Homeಮುಖಪುಟಉದ್ಧವ್ ಠಾಕ್ರೆ ಕಾರ್ಟೂನ್ ಫಾರ್ವಡ್ ಮಾಡಿದ ನಿವೃತ್ತ ನೌಕಾದಳ ಅಧಿಕಾರಿ ಮೇಲೆ ಹಲ್ಲೆ: 6 ಜನರ...

ಉದ್ಧವ್ ಠಾಕ್ರೆ ಕಾರ್ಟೂನ್ ಫಾರ್ವಡ್ ಮಾಡಿದ ನಿವೃತ್ತ ನೌಕಾದಳ ಅಧಿಕಾರಿ ಮೇಲೆ ಹಲ್ಲೆ: 6 ಜನರ ಬಂಧನ

ಹಲ್ಲೆಗೊಳಗಾದ ಮದನ್ ಶರ್ಮಾರವರು ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ಶಿವಸೇನೆಯ ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಸೇರಿದಂತೆ ಇತರ ಆರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕುರಿತ ಅವಹೇಳನಕಾರಿ ಕಾರ್ಟೂನ್ ಫಾರ್ವಡ್ ಮಾಡಿದ್ದಾರೆಂದು ಆರೋಪಿಸಿ ಮುಂಬೈನ ಕಂಡಿವಲಿ ನಿವಾಸಿಯಾದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮಾ(65) ಎಂಬುವವರ ಮೇಲೆ ಶಿವಸೇನೆ ಕಾರ್ಯಕರ್ತರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಈ ಕುರಿತು ಮದನ್ ಶರ್ಮಾರವರು ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ಶಿವಸೇನೆಯ ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಸೇರಿದಂತೆ ಇತರ ಆರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಹಲ್ಲೆ ನಡೆಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 65 ವರ್ಷದ ಹಿರಿಯರ ಮೇಲಿನ ಹಲ್ಲೆಯನ್ನು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಚಿತ್ರನಟಿ ಸ್ವರ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ.

ಘಟನೆಯ ವಿವರ:

ಮುಂಬೈನ ಕಂಡಿವಲಿ ನಿವಾಸಿಯಾದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮಾ(65) ತಮಗೆ ವಾಟ್ಸಾಪ್ ನಲ್ಲಿ ಬಂದಿದ್ದ (NCP ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಕಾಲಿಗೆ ಬೀಳುತ್ತಿರುವ) ಚಿತ್ರವೊಂದನ್ನು ತಾವು ವಾಸಿಸುತ್ತಿರುವ ಹೌಸಿಂಗ್ ಸೊಸೈಟಿ ವಾಟ್ಸಾಪಿಗೆ ಫಾರ್ವಡ್ ಮಾಡಿದ್ದರು. ಅದು ಶಿವ ಸೇನಾ ಕಾರ್ಯಕರ್ತರ ಗಮನಕ್ಕೆ ಬಂದಿದ್ದು, ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಮದನ್ ಶರ್ಮಾರವರಿಗೆ ಫೋನ್ ಮಾಡಿ ತಮ್ಮ ಹೆಸರು ಮತ್ತು ವಿಳಾಸ ಕೇಳಿದ್ದಾರೆ. ನಂತರ ಅವರ ನಿವಾಸದ ಎದುರು ಬಂದು ಸ್ವಲ್ಪ ಮಾತನಾಡುವುದಿದೆ, ಹೊರಗೆ ಬನ್ನಿ ಎಂದು ಮದನ್ ಶರ್ಮಾರನ್ನು ಕರೆಸಿಕೊಂಡು ಹಲ್ಲೆ ನಡೆಸಲಾಗಿದೆ. ಹಲ್ಲೆಯಲ್ಲಿ ಶರ್ಮಾರವರ ಎರಡೂ ಕಣ್ಣುಗಳಿಗೆ ಹಾನಿಯಾಗಿದೆ.

ವೈರಲ್ ಆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಪಾರ್ಟ್ ಮೆಂಟ್ ಗೇಟಿನಿಂದ ಒಳಕ್ಕೆ ಮದನ್ ಶರ್ಮಾ ಓಡಿ ಬರುತ್ತಾರೆ. ಹಿಂದಿನಿಂದ 8-10 ಜನ ನುಗ್ಗಿಬಂದು ಅವರನ್ನು ಹಿಡಿದು ಥಳಿಸುವ ಮತ್ತು ಹೊರಕ್ಕೆ ಎಳೆದೊಯ್ಯುವುದನ್ನು ನೋಡಬಹುದಾಗಿದೆ.

ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮದನ್ ಶರ್ಮಾ “ಅದನ್ನು ಏಕೆ ಷೇರ್ ಮಾಡಿದೆ ಎಂದು ಕೇಳಿದರು. ನಾನು ನನಗೆ ಬಂದಿದ್ದ ಕಾರ್ಟೂನ್ ಒಂದನ್ನು ವಾಟ್ಸಾಪ್ ನಲ್ಲಿ ಷೇರ್ ಮಾಡಿದೆ ಅಷ್ಟೆ ಎಂದೆ. ಆದರೂ ನನ್ನ ಮಾತನ್ನು ಕೇಳದೆ ಕ್ರೂರವಾಗಿ ಥಳಿಸಿದರು. ಸ್ವಲ್ಪ ಸಮಯದ ನಂತರ ತಪ್ಪಿಸಿಕೊಂಡು ಮನೆಗೆ ಬಂದೆ” ಎಂದಿದ್ದಾರೆ.

ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ಮೇಲೆ ಉದ್ಧವ್ ಠಾಕ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಿಎಂ ಉದ್ಧವ್ ಠಾಕ್ರೆಯವರ ಬಗೆಗಿನ ಜೋಕ್ ಫಾರ್ವಡ್ ಮಾಡಿದ್ದಕ್ಕೆ 65 ವರ್ಷದ ಹಿರಿಯರ ಮೇಲಿನ ಶಿವಸೈನಿಕರ ಹಲ್ಲೆ ಖಂಡನೀಯ. ನಾಗರೀಕ ಸಮಾಜದಲ್ಲಿ ಇಂತಹ ಹಿಂಸೆಗೆ ಅವಕಾಶವಿಲ್ಲವೆಂದು ನಟಿ ಸ್ವರ ಭಾಸ್ಕರ್ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...