Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...