ ಕಾರ್ಯ ನಿರ್ವಹಿಸಿರಬಹುದು ಎಂದೂ ತಿಳಿಸಿದ್ದಾರೆ.

ಒಟ್ಟಾರೆ ನಟಿ ಕಂಗನಾ ಮುಂಬೈನಲ್ಲಿ ಹಚ್ಚಿರುವ ಕಿಚ್ಚು ಬಾಲಿವುಡ್ ಅಂಗಳ ಬಿಟ್ಟು ರಾಜಕೀಯ ಪಕ್ಷಗಳ ಜಟಾಪಟಿಗೆ, ಮೌನಕ್ಕೆ ಕಾರಣವಾಗಿದೆ. ಯಾವಾಗ ಬಿಜೆಪಿ ಕಂಗನಾ ರಾಣಾವತ್ ಬೆಂಬಲಕ್ಕೆ ನಿಂತು ಆಕೆಗೆ ವೈ-ಪ್ಲಸ್ ಭದ್ರತೆ ನೀಡಿತೋ ಆಗಿನಿಂದ ಟ್ವಿಟ್ಟರ್‌ನಲ್ಲಿ ಬಾಲಿವುಡ್ ಮಂದಿ ಕೂಡ ಈ ಬಗ್ಗೆ ವಿರೋಧವಾಗಿ ಟ್ವೀಟ್ ಮಾಡುವುದು ಬಿಟ್ಟಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...