Homeಮುಖಪುಟರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರು ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.

- Advertisement -
- Advertisement -

ಸೋಮವಾರದಿಂದ ಆರಂಭವಾಗಲಿರುವ ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲು ಸಿದ್ಧವಾಗಿರುವ 3 ಸುಗ್ರಿವಾಜ್ಞೆಗಳ ವಿರುದ್ಧ ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ತಿರುಗಿಬಿದ್ದಿದ್ದಾರೆ. ಅಧಿವೇಶನಕ್ಕೂ ಮುನ್ನವೇ ಕೊರೊನಾ ಸಾಂಕ್ರಾಮಿಕದ ನಡುವೆಯೂ ಭಾರೀ ಪ್ರತಿಭಟನೆ ನಡೆಸಿ ತಮ್ಮ ವಿರೋಧ ದಾಖಲಿಸಿದ್ದಾರೆ.

ಅವಶ್ಯಕ ಸಾಮಾಗ್ರಿಗಳ (ತಿದ್ದುಪಡಿ) ಸುಗ್ರಿವಾಜ್ಞೆ, ರೈತರ (ಸಶಕ್ತಿಕರಣ ಹಾಗೂ ರಕ್ಷಣೆ) ಬೆಲೆ ಖಾತರಿ ಒಪ್ಪಂದ ಹಾಗೂ ಕೃಷಿ ಸೇವೆಗಳ ಸುಗ್ರಿವಾಜ್ಞೆ-2020, ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಗಳನ್ನು ಕೇಂದ್ರ ಸರ್ಕಾರ ಸಾಂಕ್ರಾಮಿಕ ಕಾಲದಲ್ಲಿ ಜಾರಿಗೊಳಿಸಿದೆ. ಅವುಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಪರಿಚಯಿಸಿ, ಅನುಮೋದಿಸಲು ಸಿದ್ದತೆ ನಡೆಸಿದೆ. ಆದರೆ ದೇಶಾದ್ಯಂತ ರೈತರು “ಈ ಸುಗ್ರಿವಾಜ್ಞೆಗಳು ಕೃಷಿಯನ್ನು ಕಾರ್ಪೋರೇಟ್ ಕೈಗೆ ಒಪ್ಪಿಸುವ ಹುನ್ನಾರವಾಗಿದ್ದು, ಒಂದು ವೇಳೆ ಅಂಗೀಕಾರಗೊಂಡಲ್ಲಿ ರೈತರು ತಮ್ಮ ಸ್ವಾಯುತ್ತತೆಯನ್ನು ಕಳೆದುಕೊಳ್ಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಹಾಗೂ ವಾಣಿಜ್ಯ (ಉತ್ತೇಜನ ಹಾಗೂ ಸೌಕರ್ಯ) ಸುಗ್ರಿವಾಜ್ಞೆಯು ರಾಜ್ಯಗಳ ಎಪಿಎಂಸಿ ಕಾಯ್ದೆಗಿಂತಲೂ ಮೇಲುಗೈ ಸಾಧಿಸುತ್ತದೆ. ಆಗ ಯಾವುದೇ ರಾಜ್ಯಗಳಲ್ಲಿ ಬೇಕಾದರೂ ಮುಕ್ತವಾಗಿ ಮಾರಬಹುದಾದ ವ್ಯವಸ್ಥೆಯಿಂದಾಗಿ ಸ್ಥಳೀಯ ಮತ್ತು ಸಣ್ಣ ಪುಟ್ಟ ರೈತರು ತೀವ್ರ ಸಂಕಷ್ಟಕ್ಕೊಳಗಾಗುತ್ತಾರೆ ಎಂಬುದು ರೈತರ ಆತಂಕವಾಗಿದೆ. ಇದು ಈಗಿನ ಮಂಡಿ ಮಾರುಕಟ್ಟೆ ವ್ಯವಸ್ತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ರೈತರೆಲ್ಲರೂ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಬೇಕಾದ ದುಸ್ಥಿತಿಗೆ ತಲುಪುತ್ತಾರೆ ಎಂಬುದು ರೈತರ ಚಿಂತೆಯಾಗಿದೆ.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!


ಆದರೆ ಕೇಂದ್ರ ಸರ್ಕಾರ ಇದು ರೈತರು ತಮ್ಮ ಬೆಳೆಗಳನ್ನು ಸ್ಪರ್ಧಾತ್ಮಕ ಬೆಲೆಗೆ ಮಾರುವ ಅವಕಾಶ ನೀಡುವುದರಿಂದ ಇದು ರೈತ ಪರ ಎಂದು ಘೋಷಿಸಿದೆ. ಉತ್ಪಾದನೆ, ಸಾಗಾಟ, ಶೇಖರಣೆ ಮತ್ತು ಮಾರುಕಟ್ಟೆ ಸೇರಿದಂತೆ ಎಲ್ಲಾ ವಿಚಾರಗಳಿಗೂ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಮೂಲಕ ಗುತ್ತಿಗೆ ಕೃಷಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಇದು ರೈತರಿಗೆ ವರವಾಗಿ ಪರಿಣಮಿಸಲಿದೆ ಎಂಬುದು ಕೇಂದ್ರದ ವಾದವಾಗಿದೆ.

ರೈತರು ಕೇಂದ್ರ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಕಿಡಿಕಾರಿದ್ದಾರೆ. ಗುರುವಾರದಿಂದ ಪ್ರತಿಭಟನೆ ಆರಂಭಿಸಿರುವ ಅವರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಅಂಗೀಕಾರವಾಗಬಾರದು ಎಂದು ಪಟ್ಟು ಹಿಡಿದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ರೈತರು ಹರಿಯಾಣದ ಕುರುಕ್ಷೇತ್ರದಲ್ಲಿ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿಯಾಣ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕಿದ್ದಾರೆ. ಹರಿಯಾಣದ ಬಿಜೆಪಿ ಮುಖ್ಯಸ್ಥ ಓಂ ಪ್ರಕಾಶ್ ಧನ್ಕಾರ್‌ರೊಂದಿಗೆ ಹಲವು ಸಂಸದರು ಪ್ರತಿಭಟನಾನಿರತ ರೈತರನ್ನು ಮಾತನಾಡಿಸಿ ಅವರ ಮನವೊಲಿಸುವ ವಿಫಲ ಯತ್ನ ನಡೆಸಿದ್ದಾರೆ.

ಈ ಕುರಿತು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಂದರ್ ಸಿಂಗ್ ಹೂಡಾ ಮಾತನಾಡಿ “ಇದು ರೈತರ ಹಿತಾಸಕ್ತಿಗಳಿಗೆ ವಿರುದ್ಧವಿರುವ ಸುಗ್ರಿವಾಜ್ಞೆಯಾಗಿದೆ. ಕೇಂದ್ರಕ್ಕೆ ನಿಜಕ್ಕೂ ರೈತರ ಬಗ್ಗೆ ಕಾಳಜಿಯಿದ್ದರೆ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಯಾವುದೇ ಉತ್ಪನ್ನಗಳನ್ನು ಕೊಳ್ಳುವಂತಿಲ್ಲ ಎಂಬ ಸುಗ್ರಿವಾಜ್ಞೆ ತರಲಿ” ಎಂದು ಆಗ್ರಹಿಸಿದ್ದಾರೆ.

ಈ ಮುಂಚೆಯೇ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಾಗ ರಾಜ್ಯದ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು ದೇಶಾದ್ಯಂತ ರೈತರು ಬೀದಿಗಳಿಯುವ ಸಾಧ್ಯತೆಯಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...