Homeಅಂಕಣಗಳುಪುಟಕ್ಕಿಟ್ಟ ಪುಟಗಳುಚರಿತ್ರೆಯಿಂದ ವರ್ತಮಾನ ಕಲಿಯಬೇಕಾದ ಪಾಠ ಹೇಳುವ ಯುದ್ಧ ಮತ್ತು ಒಪ್ಪಂದ ಪುಸ್ತಕ

ಚರಿತ್ರೆಯಿಂದ ವರ್ತಮಾನ ಕಲಿಯಬೇಕಾದ ಪಾಠ ಹೇಳುವ ಯುದ್ಧ ಮತ್ತು ಒಪ್ಪಂದ ಪುಸ್ತಕ

ಯುದ್ಧ ಮತ್ತು ದೇಶಭಕ್ತಿಯ ರೋಚಕತೆಯನ್ನು ಸೃಷ್ಟಿಸುವಂತಹ ಸ್ವಾರ್ಥ ಪ್ರಭುತ್ವಗಳಿಗೆ ಇರುತ್ತದೆ. ಆದರೆ ಯುದ್ಧಗಳನ್ನು ವೈಭವೀಕರಿಸುವ ಹಾಗೂ ಅದಕ್ಕೆ ನಾನಾ ಕಾರಣಗಳನ್ನು ಹುಡುಕುವುದರಲ್ಲೇ ಮಗ್ನರಾಗಿರುವ ಚರಿತ್ರೆಕಾರರಿಗೆ ಯುದ್ಧದ ಸಾಮಾಜಿಕ ಹಾಗೂ ಆರ್ಥಿಕ ಆಯಾಮಗಳು ಆದ್ಯತೆಯ ವಿಚಾರವಾಗಿ ಕಂಡುಬರುವುದಿಲ್ಲ.

- Advertisement -
- Advertisement -

ಹದಿನೇಳು ಮತ್ತು ಹದಿನೆಂಟನೇ ಶತಮಾನದ ದಕ್ಷಿಣ ಭಾರತದ ರಾಜಕಾರಣ, ಆರ್ಥಿಕತೆ, ಸಾಮ್ರಾಜ್ಯ ವಿಸ್ತರಣೆಯ ದಾಹ, ವಾಣಿಜ್ಯ ನೀತಿ, ಸಂಘರ್ಷ, ಸಂಧಾನ, ಸಮಾಧಾನ, ದೇಶೀಯ ಮತ್ತು ವಿದೇಶೀಯರ ಉದ್ದೇಶ ಮತ್ತು ಧೋರಣೆಗಳು, ತಂತ್ರ ಮತ್ತು ಪ್ರತಿತಂತ್ರ ಎಲ್ಲವನ್ನೂ ಒಳಗೊಂಡಿರುವ ಕೃತಿಯಿದು. ಯುದ್ಧ ಮತ್ತು ಒಪ್ಪಂದಗಳು ಪ್ರದೇಶದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಚಿತ್ರಣವನ್ನು ಬದಲು  ಮಾಡುವುದರಿಂದ ವ್ಯವಸ್ಥೆಯ ಬಲಿಪಶುಗಳಾಗುವರು ಜನರು. ಈ ಕೃತಿಯ ಅಧ್ಯಯನದ ಮಹತ್ವವೇ ಚರಿತ್ರೆಯಲ್ಲಿ ಮಾಡಿರುವ ತಪ್ಪುಗಳನ್ನು ವರ್ತಮಾನದಲ್ಲಿ ಮಾಡದಿರಲು ಎಚ್ಚೆತ್ತುಕೊಳ್ಳುವುದು. ಆದರೆ ಇದನ್ನು ತಿಳಿಯಬೇಕಾದವರು ಯಾರು? ಬಲಿಪಶುಗಳಾಗುವ ಸಾಮಾನ್ಯರು ಮಾತ್ರವಲ್ಲ, ಆಡಳಿತ ಚುಕ್ಕಾಣಿ ಹಿಡಿದಿರುವವರು. ಹಿಂದಿನದನ್ನು ಅವಲೋಕಿಸಿ ಮುಂದೆ ಎಚ್ಚರಿಕೆಯಿಂದ ಹೆಜ್ಜೆ ಇಡುವಂತಹ ದೂರದೃಷ್ಟಿಯನ್ನು ಹೊಂದಲು ಸಹಾಯವಾಗುವ ಒಳನೋಟಗಳನ್ನು ಕೊಡುವ ಡಾ. ಕೆ ಮೋಹನ್ ಕೃಷ್ಣ ರೈರವರ ಕೃತಿ ಇದಾಗಿದೆ.

