Homeಮುಖಪುಟಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಶಿವಸೇನೆ ನಡುವಿನ ವಿವಾದದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ತಟಸ್ಥ ನಿಲುವು ತಳೆದಿದ್ದಾರೆ. ಆದರೂ ಸೋನಿಯಾ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿರುವ ನಿಮ್ಮ ಸರ್ಕಾರ ನನಗೆ ಕಿರುಕುಳ ನೀಡುತ್ತಿದ್ದರೂ, ಈ ಬಗ್ಗೆ ನಿಮಗೆ ಸಂಕಟವಾಗುತ್ತಿಲ್ಲವೇ ?‘ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ನಟಿ ಕಂಗನಾ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಟ್ವೀಟ್ ಮಾಡಿದ್ದರು.

ಶಿವಸೇನಾ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ಬಿಎಂಸಿ ಆಕೆಯ ಮಣಿಕರ್ಣಿಕಾ ಫಿಲ್ಮಂ ಕಚೇರಿಯಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಲಾಗಿದೆ ಎಂದು ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಈ ಪ್ರಕರಣ ಈ ಬಾಂಬೆ ಹೈಕೋಟ್‌ನಲ್ಲಿದ್ದು, ವಿಚಾರಣೆ ಸೆ.22ಕ್ಕೆ ನಡೆಯಲಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಈ ನಡುವೆ ವಿವಾದದಲ್ಲಿ ಕೇಂದ್ರ ಕಾಂಗ್ರೆಸ್ ವಲಯ ಯಾವುದೇ ಹೇಳಿಕೆ ನೀಡದೆ ತಟಸ್ಥವಾಗಿತ್ತು. ನಾವು ಗಮನಹರಿಸಬೇಕಾದ ಇದಕ್ಕಿಂತ ಮುಖ್ಯ ವಿಷಯಗಳಿವೆ ಎಂದು ಘಟನೆಯಿಂದ ದೂರ ಉಳಿಯುವ ಪ್ರಯತ್ನ ನಡೆಸಿತ್ತು. ಆದರೆ ನಟಿ ಕಂಗನಾ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ವಿವಾದದಲ್ಲಿ ಎಳೆತಂದಿದ್ದು, ಅವರ ವಿರುದ್ಧ ಪ್ರಶ್ನೆಗಳ ಸುರಿಮಳೆ ಸುರಿದು, ವಾಗ್ದಾಳಿ ನಡೆಸಿದ್ದಾರೆ.

