Homeರಾಜಕೀಯಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

- Advertisement -
- Advertisement -

ಮಲ್ಲಿ |

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ ಧ್ಯೇಯವಾಕ್ಯ. ಆತ ಪದವಿ ಓದಿದವರನ್ನೂ ಯಾಮಾರಿಸುವಂತೆ ಸುಳ್ ಸುದ್ದಿ ಹರಡುತ್ತಾನೆ. ಈಗಷ್ಟೇ ಕೇಂದ್ರ ಸರ್ಕಾರ ‘ಕಾಂಗ್ರೆಸ್’ನ ಪ್ರಣಬ್ ಮುಖರ್ಜಿಗೆ ಭಾರತರತ್ನ ನೀಡಿದೆ. ಅದಿರಲಿ, ಈಗ ನಾವು ಪ್ರಸ್ತಾಪಿಸುತ್ತಿರುವ ವಿಷಯ ಎಂದರೆ, ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿ ವಿರುದ್ಧ ತಮ್ಮ ನಾಲ್ಕನೇ ಪುಸ್ತಕದಲ್ಲಿ ಕಿಡಿ ಕಾರಿದ್ದಾರೆ ಎಂದು ಪೋಸ್ಟ್‍ಕಾರ್ಡ್ ಹೇಳುತ್ತ ಬಂದ ಸುಳ್ ಸುದ್ದಿಯ ಕುರಿತು. ಐದು ತಿಂಗಳ ಹಿಂದೆಯೇ ಈ ಕೆಲಸವನ್ನು ಅದು ಶುರು ಮಾಡಿತ್ತು.
ಇನ್ನೂ ಪುಸ್ತಕವೇ ಪ್ರಕಟವಾಗಿಲ್ಲ. ಅದರ ಒಂದು ಸಣ್ಣ ಭಾಗವನ್ನು ಸುಳ್ಳನ್ನೇ ಉಸಿರಾಡುವ ಪೋಸ್ಟ್‍ಕಾರ್ಡ್ ಡಾಟ್ ನ್ಯೂಸ್ ಪ್ರಕಟಿಸಿತ್ತು ಮತ್ತು ಅದು ಆಗಾಗ ವೈರಲ್ ಆಗುತ್ತಲೇ ಇದೆ, ಚುನಾವಣೆ ಬಂತಲ್ಲ, ಮತ್ತಷ್ಟು ಜೋರಾಗಿಯೇ ಹರಡಲಿದೆ.
ಮಿಥ್ಯ: ಪೋಸ್ಟ್‍ಕಾರ್ಡ್ ಪ್ರಕಾರ, ಮಾಜಿ ರಾಷ್ಟ್ರÀಪತಿ ಪ್ರಣಬ್ ಮುಖರ್ಜಿ ಅವರ ಪುಸ್ತಕದಿಂದ ಆಯ್ದ ಭಾಗ ಹೀಗಿದೆ:
“ನರೆಂದ್ರ ಮೋದಿಯವರ ಒಂದನೇ ವರ್ಷದ ಆಡಳಿತ ಮುಗಿದಾಗ, ಅವರು ಅಲ್ಲಿವರೆಗೆ ಮಾಡಿದ್ದ ಕೆಲಸಗಳನ್ನು ಮೆಚ್ಚಿ ನಾನು ಅವರನ್ನು ಹೊಗಳಿದ್ದೆ. ಸೋನಿಯಾ ಗಾಂಧಿಯವರಿಗೆ ಇದು ಸಿಟ್ಟು ಬರಿಸಿತು.

ರಾಷ್ಟಪತಿಯವರ ಪುಸ್ತಕದಿಂದ ಆಯ್ದ ಭಾಗ ಎಂದು ಪುಟ್ಟಾಪೂರಾ ಸುಳ್ ಬರೆದ ಪೋಸ್ಟ್‍ಕಾರ್ಡ್.