ನಮ್ಮ ಸಾಮಾನ್ಯ ಪ್ರಜೆಗಳಿಂದ ಹಿಡಿದು ವ್ಯವಸ್ಥೆಯನ್ನು ರೂಪಿಸುವವರ ತನಕ ಇರುವ ಬಹುದೊಡ್ಡ ಸಾಮಾನ್ಯ ಸಮಸ್ಯೆ ಎಂದರೆ ಯಾವುದಕ್ಕೆ ಆದ್ಯತೆಯನ್ನು ನೀಡುವುದು ಎಂದು ತಿಳಿಯದಿರುವುದು. ಈಗಲೂ ಮತ್ತು ಆಗಲೂ ಸ್ಥೂಲವಾಗಿ ರಾಜಕೀಯ ಸಂಘರ್ಷಗಳಾಗಿ ಕಾಣುವ ವಿದ್ಯಮಾನಗಳು ಸಾಮಾಜಿಕ ನಿಯಂತ್ರಣವನ್ನು ಹೊಂದುತ್ತಿರುತ್ತವೆ ಮತ್ತು ಆರ್ಥಿಕತೆಯು ಸ್ವಾರ್ಥದಿಂದ ತಮ್ಮ ವಲಯಕ್ಕೆ ಸೀಮಿತಗೊಳ್ಳುತ್ತಿರುತ್ತವೆ. ಆಗ ಈಸ್ಟ್ ಇಂಡಿಯಾ ಕಂಪನಿಗಳು ಸ್ಥಳೀಯ ಅರಸರನ್ನು ಎತ್ತಿಕಟ್ಟುತ್ತಾ, ಅವರ ನಡುವೆ ಯುದ್ಧಗಳನ್ನು ಹುಟ್ಟು ಹಾಕುತ್ತಿದ್ದವು. ಹಾಗೆ ಮಾಡುವಾಗ ಸ್ಥಳೀಯ ಅರಸರಿಗೆ ಅವರ ಮರ್ಕಂಟೈಲ್ ಮತ್ತು ಇಂಪೀರಿಯಲ್ ದೃಷ್ಟಿಯನ್ನು ಅರ್ಥೈಸಿಕೊಳ್ಳಲಾಗದೇ ಪ್ರಾದೇಶಿಕ ವಾಣಿಜ್ಯ ನೀತಿಗಳನ್ನು, ಆರ್ಥಿಕ ನಿಯಂತ್ರಣಗಳನ್ನು ಅವರ ಕೈವಶವಾಗಲು ಅನುವು ಮಾಡಿಕೊಟ್ಟು, ತಮ್ಮ ತಲೆದಂಡದಿಂದ ಅವರಿಗೆ ಲಾಭವನ್ನು ಮಾಡಿಕೊಡುತ್ತಿದ್ದರು. ಇದನ್ನು ಅರ್ಥಮಾಡಿಕೊಂಡ ಕೆಲವರಾದರೂ ಇದ್ದ ಪ್ರಾದೇಶಿಕ ಅರಸರಿಗೆ ಇತರರ ಒಣಪ್ರತಿಷ್ಟೆ ಮತ್ತು ಅಸೂಯೆಗಳು ಸಹಕರಿಸಲಿಲ್ಲ. ಅದೇ ಈಸ್ಟ್ ಇಂಡಿಯಾ ಕಂಪನಿಯ ಗೆಲುವಿಗೆ ಮುಖ್ಯ ಕಾರಣಗಳಲ್ಲಿ ಒಂದು ಎಂದು ಪುಸ್ತಕದ ಮೊದಮೊದಲ ಸಾಲುಗಳಲ್ಲೇ ಇದೆ. ಈಗ ಅಂತಹುದೇ ಪರಿಸ್ಥಿತಿ ವರ್ತಮಾನದಲ್ಲಿಯೂ ಇದೆ. ಈಗ ಈಸ್ಟ್ ಇಂಡಿಯಾ ಕಂಪನಿಯ ಕೆಲಸ ಮಾಡುತ್ತಿರುವುದು ಇಂಗ್ಲಿಷರಲ್ಲ. ಜನರಿಂದ ಚುನಾಯಿತರಾಗಿರುವ ಭಾರತೀಯ ಸರ್ಕಾರವೇ. ಆಗ ಪ್ರಾದೇಶಿಕ ರಾಜರುಗಳಲ್ಲಿ ಇದ್ದ ಅಸಹನೆ, ಹುಸಿಪ್ರತಿಷ್ಠೆ ವಿವೇಚನಾಶೂನ್ಯ ಸಂಘರ್ಷಗಳನ್ನು ವಿವಿಧ ರಾಜಕೀಯ ಪಕ್ಷಗಳಲ್ಲಿ ಕಾಣುತ್ತಿದ್ದೇವೆ. ಚರಿತ್ರೆ ಮರುಕಳಿಸುತ್ತಿದೆ.

