Homeಅಂಕಣಗಳುದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

ದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

- Advertisement -
- Advertisement -

ಈ ಸಂಚಿಕೆಯಲ್ಲಿ ಡಾ.ಕಫೀಲ್‌ ಖಾನ್‌ರವರ ಸಂದರ್ಶನವಿದೆ. ಇವರೊಂದು ಸೋಜಿಗ. ಜೆಎನ್‌ಯು ಕಾಣೆಯಾದ ವಿದ್ಯಾರ್ಥಿ ನಜೀಬ್‌ನ ತಾಯಿಯಂತೆ. ಇವರು ಕೆಲಕಾಲದ ಹಿಂದೆ ʼಸುತ್ತಲಿನ ನಾಲ್ಕು ಜನರಿಗೆ ಒಳ್ಳೆಯದುʼ ಮಾಡಿಕೊಂಡು ತಮ್ಮ ಪಾಡಿಗೆ ಇದ್ದವರು. ಆದರೆ ತಮ್ಮ ಬದುಕಿನಲ್ಲಾದ ʼಬೇರೆಯವರಾದರೆ ತತ್ತರಿಸಿ ಮೂಲೆಯಲ್ಲಿ ಕೂತುಬಿಡುವʼ ಭಯಾನಕ ಘಟನೆಗಳ ನಂತರ ಗಟ್ಟಿಯಾದವರು. ಕಫೀಲ್‌ ಖಾನ್‌ ಗೋರಖಪುರದ ತಾನು ಕೆಲಸ ಮಾಡುತ್ತಿದ್ದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳ ಸರಣಿ ಸಾವುಗಳಾಗುತ್ತಿದ್ದಾಗ ಸ್ವಂತ ಖರ್ಚಿನಿಂದ ನೆರವಾಗಿದ್ದರು. ಆಕ್ಸಿಜನ್‌ ಕೊರತೆಗೆ ಕಾರಣವಾಗಿದ್ದ ಸರ್ಕಾರವು, ಅಂತಹ ವ್ಯಕ್ತಿಯನ್ನು ಅಮಾನತು ಮಾಡಿತು, ಬಂಧಿಸಿತು.

ಬಂಧನದ ನಂತರ ಹೊರಬಂದ ವ್ಯಕ್ತಿ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿದರು. ಶಾಂತಿ ಸಾರುವ ಮಾತುಗಳನ್ನಾಡುತ್ತಾ ಹೋದವರನ್ನು, ಗಲಭೆಗೆ ಪ್ರಚೋದನೆ ನೀಡಿದರು ಎಂದು ಮತ್ತೆ ಬಂಧಿಸಲಾಯಿತು. ಬಂಧನದಿಂದ ಮತ್ತೆ ಹೊರಬಂದ ಮೇಲೆ ʼನನಗೆ ದೇಶದ ಜನರ ಸೇವೆ ಮಾಡಲು ಅವಕಾಶ ಕೊಡಿʼ ಎಂದು ಕೇಳಿದರು. ಇಡೀ ವ್ಯವಸ್ಥೆಯ ಮೇಲೆ, ದೇಶದ ಜನರ ಮೇಲೆ ಸಿಟ್ಟು ಮಾಡಿಕೊಂಡು ʼಎಲ್ಲಾ ಹಾಳಾಗಲಿʼ ಎನ್ನಬೇಕು, ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ವಾತಾವರಣವಿರುವೆಡೆ ಈ ಜೀವ ಪ್ರೀತಿ ಹೇಗೆ ಸಾಧ್ಯವಾಗಿದೆ?

ಡಾ.ಕಫೀಲ್ ಖಾನ್

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಒಬ್ಬರ ಭೇಟಿಯಾಯಿತು. ಮೂರು ಮಹಾನಗರಗಳಲ್ಲಿ ದೊಡ್ಡ ಹೋಟೆಲುಗಳ ಒಡೆಯರಾದ ಅಶ್ರಫ್‌ ಅಲಿಯವರು ಭಾರೀ ದೊಡ್ಡ ಕುಳ. ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ಸೇರಲಾಗದ ಜನರಿಗೆ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಿಸಲು ಒದ್ದಾಡುತ್ತಿದ್ದರು. ಆಕ್ಸಿಜನ್‌ ಇರುವ ಬೆಡ್‌ ಇಲ್ಲ ಎಂದು ವೈದ್ಯರು ಹೇಳಿದಾಗ, ತಾನೇ ವಾರ್ಡ್‌ ವಾರ್ಡ್‌ ಸುತ್ತಾಡಿ, ಅಲ್ಲೊಂದು ಬೆಡ್‌ ಹುಡುಕಿ ರೋಗಿಯನ್ನು ದಾಖಲಿಸಿ ನಂತರ ನಮ್ಮನ್ನು ನೋಡಲು ಬಂದರು. ಹೋಟೆಲ್‌ಗಳನ್ನು ಕೊರೊನಾ ಐಸೋಲೇಷನ್‌ ವಾರ್ಡುಗಳಾಗಿ ಮಾಡಿ ದುಡ್ಡು ಮಾಡುವ ಸಂದರ್ಭ ಬರುವ ಮುಂಚೆಯೇ ತಮ್ಮ ಹೋಟೆಲ್‌ಅನ್ನು ಉಚಿತವಾಗಿ ಅದಕ್ಕಾಗಿ ಬಿಟ್ಟುಕೊಟ್ಟಿದ್ದರು. ಇದೆಲ್ಲಾ ಮಾಡಲು ಪ್ರೇರಣೆ ಏನು?

