Homeಮುಖಪುಟಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಶಿವಸೇನೆ ನಡುವಿನ ವಿವಾದದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ತಟಸ್ಥ ನಿಲುವು ತಳೆದಿದ್ದಾರೆ. ಆದರೂ ಸೋನಿಯಾ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿರುವ ನಿಮ್ಮ ಸರ್ಕಾರ ನನಗೆ ಕಿರುಕುಳ ನೀಡುತ್ತಿದ್ದರೂ, ಈ ಬಗ್ಗೆ ನಿಮಗೆ ಸಂಕಟವಾಗುತ್ತಿಲ್ಲವೇ ?‘ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ನಟಿ ಕಂಗನಾ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಟ್ವೀಟ್ ಮಾಡಿದ್ದರು.

ಶಿವಸೇನಾ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ಬಿಎಂಸಿ ಆಕೆಯ ಮಣಿಕರ್ಣಿಕಾ ಫಿಲ್ಮಂ ಕಚೇರಿಯಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಲಾಗಿದೆ ಎಂದು ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಈ ಪ್ರಕರಣ ಈ ಬಾಂಬೆ ಹೈಕೋಟ್‌ನಲ್ಲಿದ್ದು, ವಿಚಾರಣೆ ಸೆ.22ಕ್ಕೆ ನಡೆಯಲಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಈ ನಡುವೆ ವಿವಾದದಲ್ಲಿ ಕೇಂದ್ರ ಕಾಂಗ್ರೆಸ್ ವಲಯ ಯಾವುದೇ ಹೇಳಿಕೆ ನೀಡದೆ ತಟಸ್ಥವಾಗಿತ್ತು. ನಾವು ಗಮನಹರಿಸಬೇಕಾದ ಇದಕ್ಕಿಂತ ಮುಖ್ಯ ವಿಷಯಗಳಿವೆ ಎಂದು ಘಟನೆಯಿಂದ ದೂರ ಉಳಿಯುವ ಪ್ರಯತ್ನ ನಡೆಸಿತ್ತು. ಆದರೆ ನಟಿ ಕಂಗನಾ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ವಿವಾದದಲ್ಲಿ ಎಳೆತಂದಿದ್ದು, ಅವರ ವಿರುದ್ಧ ಪ್ರಶ್ನೆಗಳ ಸುರಿಮಳೆ ಸುರಿದು, ವಾಗ್ದಾಳಿ ನಡೆಸಿದ್ದಾರೆ.