‘ಗೌರವಾನ್ವಿತ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರೇ, ಒಬ್ಬ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಮಹಾರಾಷ್ಟ್ರ ಸರ್ಕಾರ ನನಗೆ ಕಿರುಕುಳ ನೀಡುತ್ತಿರುವುದು ನಿಮಗೆ ಸಂಕಟ ತರುತ್ತಿಲ್ಲವೇ?  ಡಾ. ಅಂಬೇಡ್ಕರ್‌ ಅವರು ನಮಗೆ ನೀಡಿರುವ ಸಂವಿಧಾನದ ತತ್ವಗಳನ್ನು ಎತ್ತಿ ಹಿಡಿಯುವಂತೆ ಆ ನಿಮ್ಮ ಸರ್ಕಾರಕ್ಕೆ ಮನವಿ ಮಾಡಲು ಸಾಧ್ಯವಿಲ್ಲವೇ?‘ ಎಂದು ಕಂಗನಾ ಟ್ವೀಟ್‌ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ನಟಿ ಇನ್ನೊಂದು ಟ್ವೀಟ್‌ನಲ್ಲಿ, ನೀವು ಪಾಶ್ಚಿಮಾತ್ಯ ದೇಶದಲ್ಲಿ ಬೆಳೆದವರು, ಈಗ ಭಾರತದಲ್ಲಿ ನೆಲೆಸಿದ್ದೀರಿ. ಮಹಿಳೆಯರ ಸಂಕಷ್ಟಗಳ ಬಗ್ಗೆ ನಿಮಗೆ ಅರಿವಿರಬಹುದು. ನಿಮ್ಮ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿರುವಾಗ ನೀವು ಮೌನ ವಹಿಸಿರುವುದು ಹಾಗೂ ನಿರ್ಲಕ್ಷ್ಯ ತೋರುತ್ತಿರುವುದನ್ನ ಇತಿಹಾಸವೇ ನಿರ್ಣಯಿಸುತ್ತದೆ ಎಂದು ಕಟುವಾದ ಸಾಲುಗಳನ್ನು ಅವರು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ನಟಿಯ ಅಸಮಾಧಾನ, ಆಕ್ರೋಶ ನಿಜವಿರಬಹುದು, ಆಕೆಗೆ ಅನ್ಯಾಯವಾಗಿದ್ದರೆ ಅದನ್ನು ಪ್ರಶ್ನಿಸುವುದು, ಹೋರಾಡುವುದು ಆಕೆಯ ಹಕ್ಕು. ಹಾಗೆಂದ ಮಾತ್ರಕ್ಕೆ ಅದಕ್ಕೆ ಸಂಬಂಧವೇ ಇಲ್ಲದ ಮತ್ತೊಬ್ಬ ಮಹಿಳೆಯನ್ನೇ ಅವರು ಟಾರ್ಗೆಟ್ ಮಾಡುವ ಅವಶ್ಯಕತೆ ಖಂಡಿತ ಇಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರಸ್ ಪಕ್ಷ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡ ಮಾತ್ರಕ್ಕೆ ನಿಮ್ಮ ಮುಂಬೈ ಪೊಲೀಸರ ಮತ್ತು ಮಹಾರಾಷ್ಟ್ರದ ಬಗೆಗಿನ ಹೇಳಿಕೆಗಳನ್ನು ಅವರು ಸಮರ್ಥಿಸಿಕೊಳ್ಳಬೇಕೆ?

ಹೌದು, ಈ ದೇಶದಲ್ಲಿ ಅತಿ ಹೆಚ್ಚು ಅವಮಾನ, ಅಪಹಾಸ್ಯ, ಟೀಕೆಗಳು, ಕೀಳುಮಟ್ಟದ ಕಾಮೆಂಟ್‌ಗಳು, ಕೆಟ್ಟ ಮೀಮ್ಸ್‌ಗಳಿಗೆ ಗುರಿಯಾದ ಏಕೈಕ ಮಹಿಳೆ ಸೋನಿಯಾ ಗಾಂಧಿ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಆಕೆಯ ಬಗ್ಗೆ, ಆಕೆಯ ದೇಶಾಭಿಮಾನ, ಆಕೆಯ ಪೌರತ್ವದ ಬಗ್ಗೆ, ವಿದೇಶಿ ಮಹಿಳೆ ಎಂಬ ಬಗ್ಗೆ ಸಂಘಪರಿವಾರ, ವಿಶ್ವ ಹಿಂದೂ ಪರಿಷತ್‌ನಂತಹ ಸಂಘಟನೆಗಳು, ಭಾರತೀಯ ಜನತಾ ಪಾರ್ಟಿಯಂತಹ ಪಕ್ಷಗಳು ಅಪಹಾಸ್ಯ ಮಾಡಿವೆ ಮತ್ತು ಮಾಡುತ್ತಲೇ ಇವೆ.

ರಾಜಕೀಯದಲ್ಲಿ ಎಲ್ಲಾ ಪಕ್ಷಗಳಲ್ಲೂ ಮಹಿಳೆಯರಿದ್ದಾರೆ. ಇಷ್ಟು ದಿನಗಳ ಕಾಲ ಯಾವ ಮಹಿಳೆಯ ಹೆಸರನ್ನೂ ಉಲ್ಲೇಖಿಸದ ಕಂಗನಾ ಇಂದು ಸೋನಿಯಾ ಗಾಂಧಿ ಒಬ್ಬರನ್ನೇ ಎಳೆದುತಂದಿದ್ದೇಕೆ..? ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ. ಇವುಗಳನ್ನು ನೋಡಿದಾಗ ಸೋನಿಯಾ ಗಾಂಧಿ ಹೆಸರು ತರುವ ಹಿಂದೆ ಹುನ್ನಾರವಿದೆ ಎನ್ನಿಸುವುದಿಲ್ಲವೆ..?

