Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...