Homeಅಂಕಣಗಳುದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

ದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

- Advertisement -
- Advertisement -

ಈ ಸಂಚಿಕೆಯಲ್ಲಿ ಡಾ.ಕಫೀಲ್‌ ಖಾನ್‌ರವರ ಸಂದರ್ಶನವಿದೆ. ಇವರೊಂದು ಸೋಜಿಗ. ಜೆಎನ್‌ಯು ಕಾಣೆಯಾದ ವಿದ್ಯಾರ್ಥಿ ನಜೀಬ್‌ನ ತಾಯಿಯಂತೆ. ಇವರು ಕೆಲಕಾಲದ ಹಿಂದೆ ʼಸುತ್ತಲಿನ ನಾಲ್ಕು ಜನರಿಗೆ ಒಳ್ಳೆಯದುʼ ಮಾಡಿಕೊಂಡು ತಮ್ಮ ಪಾಡಿಗೆ ಇದ್ದವರು. ಆದರೆ ತಮ್ಮ ಬದುಕಿನಲ್ಲಾದ ʼಬೇರೆಯವರಾದರೆ ತತ್ತರಿಸಿ ಮೂಲೆಯಲ್ಲಿ ಕೂತುಬಿಡುವʼ ಭಯಾನಕ ಘಟನೆಗಳ ನಂತರ ಗಟ್ಟಿಯಾದವರು. ಕಫೀಲ್‌ ಖಾನ್‌ ಗೋರಖಪುರದ ತಾನು ಕೆಲಸ ಮಾಡುತ್ತಿದ್ದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳ ಸರಣಿ ಸಾವುಗಳಾಗುತ್ತಿದ್ದಾಗ ಸ್ವಂತ ಖರ್ಚಿನಿಂದ ನೆರವಾಗಿದ್ದರು. ಆಕ್ಸಿಜನ್‌ ಕೊರತೆಗೆ ಕಾರಣವಾಗಿದ್ದ ಸರ್ಕಾರವು, ಅಂತಹ ವ್ಯಕ್ತಿಯನ್ನು ಅಮಾನತು ಮಾಡಿತು, ಬಂಧಿಸಿತು.

ಬಂಧನದ ನಂತರ ಹೊರಬಂದ ವ್ಯಕ್ತಿ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿದರು. ಶಾಂತಿ ಸಾರುವ ಮಾತುಗಳನ್ನಾಡುತ್ತಾ ಹೋದವರನ್ನು, ಗಲಭೆಗೆ ಪ್ರಚೋದನೆ ನೀಡಿದರು ಎಂದು ಮತ್ತೆ ಬಂಧಿಸಲಾಯಿತು. ಬಂಧನದಿಂದ ಮತ್ತೆ ಹೊರಬಂದ ಮೇಲೆ ʼನನಗೆ ದೇಶದ ಜನರ ಸೇವೆ ಮಾಡಲು ಅವಕಾಶ ಕೊಡಿʼ ಎಂದು ಕೇಳಿದರು. ಇಡೀ ವ್ಯವಸ್ಥೆಯ ಮೇಲೆ, ದೇಶದ ಜನರ ಮೇಲೆ ಸಿಟ್ಟು ಮಾಡಿಕೊಂಡು ʼಎಲ್ಲಾ ಹಾಳಾಗಲಿʼ ಎನ್ನಬೇಕು, ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ವಾತಾವರಣವಿರುವೆಡೆ ಈ ಜೀವ ಪ್ರೀತಿ ಹೇಗೆ ಸಾಧ್ಯವಾಗಿದೆ?

ಡಾ.ಕಫೀಲ್ ಖಾನ್

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಒಬ್ಬರ ಭೇಟಿಯಾಯಿತು. ಮೂರು ಮಹಾನಗರಗಳಲ್ಲಿ ದೊಡ್ಡ ಹೋಟೆಲುಗಳ ಒಡೆಯರಾದ ಅಶ್ರಫ್‌ ಅಲಿಯವರು ಭಾರೀ ದೊಡ್ಡ ಕುಳ. ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ಸೇರಲಾಗದ ಜನರಿಗೆ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಿಸಲು ಒದ್ದಾಡುತ್ತಿದ್ದರು. ಆಕ್ಸಿಜನ್‌ ಇರುವ ಬೆಡ್‌ ಇಲ್ಲ ಎಂದು ವೈದ್ಯರು ಹೇಳಿದಾಗ, ತಾನೇ ವಾರ್ಡ್‌ ವಾರ್ಡ್‌ ಸುತ್ತಾಡಿ, ಅಲ್ಲೊಂದು ಬೆಡ್‌ ಹುಡುಕಿ ರೋಗಿಯನ್ನು ದಾಖಲಿಸಿ ನಂತರ ನಮ್ಮನ್ನು ನೋಡಲು ಬಂದರು. ಹೋಟೆಲ್‌ಗಳನ್ನು ಕೊರೊನಾ ಐಸೋಲೇಷನ್‌ ವಾರ್ಡುಗಳಾಗಿ ಮಾಡಿ ದುಡ್ಡು ಮಾಡುವ ಸಂದರ್ಭ ಬರುವ ಮುಂಚೆಯೇ ತಮ್ಮ ಹೋಟೆಲ್‌ಅನ್ನು ಉಚಿತವಾಗಿ ಅದಕ್ಕಾಗಿ ಬಿಟ್ಟುಕೊಟ್ಟಿದ್ದರು. ಇದೆಲ್ಲಾ ಮಾಡಲು ಪ್ರೇರಣೆ ಏನು?

