Homeಮುಖಪುಟಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತು ಶಿವಸೇನೆ ನಡುವಿನ ವಿವಾದದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ತಟಸ್ಥ ನಿಲುವು ತಳೆದಿದ್ದಾರೆ. ಆದರೂ ಸೋನಿಯಾ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿರುವ ನಿಮ್ಮ ಸರ್ಕಾರ ನನಗೆ ಕಿರುಕುಳ ನೀಡುತ್ತಿದ್ದರೂ, ಈ ಬಗ್ಗೆ ನಿಮಗೆ ಸಂಕಟವಾಗುತ್ತಿಲ್ಲವೇ ?‘ ಎಂದು ಕಂಗನಾ ಪ್ರಶ್ನಿಸಿದ್ದಾರೆ.

ನಟಿ ಕಂಗನಾ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಟ್ವೀಟ್ ಮಾಡಿದ್ದರು.

ಶಿವಸೇನಾ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ಬಿಎಂಸಿ ಆಕೆಯ ಮಣಿಕರ್ಣಿಕಾ ಫಿಲ್ಮಂ ಕಚೇರಿಯಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಲಾಗಿದೆ ಎಂದು ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಈ ಪ್ರಕರಣ ಈ ಬಾಂಬೆ ಹೈಕೋಟ್‌ನಲ್ಲಿದ್ದು, ವಿಚಾರಣೆ ಸೆ.22ಕ್ಕೆ ನಡೆಯಲಿದೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಈ ನಡುವೆ ವಿವಾದದಲ್ಲಿ ಕೇಂದ್ರ ಕಾಂಗ್ರೆಸ್ ವಲಯ ಯಾವುದೇ ಹೇಳಿಕೆ ನೀಡದೆ ತಟಸ್ಥವಾಗಿತ್ತು. ನಾವು ಗಮನಹರಿಸಬೇಕಾದ ಇದಕ್ಕಿಂತ ಮುಖ್ಯ ವಿಷಯಗಳಿವೆ ಎಂದು ಘಟನೆಯಿಂದ ದೂರ ಉಳಿಯುವ ಪ್ರಯತ್ನ ನಡೆಸಿತ್ತು. ಆದರೆ ನಟಿ ಕಂಗನಾ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ವಿವಾದದಲ್ಲಿ ಎಳೆತಂದಿದ್ದು, ಅವರ ವಿರುದ್ಧ ಪ್ರಶ್ನೆಗಳ ಸುರಿಮಳೆ ಸುರಿದು, ವಾಗ್ದಾಳಿ ನಡೆಸಿದ್ದಾರೆ.

‘ಗೌರವಾನ್ವಿತ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರೇ, ಒಬ್ಬ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಮಹಾರಾಷ್ಟ್ರ ಸರ್ಕಾರ ನನಗೆ ಕಿರುಕುಳ ನೀಡುತ್ತಿರುವುದು ನಿಮಗೆ ಸಂಕಟ ತರುತ್ತಿಲ್ಲವೇ?  ಡಾ. ಅಂಬೇಡ್ಕರ್‌ ಅವರು ನಮಗೆ ನೀಡಿರುವ ಸಂವಿಧಾನದ ತತ್ವಗಳನ್ನು ಎತ್ತಿ ಹಿಡಿಯುವಂತೆ ಆ ನಿಮ್ಮ ಸರ್ಕಾರಕ್ಕೆ ಮನವಿ ಮಾಡಲು ಸಾಧ್ಯವಿಲ್ಲವೇ?‘ ಎಂದು ಕಂಗನಾ ಟ್ವೀಟ್‌ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ನಟಿ ಇನ್ನೊಂದು ಟ್ವೀಟ್‌ನಲ್ಲಿ, ನೀವು ಪಾಶ್ಚಿಮಾತ್ಯ ದೇಶದಲ್ಲಿ ಬೆಳೆದವರು, ಈಗ ಭಾರತದಲ್ಲಿ ನೆಲೆಸಿದ್ದೀರಿ. ಮಹಿಳೆಯರ ಸಂಕಷ್ಟಗಳ ಬಗ್ಗೆ ನಿಮಗೆ ಅರಿವಿರಬಹುದು. ನಿಮ್ಮ ಸರ್ಕಾರ ಮಹಿಳೆಯರ ಮೇಲೆ ದೌರ್ಜನ್ಯವೆಸಗುತ್ತಿರುವಾಗ ನೀವು ಮೌನ ವಹಿಸಿರುವುದು ಹಾಗೂ ನಿರ್ಲಕ್ಷ್ಯ ತೋರುತ್ತಿರುವುದನ್ನ ಇತಿಹಾಸವೇ ನಿರ್ಣಯಿಸುತ್ತದೆ ಎಂದು ಕಟುವಾದ ಸಾಲುಗಳನ್ನು ಅವರು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ನಟಿಯ ಅಸಮಾಧಾನ, ಆಕ್ರೋಶ ನಿಜವಿರಬಹುದು, ಆಕೆಗೆ ಅನ್ಯಾಯವಾಗಿದ್ದರೆ ಅದನ್ನು ಪ್ರಶ್ನಿಸುವುದು, ಹೋರಾಡುವುದು ಆಕೆಯ ಹಕ್ಕು. ಹಾಗೆಂದ ಮಾತ್ರಕ್ಕೆ ಅದಕ್ಕೆ ಸಂಬಂಧವೇ ಇಲ್ಲದ ಮತ್ತೊಬ್ಬ ಮಹಿಳೆಯನ್ನೇ ಅವರು ಟಾರ್ಗೆಟ್ ಮಾಡುವ ಅವಶ್ಯಕತೆ ಖಂಡಿತ ಇಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರಸ್ ಪಕ್ಷ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡ ಮಾತ್ರಕ್ಕೆ ನಿಮ್ಮ ಮುಂಬೈ ಪೊಲೀಸರ ಮತ್ತು ಮಹಾರಾಷ್ಟ್ರದ ಬಗೆಗಿನ ಹೇಳಿಕೆಗಳನ್ನು ಅವರು ಸಮರ್ಥಿಸಿಕೊಳ್ಳಬೇಕೆ?