‘ಗೌರವಾನ್ವಿತ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರೇ, ಒಬ್ಬ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಮಹಾರಾಷ್ಟ್ರ ಸರ್ಕಾರ ನನಗೆ ಕಿರುಕುಳ ನೀಡುತ್ತಿರುವುದು ನಿಮಗೆ ಸಂಕಟ ತರುತ್ತಿಲ್ಲವೇ?  ಡಾ. ಅಂಬೇಡ್ಕರ್‌ ಅವರು ನಮಗೆ ನೀಡಿರುವ ಸಂವಿಧಾನದ ತತ್ವಗಳನ್ನು ಎತ್ತಿ ಹಿಡಿಯುವಂತೆ ಆ ನಿಮ್ಮ ಸರ್ಕಾರಕ್ಕೆ ಮನವಿ ಮಾಡಲು ಸಾಧ್ಯವಿಲ್ಲವೇ?‘ ಎಂದು ಕಂಗನಾ ಟ್ವೀಟ್‌ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ನಟಿ ಇನ್ನೊಂದು ಟ್ವೀಟ್‌ನಲ್ಲಿ, ನೀವು ಪಾಶ್ಚಿಮಾತ್ಯ ದೇಶದಲ್ಲಿ ಬೆಳೆದವರು, ಈಗ ಭಾರತದಲ್ಲಿ ನೆಲೆಸಿದ್ದೀರಿ. ಮಹಿಳೆಯರ ಸಂಕಷ್ಟಗಳ ಬಗ್ಗೆ ನಿಮಗೆ ಅರಿವಿರಬಹುದು. ನಿಮ್ಮ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿರುವಾಗ ನೀವು ಮೌನ ವಹಿಸಿರುವುದು ಹಾಗೂ ನಿರ್ಲಕ್ಷ್ಯ ತೋರುತ್ತಿರುವುದನ್ನ ಇತಿಹಾಸವೇ ನಿರ್ಣಯಿಸುತ್ತದೆ ಎಂದು ಕಟುವಾದ ಸಾಲುಗಳನ್ನು ಅವರು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ನಟಿಯ ಅಸಮಾಧಾನ, ಆಕ್ರೋಶ ನಿಜವಿರಬಹುದು, ಆಕೆಗೆ ಅನ್ಯಾಯವಾಗಿದ್ದರೆ ಅದನ್ನು ಪ್ರಶ್ನಿಸುವುದು, ಹೋರಾಡುವುದು ಆಕೆಯ ಹಕ್ಕು. ಹಾಗೆಂದ ಮಾತ್ರಕ್ಕೆ ಅದಕ್ಕೆ ಸಂಬಂಧವೇ ಇಲ್ಲದ ಮತ್ತೊಬ್ಬ ಮಹಿಳೆಯನ್ನೇ ಅವರು ಟಾರ್ಗೆಟ್ ಮಾಡುವ ಅವಶ್ಯಕತೆ ಖಂಡಿತ ಇಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರಸ್ ಪಕ್ಷ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡ ಮಾತ್ರಕ್ಕೆ ನಿಮ್ಮ ಮುಂಬೈ ಪೊಲೀಸರ ಮತ್ತು ಮಹಾರಾಷ್ಟ್ರದ ಬಗೆಗಿನ ಹೇಳಿಕೆಗಳನ್ನು ಅವರು ಸಮರ್ಥಿಸಿಕೊಳ್ಳಬೇಕೆ?

ಹೌದು, ಈ ದೇಶದಲ್ಲಿ ಅತಿ ಹೆಚ್ಚು ಅವಮಾನ, ಅಪಹಾಸ್ಯ, ಟೀಕೆಗಳು, ಕೀಳುಮಟ್ಟದ ಕಾಮೆಂಟ್‌ಗಳು, ಕೆಟ್ಟ ಮೀಮ್ಸ್‌ಗಳಿಗೆ ಗುರಿಯಾದ ಏಕೈಕ ಮಹಿಳೆ ಸೋನಿಯಾ ಗಾಂಧಿ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಆಕೆಯ ಬಗ್ಗೆ, ಆಕೆಯ ದೇಶಾಭಿಮಾನ, ಆಕೆಯ ಪೌರತ್ವದ ಬಗ್ಗೆ, ವಿದೇಶಿ ಮಹಿಳೆ ಎಂಬ ಬಗ್ಗೆ ಸಂಘಪರಿವಾರ, ವಿಶ್ವ ಹಿಂದೂ ಪರಿಷತ್‌ನಂತಹ ಸಂಘಟನೆಗಳು, ಭಾರತೀಯ ಜನತಾ ಪಾರ್ಟಿಯಂತಹ ಪಕ್ಷಗಳು ಅಪಹಾಸ್ಯ ಮಾಡಿವೆ ಮತ್ತು ಮಾಡುತ್ತಲೇ ಇವೆ.

ರಾಜಕೀಯದಲ್ಲಿ ಎಲ್ಲಾ ಪಕ್ಷಗಳಲ್ಲೂ ಮಹಿಳೆಯರಿದ್ದಾರೆ. ಇಷ್ಟು ದಿನಗಳ ಕಾಲ ಯಾವ ಮಹಿಳೆಯ ಹೆಸರನ್ನೂ ಉಲ್ಲೇಖಿಸದ ಕಂಗನಾ ಇಂದು ಸೋನಿಯಾ ಗಾಂಧಿ ಒಬ್ಬರನ್ನೇ ಎಳೆದುತಂದಿದ್ದೇಕೆ..? ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ. ಇವುಗಳನ್ನು ನೋಡಿದಾಗ ಸೋನಿಯಾ ಗಾಂಧಿ ಹೆಸರು ತರುವ ಹಿಂದೆ ಹುನ್ನಾರವಿದೆ ಎನ್ನಿಸುವುದಿಲ್ಲವೆ..?

