Homeಕರ್ನಾಟಕಬಿಬಿಎಂಪಿ ಚುನಾವಣೆ ವಿಳಂಬ: ಅಧಿಕಾರಿಗಳದ್ದೇ ಆಡಳಿತ!

ಬಿಬಿಎಂಪಿ ಚುನಾವಣೆ ವಿಳಂಬ: ಅಧಿಕಾರಿಗಳದ್ದೇ ಆಡಳಿತ!

ಸರ್ಕಾರ ಸಾಂವಿಧಾನಿಕ ಪ್ರಕ್ರಿಯೆಯನ್ನು ಮಟ್ಟಹಾಕಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ದೂರಿವೆ.

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೌನ್ಸಿಲ್ ಅವಧಿ ಸೆ.10ಕ್ಕೆ ಕೊನೆಗೊಂಡಿದೆ. ನಿನ್ನೆಯಿಂದ ಅಧಿಕಾರಿಗಳ ಆಡಳಿತ ನಡೆಯುತ್ತಿದೆ. ಮುಂದಿನ ಅವಧಿಗೆ ಚುನಾವಣೆ ವಿಳಂಬವಾಗುವುದರ ಬಗ್ಗೆ ರಾಜಕೀಯ ಪಕ್ಷಗಳು ಭಿನ್ನಾಭಿಪ್ರಾಯದಲ್ಲಿವೆ.

ಇಷ್ಟೋತ್ತಿಗೆ ಬೆಂಗಳೂರು ರಾಜಕೀಯ ಚುನಾವಣ ಪ್ರಚಾರಗಳಿಗೆ ಸಾಕ್ಷಿಯಾಗುತ್ತಿತ್ತು. ಆದರೆ ನಗರದಲ್ಲಿ ಹೆಚ್ಚುತ್ತಿರುವ COVID-19 ಪ್ರಕರಣಗಳು, ಮತದಾನವು ಕನಿಷ್ಠ ನಾಲ್ಕುರಿಂದ ಆರು ತಿಂಗಳು ವಿಳಂಬವಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಇದನ್ನೂ ಓದಿ: ಅತ್ಯಾಧುನಿಕ ಸರ್ಕಾರಿ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಸರ್ಕಾರ ಈಗಾಗಲೇ ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ, ಈ ವಿಷಯದಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದ ಕಾರಣ ಸ್ಥಗಿತ ಮುಂದುವರೆದಿದೆ.

ಬಿಬಿಎಂಪಿ ಕೌನ್ಸಿಲ್ ಮತ್ತೆ ಚುನಾವಣೆಗಳನ್ನು ನಡೆಸುವವರೆಗೆ ಮೇಯರ್ ಅವಧಿಯನ್ನು ವಿಸ್ತರಿಸಬೇಕೆಂದು ಒತ್ತಾಯಿಸಿತು. ಅದು ಎಲ್ಲಾ 198 ಕಾರ್ಪೊರೇಟರ್‌ಗಳಿಗೆ ಅವಧಿಯ ವಿಸ್ತರಣೆಯನ್ನು ನೀಡುತ್ತದೆ. ಆದರೆ ಸರ್ಕಾರ ಈ ಪ್ರಸ್ತಾಪವನ್ನು ಇನ್ನೂ ಒಪ್ಪಿಕೊಂಡಿಲ್ಲ. ಈ ವರ್ಷ ಚುನಾವಣೆ ನಡೆಸುವುದಿಲ್ಲ ಅಥವಾ ಯಾವಾಗ ಚುನಾವಣೆಗೆ ಸಿದ್ಧವಾಗಲಿದೆ ಎಂದು ರಾಜ್ಯ ಸರ್ಕಾರ ಬಹಿರಂಗವಾಗಿ ಹೇಳಿಲ್ಲ.

ಚುನಾವಣೆ ವಿಳಂಬದ ಬಗ್ಗೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕಾರ್ಪೋರೇಟರ್‌ಗಳು ಕೋಪಗೊಂಡಿದ್ದು, ಸರ್ಕಾರ ಸಾಂವಿಧಾನಿಕ ಪ್ರಕ್ರಿಯೆಯನ್ನು ಮಟ್ಟಹಾಕಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರದ ಸೇವೆಗಳು ನಮ್ಮ ಭಾಷೆಯಲ್ಲಿಯೇ ಇರಲಿ: #ServeInMyLanguage ಟ್ವಿಟ್ಟರ್‌ ಟ್ರೆಂಡ್‌‌

“ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 224 ಕ್ಕೆ ಹೆಚ್ಚಿಸಬೇಕಿದೆ ಹಾಗಾಗಿ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಸರ್ಕಾರ ನೀಡುತ್ತಿದೆ. ಆದರೆ ವಿಳಂಬಕ್ಕೆ ಇದು ಮಾನ್ಯಮಾಡುವ ಕಾರಣವಲ್ಲ ”ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್. ಉಗ್ರಪ್ಪ ಹೇಳಿದರು.

ಚುನಾವಣೆಗಳು ಅತಿಯಾಗಿ ವಿಳಂಬವಾದರೆ ನ್ಯಾಯಾಲಯಕ್ಕೆ ಈ ವಿಷಯ ತಲುಪಬೇಕೆಂದು ರಾಜಕೀಯ ಮುಖಂಡರು ನಿರೀಕ್ಷಿಸಿದ್ದಾರೆ. 2010 ಮತ್ತು 2015 ಎರಡರಲ್ಲೂ ನ್ಯಾಯಾಲಯವು ಮಧ್ಯಪ್ರವೇಶಿಸಿ ರಾಜ್ಯವನ್ನು ಚುನಾವಣೆ ನಡೆಸಲು ಆದೇಶಿಸಿತು.

ಸದ್ಯ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಹಿರಿಯ ಐಎಎಸ್‌ ಅಧಿಕಾರಿ ಗೌರವ್‌ ಗುಪ್ತ ಅವರು ಮೇಯರ್‌, ಉಪಮೇಯರ್‌ ಹಾಗೂ ಸ್ಥಾಯಿಸಮಿತಿಗಳ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳು, ಮಳೆ ಆರ್ಭಟ, ಸಂಪನ್ಮೂಲ ಕೊರತೆ, ಪ್ರಗತಿ ಕಾಣದ ಕಾಮಗಾರಿಗಳು, ಕಸ ವಿಲೇವಾರಿ ಸಮಸ್ಯೆ, ಹೆಚ್ಚುತ್ತಿರುವ ಭ್ರಷ್ಟಾಚಾರ… ಹೀಗೆ ಹತ್ತು ಹಲವು ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿ ರಾಜಧಾನಿಯ ನಿವಾಸಿಗಳ ಮನಗೆಲ್ಲುವ ಸವಾಲು ಅಧಿಕಾರಿಗಳ ಮೇಲಿದೆ.


ಇದನ್ನೂ ಓದಿ: ಪ್ರವಾಸೋದ್ಯಮಕ್ಕೆ ಚಾಲನೆ: ಅಕ್ಟೋಬರ್‌ನಿಂದ ಕೈಬೀಸಿ ಕರೆಯಲಿದೆ ಕೇರಳ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...