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಾಣಾವತ್‌ಗೊಂದು ಪತ್ರ

ಕಂಗನಾ ಕೂಡ ತಮ್ಮ ನೋವಿಗೆ ದನಿಯಾಗಿ ಎಂದು ಕೇಳಿಲ್ಲ. ಆಕೆ ಕೂಡ ಸೋನಿಯಾ ಗಾಂಧಿಯನ್ನು ಅವಮಾನಿಸಿಯೇ ಟ್ವೀಟ್ ಮಾಡಿರುವು ಕಾಣುತ್ತದೆ. ಪಾಶ್ಚಿಮಾತ್ಯ ದೇಶದವರು, ಇಲ್ಲಿನ ಮಹಿಳೆಯರ ಸಂಕಷ್ಟಗಳ ಅರಿವಿರಲಿ ಎನ್ನುವ ನಟಿಗೆ ಸೋನಿಯಾ ಗಾಂಧಿ ಭಾರತದ ಪ್ರಜೆಯಾಗಿದ್ದಾಗ ಈಕೆ ಇನ್ನೂ ಹುಟ್ಟಿರಲಿಲ್ಲ ಎನ್ನುವ ಅರಿವಿರದೇ ಹೋಗಿದ್ದು ವಿಷಾದ.

ಇನ್ನು ಇದೇ ಸಂದರ್ಭದಲ್ಲಿ ಕಂಗನಾರವರ ತಾಯಿ ಬಿಜೆಪಿ ಪಕ್ಷ ಸೇರುತ್ತಿರುವುದು, ಮಹರಾಷ್ಟ್ರದ ವಿರುದ್ಧ ಹೇಳಿಕೆ ನೀಡಿದರೂ ಸಹ ಬಿಜೆಪಿ ಕಂಗನಾ ಪರ ನಿಂತಿರುವುದಕ್ಕೂ, ಕಂಗನಾ ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಮಾತಾಡುತ್ತಿರುವುದಕ್ಕೂ ಸಂಬಂಧವಿಲ್ಲವೇ ಎಂಬ ಪ್ರಶ್ನೆ ಸಹ ಜೋರಾಗಿ ಕೇಳಿಬಂದಿದೆ.

ಇನ್ನು ಡ್ರಗ್ಸ್ ವಿಚಾರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಹೆಚ್ಚಾಗಿ ನಟಿಯರನ್ನೇ ಬಂಧಿಸಲಾಗುತ್ತಿದೆ. ಏಕೆ ನಟರು ಯಾರೂ ಡ್ರಗ್ಸ್ ತೆಗೆದುಕೊಳ್ಳುವುದಿಲ್ಲವೇ? ಈ ಬಗ್ಗೆ ಕಂಗನಾ ಏಕೆ ದನಿಯೆತ್ತುತ್ತಿಲ್ಲ ಎಂದರೆ ಅದಕ್ಕೆ ಅವರು ಯಾವ ಉತ್ತರ ಕೊಡುತ್ತಾರೆ?

ಪ್ರತಿ ವ್ಯಕ್ತಿಯ ಮೌನಕ್ಕೆ ಕಾಲವೇ ಉತ್ತರ ನೀಡುತ್ತದೆ ಎನ್ನುವುದಕ್ಕೆ ಸೋನಿಯಾ ಗಾಂಧಿ ನಿದರ್ಶನ. ತಮ್ಮ ಬಗ್ಗೆ ಬರುವ ಟೀಕೆಗಳಿಗೆ ಆಕೆ ಉತ್ತರಿಸಿದ್ದು ಕಡಿಮೆಯೇ. ಬೇರೆಯವರ ಪೊಳ್ಳು ಮಾತುಗಳಿಗೆ, ವಿವಾದಗಳಿಗೆ ಪ್ರಾಮುಖ್ಯತೆ ನೀಡದೇ ತಮ್ಮ ಕೆಲಸದ ಕಡೆಯಷ್ಟೇ ಗಮನ ಕೊಡುತ್ತಾ ಸಾಗಿದ್ದಾರೆ.


ಇದನ್ನೂ ಓದಿ; ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....