ಕೊರೊನಾದಿಂದ ಗುಣಮುಖನಾಗಿ ಬಂದ ನಾನು ಪ್ಲಾಸ್ಮಾ ಕೊಡಬಹುದು. ಆದರೆ, ಸ್ವಲ್ಪ ಸಮಯವೂ ಇಲ್ಲದಂತಹ ಸುತ್ತಾಟ ಮತ್ತು ಪ್ಲಾಸ್ಮಾ ಥೆರಪಿ ಬಗ್ಗೆ ವಿಶ್ವಾಸ ಇಲ್ಲದಿರುವ ಕಾರಣದಿಂದ ಅಷ್ಟು ಗಮನ ಹರಿಸಲಿಲ್ಲ. ಆದರೆ, ಯಾವುದೋ ಆಸ್ಪತ್ರೆಯಲ್ಲಿ ಯಾರೋ ಬಡ ರೋಗಿಗೆ ಪ್ಲಾಸ್ಮಾ ಹೊಂದಿಸಲು ಪ್ರಯತ್ನಿಸುತ್ತಿರುವ ಮರ್ಸಿ ಮಿಷನ್‌ (ಸ್ವಯಂಸೇವಕ ಮುಸ್ಲಿಂ ಯುವಕರ ಗುಂಪು) ವಾಲಂಟಿಯರ್‌ಗಳು ನಾನು ಪ್ಲಾಸ್ಮಾ ಕೊಡುವತನಕ ಬಿಡುವಂತೆ ಕಾಣುತ್ತಿಲ್ಲ. ಆ ಕಡೆ ಇರುವ ರೋಗಿಯನ್ನು ಅವರು ಧರ್ಮ ನೋಡಿ ನೆರವು ಕೊಡುತ್ತಿಲ್ಲ ಎಂಬುದು ಮಾತ್ರ ಖಚಿತ. ಬೆಂಗಳೂರಿನಲ್ಲಿ ಕ್ರಿಶ್ಚಿಯನ್‌, ಹಿಂದೂ ಜನರ ಅಂತ್ಯ ಸಂಸ್ಕಾರವನ್ನೂ, ಸತ್ತವರ ನಂಬಿಕೆಗನುಗುಣವಾಗಿ ಮಾಡಿದವರು. ಇವರನ್ನು ಕೈ ಹಿಡಿದು ನಡೆಸುತ್ತಿರುವುದು ಏನು?

ಅವರ ಪ್ರಕಾರ ಅವರು ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಈ ದೇಶದ ಸಹಮನುಷ್ಯರಿಗೆ ಸಹಾಯ ಮಾಡುವುದು, ಸಂವಿಧಾನದ ತತ್ವಗಳಿಗನುಗುಣವಾಗಿ ನಡೆದುಕೊಳ್ಳುವುದು ಎಲ್ಲವೂ ಧರ್ಮದ ಭಾಗವೇ. ಇದೇ ದೇಶದಲ್ಲಿ, ಅವರದ್ದೇ ದೇಶವಾದರೂ ಅವರನ್ನು ಸತತವಾಗಿ ಅನ್ಯರನ್ನಾಗಿಸುತ್ತಿರುವ ದೇಶದಲ್ಲಿ ಅವರ ನಂಬಿಕೆ ಅವರನ್ನು ಮನುಷ್ಯರನ್ನಾಗಿ ಉಳಿಸಿದೆ.

ಹೌದು ಬಾಂಬ್‌ ಕಟ್ಟಿಕೊಂಡು ಸ್ಫೋಟಿಸಿ ಅಮಾಯಕರನ್ನು ಕೊಂದವರೂ ಈ ಧರ್ಮದಲ್ಲಿದ್ದರು. ಆದರೆ ಅವರ ಸಂಖ್ಯೆ ಬಹಳ ಬಹಳ ಕಡಿಮೆ. ಈ ದೇಶದ ಶೇ.1ರಷ್ಟು ಜನ ಮುಸ್ಲಿಮರು ಹಾಗೆ ಮಾಡಿದ್ದರೂ, ದೇಶವೇ ಉಳಿಯುತ್ತಿರಲಿಲ್ಲ. ಸಾಯಲು ಸಿದ್ಧರಾದವರಿಗೆ ಯಾವ ಭಯ?

ಆದರೆ ಅದೇ ಧರ್ಮ ಅವರಲ್ಲಿ ಮನುಷ್ಯಪ್ರೀತಿಯನ್ನು ಅರಳಿಸಿದ್ದಿದೆಯಲ್ಲಾ ಅದಕ್ಕೇನು ಹೇಳುವುದು? ಈ ದೇಶದ ಮುಸ್ಲಿಮರನ್ನು ನೋಡಲು ಮುಸ್ಲಿಮೇತರರಿಗೆ ಇನ್ನೊಂದು ಕಣ್ಣೂ ಬೇಕಿದೆ. ಇಲ್ಲವಾದರೆ ಧರ್ಮವೂ ಉಳಿಯುವುದಿಲ್ಲ, ದೇಶವೂ.


ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...