ಡಾ. ರೈ ಹೇಳುವಂತೆ, ‘ಪೋರ್ಚುಗೀಸರ ಆಗಮನವಾದ ಬಳಿಕ ಯುರೋಪಿನ ವ್ಯಾಪಾರಿ ಕಂಪನಿಗಳು ಭಾರತದಲ್ಲಿ ಯುದ್ಧಗಳ ಯುಗವನ್ನೇ ಹುಟ್ಟುಹಾಕಿದವು. 17 ಮತ್ತು 18ನೆಯ ಶತಮಾನಗಳ ದಕ್ಷಿಣ ಭಾರತದ ರಾಜಕಾರಣದಲ್ಲಿ ಪೋರ್ಚುಗೀಸರು, ಬ್ರಿಟಿಷರು, ಡಚ್ಚರು ಮತ್ತು ಫ್ರೆಂಚರು ವಿದೇಶಿ ವ್ಯಾಪಾರಿಶಕ್ತಿಗಳಾಗಿ ಒಂದು ಕಡೆಗಾದರೆ, ಮೊಗಲರು, ಮರಾಠರು, ಹೈದರಾಬಾದಿನ ನಿಜಾಮರು, ಆರ್ಕಾಟಿನ ನವಾಬರು, ಮೈಸೂರಿನ ಹೈದರ್ ಅಲಿ ಮತ್ತು ಟಿಪ್ಪು, ತಿರುವಾಂಕೂರಿನ ಅರಸರು, ಮಲಬಾರಿನ ನಾಯಕರು ಮುಂತಾದ ಸ್ಥಳೀಯ ರಾಜಕೀಯ ಶಕ್ತಿಗಳು ಯುದ್ಧ ಹಾಗೂ ಒಪ್ಪಂದದಲ್ಲಿ ನಿರತವಾಗಿದ್ದವು. ಇದರ ಪರಿಣಾಮವೇ ಕರ್ನಾಟಿಕ್ ಯುದ್ಧಗಳು, ಆಂಗ್ಲೋ-ಮೈಸೂರು ಯುದ್ಧಗಳು, ಆಂಗ್ಲೋ-ಮರಾಠರ ಯುದ್ಧಗಳು, ಮೈಸೂರು-ಮರಾಠರ ಯುದ್ಧಗಳು. ಈ ಎಲ್ಲ ಯುದ್ಧಗಳ ಸಂದರ್ಭದಲ್ಲಿ ಯೂರೋಪಿನ ವ್ಯಾಪಾರಿಶಕ್ತಿಗಳು ತಮ್ಮ ಪಾಲ್ಗೊಳ್ಳುವಿಕೆಯನ್ನು ಅನಿವಾರ್ಯವನ್ನಾಗಿಸಿದವು.’