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಾಣಾವತ್‌ಗೊಂದು ಪತ್ರ

ಕಂಗನಾ ಕೂಡ ತಮ್ಮ ನೋವಿಗೆ ದನಿಯಾಗಿ ಎಂದು ಕೇಳಿಲ್ಲ. ಆಕೆ ಕೂಡ ಸೋನಿಯಾ ಗಾಂಧಿಯನ್ನು ಅವಮಾನಿಸಿಯೇ ಟ್ವೀಟ್ ಮಾಡಿರುವು ಕಾಣುತ್ತದೆ. ಪಾಶ್ಚಿಮಾತ್ಯ ದೇಶದವರು, ಇಲ್ಲಿನ ಮಹಿಳೆಯರ ಸಂಕಷ್ಟಗಳ ಅರಿವಿರಲಿ ಎನ್ನುವ ನಟಿಗೆ ಸೋನಿಯಾ ಗಾಂಧಿ ಭಾರತದ ಪ್ರಜೆಯಾಗಿದ್ದಾಗ ಈಕೆ ಇನ್ನೂ ಹುಟ್ಟಿರಲಿಲ್ಲ ಎನ್ನುವ ಅರಿವಿರದೇ ಹೋಗಿದ್ದು ವಿಷಾದ.

ಇನ್ನು ಇದೇ ಸಂದರ್ಭದಲ್ಲಿ ಕಂಗನಾರವರ ತಾಯಿ ಬಿಜೆಪಿ ಪಕ್ಷ ಸೇರುತ್ತಿರುವುದು, ಮಹರಾಷ್ಟ್ರದ ವಿರುದ್ಧ ಹೇಳಿಕೆ ನೀಡಿದರೂ ಸಹ ಬಿಜೆಪಿ ಕಂಗನಾ ಪರ ನಿಂತಿರುವುದಕ್ಕೂ, ಕಂಗನಾ ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಮಾತಾಡುತ್ತಿರುವುದಕ್ಕೂ ಸಂಬಂಧವಿಲ್ಲವೇ ಎಂಬ ಪ್ರಶ್ನೆ ಸಹ ಜೋರಾಗಿ ಕೇಳಿಬಂದಿದೆ.

ಇನ್ನು ಡ್ರಗ್ಸ್ ವಿಚಾರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಹೆಚ್ಚಾಗಿ ನಟಿಯರನ್ನೇ ಬಂಧಿಸಲಾಗುತ್ತಿದೆ. ಏಕೆ ನಟರು ಯಾರೂ ಡ್ರಗ್ಸ್ ತೆಗೆದುಕೊಳ್ಳುವುದಿಲ್ಲವೇ? ಈ ಬಗ್ಗೆ ಕಂಗನಾ ಏಕೆ ದನಿಯೆತ್ತುತ್ತಿಲ್ಲ ಎಂದರೆ ಅದಕ್ಕೆ ಅವರು ಯಾವ ಉತ್ತರ ಕೊಡುತ್ತಾರೆ?

ಪ್ರತಿ ವ್ಯಕ್ತಿಯ ಮೌನಕ್ಕೆ ಕಾಲವೇ ಉತ್ತರ ನೀಡುತ್ತದೆ ಎನ್ನುವುದಕ್ಕೆ ಸೋನಿಯಾ ಗಾಂಧಿ ನಿದರ್ಶನ. ತಮ್ಮ ಬಗ್ಗೆ ಬರುವ ಟೀಕೆಗಳಿಗೆ ಆಕೆ ಉತ್ತರಿಸಿದ್ದು ಕಡಿಮೆಯೇ. ಬೇರೆಯವರ ಪೊಳ್ಳು ಮಾತುಗಳಿಗೆ, ವಿವಾದಗಳಿಗೆ ಪ್ರಾಮುಖ್ಯತೆ ನೀಡದೇ ತಮ್ಮ ಕೆಲಸದ ಕಡೆಯಷ್ಟೇ ಗಮನ ಕೊಡುತ್ತಾ ಸಾಗಿದ್ದಾರೆ.


ಇದನ್ನೂ ಓದಿ; ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...