Homeಮುಖಪುಟಅಮೃತಸರದ ಸ್ವರ್ಣಮಂದಿರವು ವಿದೇಶಿ ದೇಣಿಗೆ ಪಡೆಯಲು ಅವಕಾಶ

ಅಮೃತಸರದ ಸ್ವರ್ಣಮಂದಿರವು ವಿದೇಶಿ ದೇಣಿಗೆ ಪಡೆಯಲು ಅವಕಾಶ

ಅಮೃತಸರದ ಸ್ವರ್ಣಮಂದಿರದ ಎಫ್‌ಸಿಆರ್‌ಎ ನೋಂದಣಿ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ.

- Advertisement -
- Advertisement -

ಅಮೃತಸರದ ಸ್ವರ್ಣಮಂದಿರದಲ್ಲಿ ವಿದೇಶಿ ದೇಣಿಗೆ ಸ್ವೀಕರಿಸಲು ಇದ್ದ ತೊಡಕುಗಳನ್ನು ಕೇಂದ್ರ ಗೃಹ ಸಚಿವಾಲಯ ನಿವಾರಿಸಿದೆ. ಹಾಗಾಗಿ ಇನ್ನು ಮುಂದೆ ವಿದೇಶಿ ದೇಣಿಗೆ ಪಡೆಯಬಹುದಾಗಿದೆ. ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

2010 ರಲ್ಲಿ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ನೋಂದಣಿಗೆ ಸಚ್‌ಖಂಡ್ ಶ್ರೀ ಹರ್ಮಂದಿರ್ ಸಾಹಿಬ್ ಶ್ರೀ ದರ್ಬಾರ್ ಸಾಹಿಬ್ ಪಂಜಾಬ್ ಅಸೋಸಿಯೇಷನ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿತು. ಅಸೋಸಿಯೇಷನ್ 1925 ರಲ್ಲಿ ಸ್ಥಾಪನೆಯಾಗಿತ್ತು. ಸಂಘದ ಎಫ್‌ಸಿಆರ್‌ಎ ನೋಂದಣಿ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಅಮೃತಸರದಲ್ಲಿರುವ ಸುವರ್ಣ ದೇವಾಲಯವನ್ನು ಶ್ರೀ ಹರ್ಮಂದೀರ್ ಸಾಹಿಬ್ ಎಂದೂ ಕರೆಯುತ್ತಾರೆ.

ಅಮೃತಸರದಲ್ಲಿರುವ ಸುವರ್ಣ ದೇವಾಲಯಕ್ಕೆ ವಿದೇಶಿ ಹಣವನ್ನು ಸ್ವೀಕರಿಸಲು ಅನುಮತಿ ನೀಡುವ ಸರ್ಕಾರದ ನಿರ್ಧಾರವು ಒಂದು ಮಹತ್ವದ ಕ್ರಮವಾಗಿದೆ. ಇದು ಮತ್ತೊಮ್ಮೆ ಸಿಖ್ ಸಮುದಾಯದ ಸೇವೆಯ ಮನೋಭಾವವನ್ನು ತೋರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್‌ಗಳನ್ನು ಮಾಡಿ ಖುಷಿ ಹಂಚಿಕೊಂಡಿದ್ದಾರೆ.

 

‘ವಾಹೆ ಗುರು ಜಿ’  ಪ್ರಧಾನಿಯವರಿಂದ ಸೇವೆ ತೆಗೆದುಕೊಂಡಿರುವುದಕ್ಕೆ ಪ್ರಧಾನಿ ಮೋದಿ ಆಶೀರ್ವಾದ ಪಡೆದವರಾಗಿದ್ದಾರೆ ಎಂದಿದ್ದಾರೆ.

“ಶ್ರೀ ದರ್ಬಾರ್ ಸಾಹಿಬ್ ಅವರ ದೈವತ್ವವು ನಮಗೆ ಬಲವನ್ನು ನೀಡುತ್ತದೆ. ದಶಕಗಳಿಂದ, ವಿಶ್ವಾದ್ಯಂತದ ಸಂಗತ್‌ಗೆ ಅಲ್ಲಿ ಸೇವೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಶ್ರೀ ಹರ್ಮಂದಿರ್ ಸಾಹಿಬ್‌ಗೆ ಎಫ್‌ಸಿಆರ್‌ಎಗೆ ಅವಕಾಶ ನೀಡುವ ಮೋದಿ ಸರ್ಕಾರದ ನಿರ್ಧಾರವು ಜಾಗತಿಕವಾಗಿ ಸಂಗತ್ ಮತ್ತು ಶ್ರೀ ದರ್ಬಾರ್ ಸಾಹಿಬ್ ನಡುವಿನ ಸೇವಾ ಸಂಪರ್ಕವನ್ನು ಗಟ್ಟಿಗೊಳಿಸಿದೆ. ಇದು ಆಶೀರ್ವಾದದ ಕ್ಷಣ! ” ಅವರು ಟ್ವೀಟ್ ಮಾಡಿದ್ದಾರೆ.

ಸುವರ್ಣ ದೇವಾಲಯಕ್ಕೆ ಎಫ್‌ಸಿಆರ್‌ಎ ನೋಂದಣಿ ನೀಡಿದ್ದಕ್ಕಾಗಿ ಕೇಂದ್ರ ಆಹಾರ ಸಂಸ್ಕರಣಾ ಸಚಿವ ಮತ್ತು ಅಕಾಲಿ ದಳದ ಮುಖಂಡೆ ಹರ್ಸಿಮ್ರತ್ ಕೌರ್ ಬಾದಲ್ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದರು.

“ಶ್ರೀ ಹರ್ಮಂದೀರ್ ಸಾಹಿಬ್‌ಗೆ ಎಫ್‌ಸಿಆರ್‌ಎ ಅಡಿಯಲ್ಲಿ ಎಂಹೆಚ್‌ಎ ಅನುಮೋದನೆ ನೀಡಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಇದು ದೇವಾಲಯಕ್ಕೆ ಪ್ರಪಂಚದಾದ್ಯಂತ ‘ಸೇವಾ’ ಸ್ವೀಕರಿಸಲು ಮತ್ತು ಗುರುಸಹಬ್‌ನ ತತ್ತ್ವಶಾಸ್ತ್ರವನ್ನು ಪ್ರಚಾರ ಮಾಡಲು ಸಹಾಯವಾಗುತ್ತದೆ. ಇದನ್ನು ಸಾಧ್ಯವಾಗಿಸಿದ ಅಮಿತ್‌ಶಾ ಜಿಗೆ ನಾನು ಆಭಾರಿಯಾಗಿದ್ದೇನೆ “ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...