ಕೊರೊನಾದಿಂದ ಗುಣಮುಖನಾಗಿ ಬಂದ ನಾನು ಪ್ಲಾಸ್ಮಾ ಕೊಡಬಹುದು. ಆದರೆ, ಸ್ವಲ್ಪ ಸಮಯವೂ ಇಲ್ಲದಂತಹ ಸುತ್ತಾಟ ಮತ್ತು ಪ್ಲಾಸ್ಮಾ ಥೆರಪಿ ಬಗ್ಗೆ ವಿಶ್ವಾಸ ಇಲ್ಲದಿರುವ ಕಾರಣದಿಂದ ಅಷ್ಟು ಗಮನ ಹರಿಸಲಿಲ್ಲ. ಆದರೆ, ಯಾವುದೋ ಆಸ್ಪತ್ರೆಯಲ್ಲಿ ಯಾರೋ ಬಡ ರೋಗಿಗೆ ಪ್ಲಾಸ್ಮಾ ಹೊಂದಿಸಲು ಪ್ರಯತ್ನಿಸುತ್ತಿರುವ ಮರ್ಸಿ ಮಿಷನ್‌ (ಸ್ವಯಂಸೇವಕ ಮುಸ್ಲಿಂ ಯುವಕರ ಗುಂಪು) ವಾಲಂಟಿಯರ್‌ಗಳು ನಾನು ಪ್ಲಾಸ್ಮಾ ಕೊಡುವತನಕ ಬಿಡುವಂತೆ ಕಾಣುತ್ತಿಲ್ಲ. ಆ ಕಡೆ ಇರುವ ರೋಗಿಯನ್ನು ಅವರು ಧರ್ಮ ನೋಡಿ ನೆರವು ಕೊಡುತ್ತಿಲ್ಲ ಎಂಬುದು ಮಾತ್ರ ಖಚಿತ. ಬೆಂಗಳೂರಿನಲ್ಲಿ ಕ್ರಿಶ್ಚಿಯನ್‌, ಹಿಂದೂ ಜನರ ಅಂತ್ಯ ಸಂಸ್ಕಾರವನ್ನೂ, ಸತ್ತವರ ನಂಬಿಕೆಗನುಗುಣವಾಗಿ ಮಾಡಿದವರು. ಇವರನ್ನು ಕೈ ಹಿಡಿದು ನಡೆಸುತ್ತಿರುವುದು ಏನು?

ಅವರ ಪ್ರಕಾರ ಅವರು ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಈ ದೇಶದ ಸಹಮನುಷ್ಯರಿಗೆ ಸಹಾಯ ಮಾಡುವುದು, ಸಂವಿಧಾನದ ತತ್ವಗಳಿಗನುಗುಣವಾಗಿ ನಡೆದುಕೊಳ್ಳುವುದು ಎಲ್ಲವೂ ಧರ್ಮದ ಭಾಗವೇ. ಇದೇ ದೇಶದಲ್ಲಿ, ಅವರದ್ದೇ ದೇಶವಾದರೂ ಅವರನ್ನು ಸತತವಾಗಿ ಅನ್ಯರನ್ನಾಗಿಸುತ್ತಿರುವ ದೇಶದಲ್ಲಿ ಅವರ ನಂಬಿಕೆ ಅವರನ್ನು ಮನುಷ್ಯರನ್ನಾಗಿ ಉಳಿಸಿದೆ.

ಹೌದು ಬಾಂಬ್‌ ಕಟ್ಟಿಕೊಂಡು ಸ್ಫೋಟಿಸಿ ಅಮಾಯಕರನ್ನು ಕೊಂದವರೂ ಈ ಧರ್ಮದಲ್ಲಿದ್ದರು. ಆದರೆ ಅವರ ಸಂಖ್ಯೆ ಬಹಳ ಬಹಳ ಕಡಿಮೆ. ಈ ದೇಶದ ಶೇ.1ರಷ್ಟು ಜನ ಮುಸ್ಲಿಮರು ಹಾಗೆ ಮಾಡಿದ್ದರೂ, ದೇಶವೇ ಉಳಿಯುತ್ತಿರಲಿಲ್ಲ. ಸಾಯಲು ಸಿದ್ಧರಾದವರಿಗೆ ಯಾವ ಭಯ?

ಆದರೆ ಅದೇ ಧರ್ಮ ಅವರಲ್ಲಿ ಮನುಷ್ಯಪ್ರೀತಿಯನ್ನು ಅರಳಿಸಿದ್ದಿದೆಯಲ್ಲಾ ಅದಕ್ಕೇನು ಹೇಳುವುದು? ಈ ದೇಶದ ಮುಸ್ಲಿಮರನ್ನು ನೋಡಲು ಮುಸ್ಲಿಮೇತರರಿಗೆ ಇನ್ನೊಂದು ಕಣ್ಣೂ ಬೇಕಿದೆ. ಇಲ್ಲವಾದರೆ ಧರ್ಮವೂ ಉಳಿಯುವುದಿಲ್ಲ, ದೇಶವೂ.


ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...