Homeಕರ್ನಾಟಕ13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

- Advertisement -
- Advertisement -

ಕಲಬುರ್ಗಿಯ ಕುರಿ ಸಾಗಾಣಿಕ ಕೇಂದ್ರದಲ್ಲಿ ರಹಸ್ಯವಾಗಿ ಬಚ್ಚಿಟ್ಟಿದ್ದ 13.50 ಕ್ವಿಂಟಲ್ 300 ಗ್ರಾಂ ಗಾಂಜಾವನ್ನು ಬೆಂಗಳೂರು ಪೊಲೀಸರು ನಿನ್ನೆ ಪತ್ತೆಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ನಿನ್ನೆ ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ನಾಲ್ಕು ಜನರನ್ನು ಬಂಧಿಸಿದ್ದು, ಬಂಧಿತರನ್ನು ಗಾಯತ್ರಿನಗರದ ಜ್ಞಾನಶೇಖರ್ (37), ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಿದ್ದುನಾಥ್ ಲಾವಟೆ (22), ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಾಥ್ (39) ಹಾಗೂ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಂದ್ರಕಾಂತ್ (34) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್‌, “ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200 ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ. ’ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ’ ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಇಷ್ಟೇ ಅಲ್ಲದೆ ಕಾಂಗ್ರೆಸ್‌ ಶಾಸಕ ಪ್ರಯಾಂಕ್ ಖರ್ಗೆ ಟ್ವಿಟ್ಟರ್‌ನಲ್ಲಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಲೂಟ್ ಅಸ್ ಪಾರ್ಟಿ ಬಿಜೆಪಿ ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೇಸ್‌ ಸಾಮೀಲಾಗಿದೆ ಎಂದು ಮಾತನಾಡುತ್ತಿದೆ. ಇದು ಯಾರು ಎಂದು ಊಹಿಸಿ? ಖಂಡಿಯವಾಗಿಯು ಇದರಲ್ಲಿ ನಾನು ಯಾವುದೇ ಕಾಂಗ್ರೆಸಿನ ಚಿನ್ಹೆಯನ್ನು ಕಾಣುತ್ತಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.

ನೀವೇ ಅಧಿಕಾರದಲ್ಲಿದ್ದು, ಎಲ್ಲಾ ಸಂಪನ್ಮೂಲಗಳು ನಿಮ್ಮ ಬಳಿ ಇದೆ, ಅದನ್ನು ಬಳಸಿ ಕಲಬುರ್ಗಿಯಲ್ಲಿ ಎಷ್ಟು ಜೂಜು ಅಡ್ಡೆಗಳು ಇವೆ ಎಂಬುವುದನ್ನು ದಯವಿಟ್ಟು ಕಂಡುಹಿಡಿಯಿರಿ. ಮನರಂಜನಾ ಕ್ಲಬ್‌ಗಳನ್ನು ನಡೆಸಲು ಯಾರು ಅನುಮತಿ ನೀಡುತ್ತಿದ್ದಾರೆ? ಈ ಪೆಡ್ಲರ್‌ಗಳು ಯಾರ ರಾಜಕೀಯ ರಕ್ಷಣೆಯಡಿಯಲ್ಲಿ ಬೆಳೆಯುತ್ತಿದ್ದಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಇಂದು ಬಿಡುಗಡೆ ಮಾಡಲಾಗಿರುವ ಪೋಟೋದಲ್ಲಿ ಇರುವ ವ್ಯಕ್ತಿಯನ್ನು ಮಾಧ್ಯಮಗಳು ಚಂದ್ರಕಾಂತ್‌ ಎಂದು ಹೇಳಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.


ಇದನ್ನೂ ಓದಿ: ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...