ಹೌದು, ಈ ದೇಶದಲ್ಲಿ ಅತಿ ಹೆಚ್ಚು ಅವಮಾನ, ಅಪಹಾಸ್ಯ, ಟೀಕೆಗಳು, ಕೀಳುಮಟ್ಟದ ಕಾಮೆಂಟ್‌ಗಳು, ಕೆಟ್ಟ ಮೀಮ್ಸ್‌ಗಳಿಗೆ ಗುರಿಯಾದ ಏಕೈಕ ಮಹಿಳೆ ಸೋನಿಯಾ ಗಾಂಧಿ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಆಕೆಯ ಬಗ್ಗೆ, ಆಕೆಯ ದೇಶಾಭಿಮಾನ, ಆಕೆಯ ಪೌರತ್ವದ ಬಗ್ಗೆ, ವಿದೇಶಿ ಮಹಿಳೆ ಎಂಬ ಬಗ್ಗೆ ಸಂಘಪರಿವಾರ, ವಿಶ್ವ ಹಿಂದೂ ಪರಿಷತ್‌ನಂತಹ ಸಂಘಟನೆಗಳು, ಭಾರತೀಯ ಜನತಾ ಪಾರ್ಟಿಯಂತಹ ಪಕ್ಷಗಳು ಅಪಹಾಸ್ಯ ಮಾಡಿವೆ ಮತ್ತು ಮಾಡುತ್ತಲೇ ಇವೆ.

ರಾಜಕೀಯದಲ್ಲಿ ಎಲ್ಲಾ ಪಕ್ಷಗಳಲ್ಲೂ ಮಹಿಳೆಯರಿದ್ದಾರೆ. ಇಷ್ಟು ದಿನಗಳ ಕಾಲ ಯಾವ ಮಹಿಳೆಯ ಹೆಸರನ್ನೂ ಉಲ್ಲೇಖಿಸದ ಕಂಗನಾ ಇಂದು ಸೋನಿಯಾ ಗಾಂಧಿ ಒಬ್ಬರನ್ನೇ ಎಳೆದುತಂದಿದ್ದೇಕೆ..? ಕಂಗನಾ ಮಾತ್ರವಲ್ಲದೇ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಸಹ ಪದೇ ಪದೇ ಎಲ್ಲ ವಿವಾದಗಳಿಗೂ ಸೋನಿಯಾ ಗಾಂಧಿಯನ್ನು ದೂರುತ್ತಾರೆ. ಪಾಲ್ಘಾರ್ ಲಿಂಚಿಂಗ್ ಪ್ರಕರಣ ನಡೆದಾಗಿನಿಂದಲೂ ಸೋನಿಯಾ ಗಾಂಧಿಯವರನ್ನು ಕೆಟ್ಟದಾಗ ನಿಂದಿಸಲು ಪ್ರಾರಂಭಿಸಿದ್ದಾರೆ. ಇವುಗಳನ್ನು ನೋಡಿದಾಗ ಸೋನಿಯಾ ಗಾಂಧಿ ಹೆಸರು ತರುವ ಹಿಂದೆ ಹುನ್ನಾರವಿದೆ ಎನ್ನಿಸುವುದಿಲ್ಲವೆ..?