ಒಮ್ಮೆ ಸಂಸತ್ತಿನಲ್ಲಿ ಭಾಷಣ ಮುಗಿಸಿ ಹೊರಬರುವಾಗ ಸೋನಿಯಾ ನನಗೆ ಎದುರಾದರು. ಅವರ ಜೊತೆಗಿದ್ದ ಗುಲಾಮ್ ನಬಿ ಅಜಾದ್ ಮತ್ತು ಮಣಶಂಕರ್ ಅಯ್ಯರ್ ನನಗೆ ಗೌರವದಿಂದ ಹಾರೈಸಿದರು. ಆದರೆ ಸೋನಿಯಾ ಸುಮ್ಮನೆ ನಿಂತಿದ್ದರು. ನಾನೇ ಮೊದಲು ಅವರಿಗೆ ಹಾರೈಸಬೇಕೆಂದು ಅವರು ಬಯಸಿದ್ದರು. ಅವರ ಎದುರು ಈ ದೇಶದ ಪ್ರಥಮ ಪ್ರಜೆ ನಿಂತಿದ್ದಾರೆ ಎಂಬುದನ್ನೇ ಅವರು ಮರೆತಿದ್ದರು.
ಪ್ರಣಬ್ ಮುಖರ್ಜಿಯಾಗಿ ಅಲ್ಲ, ಈ ದೇಶದ ರಾಷ್ಟ್ರಪತಿ ನಾನು ಎಂಂಬುದನ್ನು ಅವರು ಒಪ್ಪಿಕೊಳ್ಳಬೇಕಿತ್ತು.
ಸೋನಿಯಾರ ಈ ವರ್ತನೆ ನನ್ನೊಳಗೆ ತೀವ್ರ ನೋವನ್ನು ಉಂಟು ಮಾಡಿತು…”
ಮೇಲಿನ ಘಟನೆ 2015ರ ಮೇನಲ್ಲಿ ನಡೆಯಿತು ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‍ಕಾರ್ಡ್ ಪ್ರಕಾರ ಇದು ಪ್ರಣಬ್ ಮುಖರ್ಜಿ ಅವರ ಪುಸ್ತಕದ ಒಂದು ಭಾಗ. ಇದನ್ನು ನಂಬಿದ ಅಮಾಯಕರು ಮತ್ತು ಸುಳ್ಳೆಂದು ಗೊತ್ತಿರುವ ಸಾವಿರಾರು ಕಿರಾತಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತ ಅನಗತ್ಯವಾಗಿ ಸೋನಿಯಾ ಗಾಂಧಿಯವರ ಮೇಲೆ ಆಕ್ರಮಣ ನಡೆಸುತ್ತಲೇ ಬಂದಿದ್ದಾರೆ.
ಸತ್ಯ: ಪ್ರಣಬ್ ಅವರ ಉದ್ದೇಶಿತ ಪುಸ್ತಕ 2018ರ ಡಿಸೆಂಬರ್‍ನಲ್ಲಿ ಪ್ರಕಟನೆಯಾಗಲಿದೆ ಎಂದು ಅದರ ಪ್ರಕಟಣಾ ಹಕ್ಕು ಪಡೆದಿರುವ ರೂಪಾ ಪ್ರಕಾಶನ ಸಂಸ್ಥೆ ಹೇಳಿತ್ತು. (ಈಗಲೂ ದು ಪ್ರಕಟವಾಗಿಲ್ಲ) ಅಂದರೆ ಪ್ರಣಬ್‍ರವರು ಈಗಾಗಲೇ ಕಾಗದದಲ್ಲಿ ಬರೆದಿರಬಹುದಾದ ಅಥವಾ ಕಂಪ್ಯೂಟರ್‍ನಲ್ಲಿ ಕೀ-ಇನ್ ಮಾಡಿರಬಹುದಾದ ಕಾಪಿಯನ್ನು ಪೋಸ್ಟ್‍ಕಾರ್ಡ್ ಕದ್ದಿರಬಹುದು ಅಂತಾ ಭಾವಿಸೋಕೂ ಆಸ್ಪದವಿಲ್ಲ. ಏಕೆಂದರೆ ಆಗ ಪ್ರಕಾಶಕರು ಮತ್ತು ಪ್ರಣಬ್ ಮುಖರ್ಜಿ ಕಚೇರಿ ಪ್ರಕಾರ ಅವರಿನ್ನೂ ಬರೆಯಲು ಶುರೂನೇ ಮಾಡಿರಲಿಲ್ಲ!

