ಕಲಬುರ್ಗಿಯ ಕುರಿ ಸಾಗಾಣಿಕ ಕೇಂದ್ರದಲ್ಲಿ ರಹಸ್ಯವಾಗಿ ಬಚ್ಚಿಟ್ಟಿದ್ದ 13.50 ಕ್ವಿಂಟಲ್ 300 ಗ್ರಾಂ ಗಾಂಜಾವನ್ನು ಬೆಂಗಳೂರು ಪೊಲೀಸರು ನಿನ್ನೆ ಪತ್ತೆಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ನಿನ್ನೆ ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ನಾಲ್ಕು ಜನರನ್ನು ಬಂಧಿಸಿದ್ದು, ಬಂಧಿತರನ್ನು ಗಾಯತ್ರಿನಗರದ ಜ್ಞಾನಶೇಖರ್ (37), ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಿದ್ದುನಾಥ್ ಲಾವಟೆ (22), ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಾಥ್ (39) ಹಾಗೂ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಂದ್ರಕಾಂತ್ (34) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200 ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ. ’ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ’ ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ” ಎಂದು ಹೇಳಿದೆ.
ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ @BJP4Karnataka ಕಾರ್ಯಕರ್ತ.
ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ
"ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ"
ಎಂಬ ಗಾದೆ ಮಾತಿನಂತೆ
ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ. pic.twitter.com/GQFNmxEPxU— Karnataka Congress (@INCKarnataka) September 11, 2020
ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ
ಇಷ್ಟೇ ಅಲ್ಲದೆ ಕಾಂಗ್ರೆಸ್ ಶಾಸಕ ಪ್ರಯಾಂಕ್ ಖರ್ಗೆ ಟ್ವಿಟ್ಟರ್ನಲ್ಲಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಲೂಟ್ ಅಸ್ ಪಾರ್ಟಿ ಬಿಜೆಪಿ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೇಸ್ ಸಾಮೀಲಾಗಿದೆ ಎಂದು ಮಾತನಾಡುತ್ತಿದೆ. ಇದು ಯಾರು ಎಂದು ಊಹಿಸಿ? ಖಂಡಿಯವಾಗಿಯು ಇದರಲ್ಲಿ ನಾನು ಯಾವುದೇ ಕಾಂಗ್ರೆಸಿನ ಚಿನ್ಹೆಯನ್ನು ಕಾಣುತ್ತಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.
. #LootUsParty @BJP4Karnataka has been talking about Congress involvement in #DrugMafia. @BJP4Karnataka Guess who is this? Definitely I don’t see the @INCKarnataka symbol anyplace.
Hint: instrumental in hoarding 1,200 kg of ganja in Kalaburagi. pic.twitter.com/Ocl8Tdg0hx
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 11, 2020
ನೀವೇ ಅಧಿಕಾರದಲ್ಲಿದ್ದು, ಎಲ್ಲಾ ಸಂಪನ್ಮೂಲಗಳು ನಿಮ್ಮ ಬಳಿ ಇದೆ, ಅದನ್ನು ಬಳಸಿ ಕಲಬುರ್ಗಿಯಲ್ಲಿ ಎಷ್ಟು ಜೂಜು ಅಡ್ಡೆಗಳು ಇವೆ ಎಂಬುವುದನ್ನು ದಯವಿಟ್ಟು ಕಂಡುಹಿಡಿಯಿರಿ. ಮನರಂಜನಾ ಕ್ಲಬ್ಗಳನ್ನು ನಡೆಸಲು ಯಾರು ಅನುಮತಿ ನೀಡುತ್ತಿದ್ದಾರೆ? ಈ ಪೆಡ್ಲರ್ಗಳು ಯಾರ ರಾಜಕೀಯ ರಕ್ಷಣೆಯಡಿಯಲ್ಲಿ ಬೆಳೆಯುತ್ತಿದ್ದಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
. @BJP4Karnataka , you are in power & have all the resources at your disposal, please find out how many gambling dens have cropped up in Kalaburagi. Who is giving permission to run recreational clubs? Under whose political protection are these peddlers growing?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 11, 2020
ಕಾಂಗ್ರೆಸ್ ಇಂದು ಬಿಡುಗಡೆ ಮಾಡಲಾಗಿರುವ ಪೋಟೋದಲ್ಲಿ ಇರುವ ವ್ಯಕ್ತಿಯನ್ನು ಮಾಧ್ಯಮಗಳು ಚಂದ್ರಕಾಂತ್ ಎಂದು ಹೇಳಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ


