Homeಮುಖಪುಟಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

2016 ರಲ್ಲಿ ಪಿಣರಾಯಿ ಸರ್ಕಾರ ಅಧಿಕಾರಕ್ಕೆ ಬಂದಾಗ, ಅವರು ಮೊದಲ ಹಂತದಲ್ಲಿ 1,000 ಸರ್ಕಾರಿ ಶಾಲೆಗಳನ್ನು ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ನವೀಕರಿಸುವುದು ಸೇರಿದಂತೆ ಸಮಗ್ರ ಶೈಕ್ಷಣಿಕ ಸುಧಾರಣೆಗಳನ್ನು ಪ್ರಸ್ತಾಪಿಸಿದ್ದರು.

- Advertisement -
- Advertisement -

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವ ದೃಷ್ಟಿಯಿಂದ ಸ್ಥಾಪಿಸಲಾದ ಕೇರಳದ 34 ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದ್ದಾರೆ. ಕೇರಳದಲ್ಲಿ ಸಾಮಾನ್ಯ ಶಿಕ್ಷಣ ಸೌಲಭ್ಯಗಳನ್ನು ಪುನರುಜ್ಜೀವನಗೊಳಿಸುವ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಸರ್ಕಾರದ ಪ್ರಯತ್ನಗಳ ಭಾಗವಾಗಿ ಈ ಶಾಲೆಗಳು ಆರಂಭವಾಗಿವೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಪುನರ್ಯೌವನಗೊಳಿಸುವ ಮಿಷನ್ ಅಡಿಯಲ್ಲಿ ಕೇರಳ ಮೂಲಸೌಕರ್ಯ ಮತ್ತು ಶಿಕ್ಷಣಕ್ಕಾಗಿ ತಂತ್ರಜ್ಞಾನ (ಕೈಟ್) ಜಾರಿಗೆ ತಂದಿರುವ ‘ಸೆಂಟರ್ ಆಫ್ ಎಕ್ಸಲೆನ್ಸ್’ ಯೋಜನೆಯ ಭಾಗವಾಗಿ ಈ ಶಾಲೆಗಳನ್ನು ನಿರ್ಮಿಸಲಾಗಿದೆ. ಸರ್ಕಾರದ 100 ದಿನಗಳ ಕ್ರಿಯಾ ಯೋಜನೆಯಡಿ ಶಾಲೆಗಳನ್ನು ಸ್ಥಾಪಿಸಲಾಗಿದೆ.

ಆಗಸ್ಟ್ 30 ರಂದು ಸಿಎಂ ವಿಜಯನ್ ರಾಜ್ಯ ಸರ್ಕಾರದ “100 ದಿನಗಳ 100 ಯೋಜನೆಗಳು” ಯೋಜನೆಯನ್ನು ಘೋಷಿಸಿದ್ದರು. ಯೋಜನೆಯನ್ನು ಪ್ರಕಟಿಸುವಾಗ, 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 35 ಶಾಲಾ ಕಟ್ಟಡಗಳು ಮತ್ತು 3 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 14 ಶಾಲಾ ಕಟ್ಟಡಗಳನ್ನು ಮುಂದಿನ 100 ದಿನಗಳಲ್ಲಿ ಉದ್ಘಾಟಿಸಲಾಗುವುದು ಎಂದು ಹೇಳಿದರು. ಇತರ ಶಾಲಾ ಕಟ್ಟಡಗಳ ನಿರ್ಮಾಣ ಪೂರ್ಣಗೊಳ್ಳಲಿದ್ದು, ನಂತರ 250 ಹೊಸ ಶಾಲಾ ಕಟ್ಟಡಗಳ ನಿರ್ಮಾಣವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಹೊಸದಾಗಿ ಉದ್ಘಾಟನೆಗೊಂಡ ಶಾಲೆಗಳಲ್ಲಿ ಕೋಹಿಕೋಡ್‌ನಲ್ಲಿ 8, ಕಣ್ಣೂರು-5, ಮತ್ತು ತಿರುವನಂತಪುರಂ, ಕೊಲ್ಲಂ ಮತ್ತು ಎರ್ನಾಕುಲಂನಲ್ಲಿ ತಲಾ 4 ಶಾಲೆಗಳಿವೆ. ಕೊಟ್ಟಾಯಂನಲ್ಲಿ 3 ಮತ್ತು ಮಲಪ್ಪುರಂ ಮತ್ತು ಇಡುಕಿಯಲ್ಲಿ ತಲಾ 2, ಆಲಪ್ಪುಳ ಮತ್ತು ತ್ರಿಶೂರ್‌ನಲ್ಲಿ ಒಂದು ಶಾಲೆಗಳನ್ನು ಉದ್ಘಾಟಿಸಲಾಗಿದೆ. ಹೊಸ ಕಟ್ಟಡಗಳಲ್ಲಿ ಹೈಟೆಕ್ ತರಗತಿ ಕೊಠಡಿಗಳು, ಕಿಚನ್ ಬ್ಲಾಕ್‌ಗಳು, ಡೈನಿಂಗ್ ಏರಿಯಾ, ಟಾಯ್ಲೆಟ್ ಬ್ಲಾಕ್‌ಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು ಸೇರಿವೆ.

ಶಾಲಾ ಯೋಜನೆಗಳಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರವಾಗುತ್ತಿದೆ ಎಂದು ಮುಖ್ಯಮಂತ್ರಿ ಗಮನಸೆಳೆದರು. “ಎಲ್ಲ ಶಾಲೆಗಳನ್ನು ಉತ್ತರ ಕೇರಳ ಅಥವಾ ಮಲಬಾರ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ ಎಂಬುದು ನಕಲಿ ಸುದ್ದಿ. ಆದರೆ ಇದು ನಿಜವಲ್ಲ. ಬಲರಾಮಪುರಂನಿಂದ ಚೆಲಕ್ಕರವರೆಗೆ ನಾವು 19 ಶಾಲೆಗಳನ್ನು ನಿರ್ಮಿಸಿದ್ದೇವೆ ”ಎಂದು ಅವರು ಹೇಳಿದರು.

ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಕೇರಳ ಸರ್ಕಾರ 3,129 ಕೋಟಿ ರೂ. ವ್ಯಯಿಸಿದೆ. ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ 250 ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲು ರಾಜ್ಯ ಯೋಜಿಸಿದೆ. ಅಸ್ತಿತ್ವದಲ್ಲಿರುವ 350 ಕ್ಕೂ ಹೆಚ್ಚು ಶಾಲೆಗಳಲ್ಲಿ, ಮೂಲಭೂತ ಸೇವೆಗಳನ್ನು ಲಭ್ಯಗೊಳಿಸಲಾಗುತ್ತಿದೆ. ಈ ಯೋಜನೆಗಳಿಗೆ ಸರ್ಕಾರ ಕೆಐಐಎಫ್‌ಬಿ ಮೂಲಕ ಹಣವನ್ನು ಖರ್ಚು ಮಾಡುತ್ತಿದೆ.

ಇದನ್ನೂ ಓದಿ: ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

‘ಪೊಥುವಿದ್ಯಾಭ್ಯಾಸಸಂಸ್ಕರಣ ಯಜ್ಞಂ’ (ಸಾರ್ವಜನಿಕ ಶಿಕ್ಷಣವನ್ನು ರಕ್ಷಿಸುವ ಮಿಷನ್) ಅಡಿಯಲ್ಲಿ ಸರ್ಕಾರದ ಯೋಜನೆಗಳು ರಾಜ್ಯದ ಸಾರ್ವಜನಿಕ ಶಿಕ್ಷಣವನ್ನು ವಿಶ್ವದಾದ್ಯಂತ ಸಹ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಲು ಸಜ್ಜುಗೊಳಿಸುವ ಕೌಶಲ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುವ ಉದ್ದೇಶವನ್ನು ಹೊಂದಿವೆ.

ಕೇರಳದ ಭವಿಷ್ಯದ ಹೂಡಿಕೆಯಾದ ಈ ಮಿಷನ್ ಸರ್ಕಾರಿ ಮತ್ತು ರಾಜ್ಯ-ಅನುದಾನಿತ ಶಾಲೆಗಳ ಮೇಲೆ ಕಳೆದುಹೋದ ಸಾರ್ವಜನಿಕ ನಂಬಿಕೆಯನ್ನು ಮರಳಿ ಪಡೆಯುವುದರ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ರಾಜ್ಯದ ಇಡೀ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಉಚಿತವಾಗಿ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.

2016 ರಲ್ಲಿ ಪಿಣರಾಯಿ ಸರ್ಕಾರ ಅಧಿಕಾರಕ್ಕೆ ಬಂದಾಗ, ಅವರು ಮೊದಲ ಹಂತದಲ್ಲಿ 1,000 ಸರ್ಕಾರಿ ಶಾಲೆಗಳನ್ನು ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ನವೀಕರಿಸುವುದು ಸೇರಿದಂತೆ ಸಮಗ್ರ ಶೈಕ್ಷಣಿಕ ಸುಧಾರಣೆಗಳನ್ನು ಪ್ರಸ್ತಾಪಿಸಿದ್ದರು.

ರಾಜ್ಯದಲ್ಲಿ ಸುಮಾರು 13,000 ಸರ್ಕಾರಿ ಮತ್ತು ರಾಜ್ಯ ಅನುದಾನಿತ ಶಾಲೆಗಳಿವೆ. ಮಿಷನ್ ಮೂಲಕ, 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಪ್ರತಿ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಅಭಿವೃದ್ಧಿಗೆ 3 ಕೋಟಿ ರೂ. ರಾಜ್ಯ-ಅನುದಾನಿತ ಶಾಲೆಗಳಿಗೆ ಇದಕ್ಕಾಗಿ 1 ಕೋಟಿ ರೂ.ಗಳವರೆಗೆ ಸರ್ಕಾರದ ಬೆಂಬಲ ದೊರೆಯುತ್ತದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರವಾಸೋದ್ಯಮಕ್ಕೆ ಚಾಲನೆ: ಅಕ್ಟೋಬರ್‌ನಿಂದ ಕೈಬೀಸಿ ಕರೆಯಲಿದೆ ಕೇರಳ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...