ಸೋನಿಯಾ ಗಾಂಧಿಯವರ ಜೊತೆ ಪ್ರಣಬ್ ಮುಖರ್ಜಿ

ಈ ಮೊದಲು ಪ್ರಣಬ್ ಬರೆದ ದ ಡೆಮಾಕ್ರಟಿಕ್ ಡಿಕೇಡ್, ದ ಟರ್ಬುಲೆಂಟ್ ಇಯರ್ಸ್ ಮತ್ತು ದ ಕೊಅಲಾಯನ್ಸ್ ಇಯರ್ಸ್- ಪುಸ್ತಕಗಳಲ್ಲಿ ಪ್ರಣಬ್ ಮೇಲಿನ ವಿಷಯ ಬರೆದಿಲ್ಲ, ಬರೆಯಲು ಸಾಧ್ಯವೂ ಇಲ್ಲ. ಏಕೆಂದರೆ ಇವು ಯಾವುವು 2004ರ ನಂತರದ ವಿಷಯ ಒಳಗೊಂಡಿಲ್ಲ. ಹಾಗಾದರೆ ಬರಲಿರುವ ನಾಲ್ಕನೇ ಪುಸ್ತಕ ‘ದ ಪ್ರೆಸಿಡೆನ್ಸಿಯಲ್ ಇಯರ್ಸ್’ ಪುಸ್ತಕದಲ್ಲಿ ಮೇಲಿನಂತೆ ಬರೆಯಬಹುದೇನೋ ಎಂದು ಗೆಸ್ ಮಾಡಲೂ ಆಗಲ್ಲ. ಏಕೆಂದರೆ ಪ್ರಣಬ್ ಎಂದೂ ಸಾರ್ವಜನಿಕವಾಗಿ ಸೋನಿಯಾರ ಬಗ್ಗೆ ಆಕ್ಷೇಪದ ಮಾತು ಆಡಿಲ್ಲ.
ಆಗ ಸ್ಪಷ್ಟೀಕರಣ ನೀಡಿದ್ದ ಪ್ರಣಬ್ ಕಚೇರಿ, ‘ಉದ್ದೇಶಿತ ಪುಸ್ತಕ ಪ್ರಣಬ್ ಮುಖರ್ಜಿಯವರನ್ನು ರಾಷ್ಟ್ರಪತಿ ಎಂದು ಘೋಷಿಸುವಲ್ಲಿಗೆ ಮುಗಿಯುತ್ತದೆ. ರಾಷ್ಟ್ರಪತಿಯಾದ ನಂತರದ ಘಟನೆಗಳು ಇದರಲ್ಲಿ ಬರುವುದೇ ಇಲ್ಲ. ಈ ಪುಸ್ತಕವು 2004-2012ರವರೆಗಿನ ಅವಧಿಗೆ ಸಿಮೀತ. ಇನ್ನು ಮೇ, 2015ರ ವಿಷಯ (ಅಂದರೆ ಪೋಸ್ಟ್‍ಕಾರ್ಡ್‍ನ ಸುಳ್ಳು) ಇದರಲ್ಲಿ ಹೇಗೆ ಬರಲು ಸಾಧ್ಯ?’ ಎಂದು ಪ್ರಕಟಣೆ ನೀಡುವ ಮೂಲಕ ಪೋಸ್ಟ್‍ಕಾರ್ಡ್ ಕುತಂತ್ರವನ್ನು ಬಯಲು ಮಾಡಿತ್ತು.

(ಕೃಪೆ:Altnews.com)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...