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಾಣಾವತ್‌ಗೊಂದು ಪತ್ರ

ಕಂಗನಾ ಕೂಡ ತಮ್ಮ ನೋವಿಗೆ ದನಿಯಾಗಿ ಎಂದು ಕೇಳಿಲ್ಲ. ಆಕೆ ಕೂಡ ಸೋನಿಯಾ ಗಾಂಧಿಯನ್ನು ಅವಮಾನಿಸಿಯೇ ಟ್ವೀಟ್ ಮಾಡಿರುವು ಕಾಣುತ್ತದೆ. ಪಾಶ್ಚಿಮಾತ್ಯ ದೇಶದವರು, ಇಲ್ಲಿನ ಮಹಿಳೆಯರ ಸಂಕಷ್ಟಗಳ ಅರಿವಿರಲಿ ಎನ್ನುವ ನಟಿಗೆ ಸೋನಿಯಾ ಗಾಂಧಿ ಭಾರತದ ಪ್ರಜೆಯಾಗಿದ್ದಾಗ ಈಕೆ ಇನ್ನೂ ಹುಟ್ಟಿರಲಿಲ್ಲ ಎನ್ನುವ ಅರಿವಿರದೇ ಹೋಗಿದ್ದು ವಿಷಾದ.

ಇನ್ನು ಇದೇ ಸಂದರ್ಭದಲ್ಲಿ ಕಂಗನಾರವರ ತಾಯಿ ಬಿಜೆಪಿ ಪಕ್ಷ ಸೇರುತ್ತಿರುವುದು, ಮಹರಾಷ್ಟ್ರದ ವಿರುದ್ಧ ಹೇಳಿಕೆ ನೀಡಿದರೂ ಸಹ ಬಿಜೆಪಿ ಕಂಗನಾ ಪರ ನಿಂತಿರುವುದಕ್ಕೂ, ಕಂಗನಾ ಕಾಂಗ್ರೆಸ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಮಾತಾಡುತ್ತಿರುವುದಕ್ಕೂ ಸಂಬಂಧವಿಲ್ಲವೇ ಎಂಬ ಪ್ರಶ್ನೆ ಸಹ ಜೋರಾಗಿ ಕೇಳಿಬಂದಿದೆ.

ಇನ್ನು ಡ್ರಗ್ಸ್ ವಿಚಾರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಹೆಚ್ಚಾಗಿ ನಟಿಯರನ್ನೇ ಬಂಧಿಸಲಾಗುತ್ತಿದೆ. ಏಕೆ ನಟರು ಯಾರೂ ಡ್ರಗ್ಸ್ ತೆಗೆದುಕೊಳ್ಳುವುದಿಲ್ಲವೇ? ಈ ಬಗ್ಗೆ ಕಂಗನಾ ಏಕೆ ದನಿಯೆತ್ತುತ್ತಿಲ್ಲ ಎಂದರೆ ಅದಕ್ಕೆ ಅವರು ಯಾವ ಉತ್ತರ ಕೊಡುತ್ತಾರೆ?

ಪ್ರತಿ ವ್ಯಕ್ತಿಯ ಮೌನಕ್ಕೆ ಕಾಲವೇ ಉತ್ತರ ನೀಡುತ್ತದೆ ಎನ್ನುವುದಕ್ಕೆ ಸೋನಿಯಾ ಗಾಂಧಿ ನಿದರ್ಶನ. ತಮ್ಮ ಬಗ್ಗೆ ಬರುವ ಟೀಕೆಗಳಿಗೆ ಆಕೆ ಉತ್ತರಿಸಿದ್ದು ಕಡಿಮೆಯೇ. ಬೇರೆಯವರ ಪೊಳ್ಳು ಮಾತುಗಳಿಗೆ, ವಿವಾದಗಳಿಗೆ ಪ್ರಾಮುಖ್ಯತೆ ನೀಡದೇ ತಮ್ಮ ಕೆಲಸದ ಕಡೆಯಷ್ಟೇ ಗಮನ ಕೊಡುತ್ತಾ ಸಾಗಿದ್ದಾರೆ.


ಇದನ್ನೂ ಓದಿ; ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...