Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...