Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...