Homeಕರ್ನಾಟಕ13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

- Advertisement -
- Advertisement -

ಕಲಬುರ್ಗಿಯ ಕುರಿ ಸಾಗಾಣಿಕ ಕೇಂದ್ರದಲ್ಲಿ ರಹಸ್ಯವಾಗಿ ಬಚ್ಚಿಟ್ಟಿದ್ದ 13.50 ಕ್ವಿಂಟಲ್ 300 ಗ್ರಾಂ ಗಾಂಜಾವನ್ನು ಬೆಂಗಳೂರು ಪೊಲೀಸರು ನಿನ್ನೆ ಪತ್ತೆಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ನಿನ್ನೆ ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ನಾಲ್ಕು ಜನರನ್ನು ಬಂಧಿಸಿದ್ದು, ಬಂಧಿತರನ್ನು ಗಾಯತ್ರಿನಗರದ ಜ್ಞಾನಶೇಖರ್ (37), ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಿದ್ದುನಾಥ್ ಲಾವಟೆ (22), ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಾಥ್ (39) ಹಾಗೂ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಂದ್ರಕಾಂತ್ (34) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್‌, “ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200 ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ. ’ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ’ ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಇಷ್ಟೇ ಅಲ್ಲದೆ ಕಾಂಗ್ರೆಸ್‌ ಶಾಸಕ ಪ್ರಯಾಂಕ್ ಖರ್ಗೆ ಟ್ವಿಟ್ಟರ್‌ನಲ್ಲಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಲೂಟ್ ಅಸ್ ಪಾರ್ಟಿ ಬಿಜೆಪಿ ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೇಸ್‌ ಸಾಮೀಲಾಗಿದೆ ಎಂದು ಮಾತನಾಡುತ್ತಿದೆ. ಇದು ಯಾರು ಎಂದು ಊಹಿಸಿ? ಖಂಡಿಯವಾಗಿಯು ಇದರಲ್ಲಿ ನಾನು ಯಾವುದೇ ಕಾಂಗ್ರೆಸಿನ ಚಿನ್ಹೆಯನ್ನು ಕಾಣುತ್ತಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.

ನೀವೇ ಅಧಿಕಾರದಲ್ಲಿದ್ದು, ಎಲ್ಲಾ ಸಂಪನ್ಮೂಲಗಳು ನಿಮ್ಮ ಬಳಿ ಇದೆ, ಅದನ್ನು ಬಳಸಿ ಕಲಬುರ್ಗಿಯಲ್ಲಿ ಎಷ್ಟು ಜೂಜು ಅಡ್ಡೆಗಳು ಇವೆ ಎಂಬುವುದನ್ನು ದಯವಿಟ್ಟು ಕಂಡುಹಿಡಿಯಿರಿ. ಮನರಂಜನಾ ಕ್ಲಬ್‌ಗಳನ್ನು ನಡೆಸಲು ಯಾರು ಅನುಮತಿ ನೀಡುತ್ತಿದ್ದಾರೆ? ಈ ಪೆಡ್ಲರ್‌ಗಳು ಯಾರ ರಾಜಕೀಯ ರಕ್ಷಣೆಯಡಿಯಲ್ಲಿ ಬೆಳೆಯುತ್ತಿದ್ದಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಇಂದು ಬಿಡುಗಡೆ ಮಾಡಲಾಗಿರುವ ಪೋಟೋದಲ್ಲಿ ಇರುವ ವ್ಯಕ್ತಿಯನ್ನು ಮಾಧ್ಯಮಗಳು ಚಂದ್ರಕಾಂತ್‌ ಎಂದು ಹೇಳಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.


ಇದನ್ನೂ ಓದಿ: ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...