ಸ್ಥಳೀಯ ಅರಸುಮನೆತನಗಳು ವಿದೇಶಿಯರನ್ನು ಓಲೈಸಬೇಕಾದ ಒತ್ತಡ ಹೇಗೆ ಸೃಷ್ಟಿಗೊಂಡಿತು? ಪ್ರಾದೇಶಿಕತೆಯಲ್ಲಿ ಬಿಕ್ಕಟ್ಟುಗಳು ಮೂಡಿದ ಬಗೆ ಹೇಗೆ? ಶತ್ರುವಿನ ಶತ್ರು ಮಿತ್ರನಾಗುವುದು ಹೇಗೆ? ಒಪ್ಪಂದಗಳ ಭೌತಿಕ ಮತು ತಾತ್ವಿಕ ಸ್ವರೂಪಗಳೇನು? ಇವೆಲ್ಲವನ್ನೂ ವಿವರಿಸುವ ಜೊತೆಗೆ ಪ್ರಸ್ತುತ ರಾಜಕೀಯ ಮತ್ತು ಆರ್ಥಿಕತೆ ಪರಿಸ್ಥಿತಿಗಳನ್ನು ಈ ಹಿನ್ನೆಲೆಯಲ್ಲಿ ಅವಲೋಕಿಸುವ ಎಚ್ಚರಿಕೆಯ ಕರೆಗಂಟೆ ಈ ಕೃತಿಯಾಗುತ್ತದೆ.

18ನೆಯ ಶತಮಾನದ ದ್ವಿತೀಯಾರ್ಧ ಬ್ರಿಟಿಷರ ಪಾಲಿಗೆ ಮುಳ್ಳಿನಹಾದಿಯನ್ನಾಗಿ ಮಾಡಿದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನನ ಪ್ರತಿರೋಧಗಳನ್ನು ಮತ್ತು ನಡೆಗಳನ್ನು ಕೃತಿ ತೆರೆದಿಡುತ್ತದೆ. ಮೈಸೂರು ಬೆಂಗಳೂರು ಒಳಗೊಂಡಂತೆ ಈ ಎಲ್ಲಾ ಭಾಗಗಳಿಗೆ ಹೈದರ್ ಅಲಿ ಇಲ್ಲದೇಹೋಗಿದ್ದರೆ ಏನಾಗುತ್ತಿತ್ತೆಂದು ಕಲ್ಪಿಸಿಕೊಳ್ಳಲು ಯತ್ನಿಸುತ್ತೇನೆ. ಆಗ ಹೈದರ್ ಅಲಿಯ ದೃಢತೆ ಮತ್ತು ಎದೆಗಾರಿಕೆಯೇ ಮಗ್ಗುಲು ಮುಳ್ಳಾಗಿದ್ದ ಮರಾಠರನ್ನೂ ಮತ್ತು ಬ್ರಿಟಿಷರನ್ನೂ ಎದುರಿಸಲು ಸಮರ್ಥವಾಗಿದ್ದದ್ದು. ಪರದೇಶೀಯರಾಗಿದ್ದು, ಸಂಸ್ಕೃತಿ ಮತ್ತು ಉದ್ದೇಶಗಳಿಂದ ಪರಕೀಯರೇ ಆಗಿದ್ದ ಬ್ರಿಟಿಷರನ್ನು ಬಿಡಿ, ನಮ್ಮದೇ ನೆಲದ ಭಾಗವೆನ್ನುವ ಮರಾಠರ ಮತ್ತು ನಿಜಾಮರ ರಾಜಕಾರಣದ ಸ್ವರೂಪ ಆಗಿನ ಬಿಕ್ಕಟ್ಟಿನ ಕರಾಳ ಸ್ವರೂಪವನ್ನು ಅನಾವರಣ ಮಾಡುತ್ತದೆ.

ಅಸ್ತಿತ್ವವನ್ನು ಕಂಡುಕೊಳ್ಳುವುದಕ್ಕೆ ಹಾಗೂ ತಮ್ಮತನದ ಛಾಪನ್ನು ಮೂಡಿಸುವುದಕ್ಕೆ ಯುದ್ಧ ಘಟಿಸುವುದು ಒಂದು ವಿಧಾನವಾದರೆ, ಆಕ್ರಮಣಕಾರಿ ಪ್ರವೃತ್ತಿಗೆ ಹಾಗೂ ಸಮಾಜದ ನಾಶಕ್ಕೆ ಯುದ್ಧ ಘಟಿಸುವುದು ಇನ್ನೊಂದು ವಿಧಾನ ಎನ್ನುವ ಡಾ ರೈ ಅವರ ಮಾತನ್ನು ಗಮನಿಸಿದರೆ, ಸ್ಥಳೀಯ ಅರಸುಮನೆತನದವರ ನಡೆಗಳಲ್ಲಿ ಈ ಎರಡೂ ಬೆರೆತಂತಾಗಿರುತಿತ್ತು, ಕೆಲವೊಮ್ಮೆ ಎರಡನ್ನೂ ಮೀರಿದಂತಾಗಿರುತ್ತಿತ್ತು. ಒಟ್ಟಾರೆ ಅವರವರ ಪ್ರತಿಷ್ಠೆ ಮತ್ತು ಹಠಗಳಿಗೆ ಸಾಮಾಜಿಕ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದದ್ದು, ಜನತೆಯ ಬದುಕನ್ನು ಹಾಳುಗೆಡುವುತ್ತಿದ್ದದ್ದಂತೂ ಸ್ಪಷ್ಟ. ಸಿಂಹಾಸನಕ್ಕಾಗಿ ನಡೆಯುವ ಯುದ್ಧಗಳು ಯಾವತ್ತೂ ರಕ್ತಸಂಬಂಧಕ್ಕೇ ಬೆಲೆ ಕೊಡದಿರುವಾಗ ಯಾರದೋ ಪ್ರಜೆಗಳ ಬದುಕನ್ನು ಹೇಗೆ ಪರಿಗಣಿಸಿಯಾರು!

ಕೃತಿಯಲ್ಲಿ ವೀರಮರಣ ಎನ್ನುವ ಸ್ವಾಮಿನಿಷ್ಠೆಯ ಅಲೌಕಿಕ ಪ್ರಪಂಚವನ್ನು ಸೃಷ್ಟಿಸಿ ಒಡೆಯನಿಗೆ ತಾವೂ ಸಾಯುವಂತಹ ಮನಸ್ಥಿತಿಯ ಬಗ್ಗೆಯೂ ಉಲ್ಲೇಖಿಸುತ್ತಾ, ‘ಪ್ರಭುತ್ವ ತನ್ನ ಅಸ್ತಿತ್ವಕ್ಕೆ ಧಕ್ಕೆ ಬರುವ ಸಂದರ್ಭದಲ್ಲಿ ಮಾತ್ರ ಪ್ರಜೆಗಳೊಂದಿಗೆ ಉದಾರವಾಗಿ ನಡೆದುಕೊಳ್ಳುವ’ ಪರಿಯನ್ನು ವಿಶ್ಲೇಷಿಸುತ್ತದೆ. ಎಲೈಟ್ ಶಕ್ತಿಗಳ ಧೋರಣೆಗಳು ಮತ್ತು ಅಜೆಂಡಾಗಳು ಒಂದೇ ಸ್ವರೂಪದಾಗಿದ್ದು, ದುಷ್ಟರೆಂದು ಬೆರಳು ಮಾಡುವವರನ್ನು ಮತ್ತು ಶಾಂತಿ ರಕ್ಷಣೆ ಮಾಡುತ್ತೇವೆ ಎನ್ನುವವರನ್ನು ಕೂಡಾ ಅನಾವರಣಗೊಳಿಸುತ್ತದೆ.

ಯುದ್ಧ ಮತ್ತು ದೇಶಭಕ್ತಿಯ ರೋಚಕತೆಯನ್ನು ಸೃಷ್ಟಿಸುವಂತಹ ಸ್ವಾರ್ಥ ಪ್ರಭುತ್ವಗಳಿಗೆ ಇರುತ್ತದೆ. ಆದರೆ ಯುದ್ಧಗಳನ್ನು ವೈಭವೀಕರಿಸುವ ಹಾಗೂ ಅದಕ್ಕೆ ನಾನಾ ಕಾರಣಗಳನ್ನು ಹುಡುಕುವುದರಲ್ಲೇ ಮಗ್ನರಾಗಿರುವ ಚರಿತ್ರೆಕಾರರಿಗೆ ಯುದ್ಧದ ಸಾಮಾಜಿಕ ಹಾಗೂ ಆರ್ಥಿಕ ಆಯಾಮಗಳು ಆದ್ಯತೆಯ ವಿಚಾರವಾಗಿ ಕಂಡುಬರುವುದಿಲ್ಲ. ಹಾಗಾಗಿ ಚರಿತ್ರೆಗಳು ಜನರ ಬದುಕನ್ನು, ವ್ಯಥೆ, ಕಥೆಗಳನ್ನು ಮರೆಮಾಚಿ ಥ್ರಿಲ್ಲರ್ ಆಗಿ ಉಳಿದುಬಿಡುತ್ತವೆ. ಸಮಾಜದ ವ್ಯಾಪಕ ಬದುಕಿನ ಸ್ಥಿತಿಯನ್ನು ಬೆಳಕಿಗೆ ತರುವುದೇ ಇಲ್ಲ.

‘ಸೋತವರು ಭವಿಷ್ಯದಲ್ಲಿ ಎಂದಿಗೂ ಜಯಿಸಿದವರನ್ನು ಎದುರಿಸುವ ಸಾಮರ್ಥ್ಯವನ್ನು ಪಡೆದುಕೊಳ್ಳಬಾರದು’ ಎಂಬ ಧೋರಣೆಯ ಒಪ್ಪಂದಗಳಲ್ಲಿ ಮತ್ತದೇ ಬಲಿಪಶುಗಳು ಸಾಮಾನ್ಯ ಜನರು. ಹೈದರನ ಮಟ್ಟ ಹಾಕಲು ಮೈಸೂರನ್ನು ಮುತ್ತುವ ಮರಾಠರು ಕ್ರೂರಿ ಪಿಂಡಾರಿಗಳ ಪಡೆಗಳನ್ನು ಸಾಮಾನ್ಯ ಪ್ರಜೆಗಳ ನಡುವೆ ನುಗ್ಗಿಸಿ ಕೊಲೆ, ಲೂಟಿ, ದಾಂಧಲೆಗಳನ್ನು ಮಾಡಿ ಗೊಂದಲಗಳನ್ನೆಬ್ಬಿಸಿ ಇತ್ತ ಯುದ್ಧಗಳನ್ನು ಮಾಡಿದ್ದೇನೂ ಮಹಾಭಾರತ ಅಥವಾ ರಾಮಾಯಣಗಳಲ್ಲಿ ಹೇಳುವಂತಹ ಕ್ಷತ್ರಿಯ ಧರ್ಮವೇನಲ್ಲ, ಶಾಸ್ತ್ರಗಳಲ್ಲಿ ಹೇಳುವ ಯುದ್ಧನೀತಿಯೂ ಅಲ್ಲ. ಅವರದ್ಯಾರದ್ದೂ ಜನತೆ, ಧರ್ಮ, ನೆಲ ಮತ್ತು ಸಂಸ್ಕೃತಿಗಳ ರಕ್ಷಣೆಯಲ್ಲ. ಬರೀ ಸ್ವಾರ್ಥ ಮತ್ತು ಅಧಿಕಾರ ದಾಹ.

ಬ್ರಿಟೀಷರೊಂದಿಗೆ ಕೈ ಜೋಡಿಸಿದ ಯಾರನ್ನೇ ಆಗಲಿ ಕಠಿಣವಾಗಿ ದಮನ ಮಾಡಿದ ಟಿಪ್ಪುವಿನ ಧೋರಣೆಯನ್ನು ಇಂದು ಮತಾಂಧ ಎಂದು ದೂರುವ ಧರ್ಮನಿಷ್ಟರಿಗಾಗಲಿ, ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುತ್ತಿರುವ ಆಡಳಿತದ ಚುಕ್ಕಾಣಿ ಹಿಡಿದಿರುವ ಚಾಣಾಕ್ಷರಾಗಲಿ, ವಾಟ್ಸಪ್ ಯೂನಿವರ್ಸಿಟಿಗಳಲ್ಲಿ ಕಲಿತು ಪ್ರಖಾಂಡ ಪಂಡಿತರಾಗಿರುವ ವಾದಿಗಳಾಗಲಿ ಈ ಕೃತಿಯಿಂದ ಚರಿತ್ರೆಯನ್ನು ವಿವೇಚಿಸುವುದು ಹೇಗೆ ಎಂದು ಕಲಿಯಬೇಕಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಿಂದ ಪ್ರಕಟಗೊಂಡಿರುವ ಈ ಕೃತಿ ಭೂತ ಮತ್ತು ವರ್ತಮಾನದ ಚರಿತ್ರೆಯನ್ನು ಅವಲೋಕಿಸುವವರಿಗೆ ಒಂದು ಕೈದೊಂದಿ.


ಇದನ್ನೂ ಓದಿ: ಆರ್ಥಿಕ ಕುಸಿತದ ದುರಂತ : ಜನರ ಬದುಕು ಅತಂತ್ರ – ಡಾ. ಟಿ. ಆರ್. ಚಂದ್ರಶೇಖರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...