Homeಕರ್ನಾಟಕತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ.

- Advertisement -
- Advertisement -

ತುಮಕೂರು ಜಿ.ಪಂ ಅಧ್ಯಕ್ಷರ ಬದಲಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಧ್ಯಕ್ಷ ಸ್ಥಾನ ಬೇರೆಯವರಿಗೆ ಬಿಟ್ಟುಕೊಡಬೇಕು ಎಂಬ ಪಟ್ಟು ಆಡಳಿತ ಪಕ್ಷದ ಸದಸ್ಯರದ್ದು. ಇದಕ್ಕೆ ಪಕ್ಷಾತೀತವಾಗಿ ಎಲ್ಲರೂ ಸಹಿ ಮಾಡಿದ್ದಾರೆ. ಗೊಲ್ಲ ಸಮುದಾಯದ ಸದಸ್ಯರೊಬ್ಬರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಕೂಗು ಎದ್ದಿದೆ. ಈ ಬಗ್ಗೆ ಬಿಜೆಪಿಯ ಕೂಗು ಜೋರಾಗಿಯೇ ಇದೆ. ದಿಢೀರನೇ ಗೊಲ್ಲರ ಮೇಲೆ ಬಿಜೆಪಿಗೆ ಪ್ರೀತಿ ಹೆಚ್ಚಾಗಲು ಕಾರಣ ರಹಸ್ಯವಾಗಿ ಉಳಿದಿಲ್ಲ. ಶಿರಾ ಉಪಚುನಾವಣೆಯಲ್ಲಿ ಗೊಲ್ಲರ ಮತ ಸೆಳೆಯಲು ಈ ತಂತ್ರ ಹೆಣೆಯಲಾಗಿದೆ.

ಅಧ್ಯಕ್ಷರನ್ನು ಬದಲಿಸಬೇಕೆಂಬ ಅವಿಶ್ವಾಸ ಪತ್ರಕ್ಕೆ ಎಲ್ಲಾ ಪಕ್ಷದ ಸದಸ್ಯರು ಸಹಿ ಹಾಕಿರುವುದು ವಿಶೇಷ. ಎಲ್ಲರಿಗೂ ಗೊಲ್ಲ ಸಮುದಾಯದ ಮೇಲೆ ಅತೀವ ಪ್ರೀತಿ ಉಕ್ಕಿ ಹರಿಯತೊಡಗಿದೆ. ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತಗಳ ಪ್ರಮಾಣ ಹೆಚ್ಚಾಗಿದ್ದು, 46 ಸಾವಿರ ಮತಗಳ ಮೇಲೆ ಎಲ್ಲ ಪಕ್ಷಗಳ ಕಣ್ಣುಬಿದ್ದಿದೆ. ಹಾಗಾಗಿ ಜಿ.ಪಂ ಅಧ್ಯಕ್ಷರ ಬದಲಾವಣೆಯ ವಿಷಯ ಕಾವು ಪಡೆದುಕೊಂಡಿದೆ.

ಕಳೆದ ಎರಡು ಸಭೆಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಬೇಕೆಂದೇ ಹಾಜರಾಗಿಲ್ಲ. ಕೃತಕ ಕೋರಂ ಕೊರತೆ ಸೃಷ್ಟಿಸಿ, ಸಭೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಸದಸ್ಯರುಗಳು ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊರೊನಾದ ಕಾರಣ ನೀಡಿ ಮೌನವಾಗಿದ್ದ ಸದಸ್ಯರು, ಶಿರಾ ಶಾಸಕರ ನಿಧನದ ನಂತರ ಅಧ್ಯಕ್ಷರನ್ನು ಬದಲಾಯಿಸಿಯೇ ತೀರಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಇದು ನೈಜ ಪ್ರೀತಿಯಲ್ಲ. ತೋರಿಕೆಯ ಪ್ರೀತಿ. ಚುನಾವಣೆ ಮುಗಿಯುವರೆಗೂ ಇರುವ ಪ್ರೀತಿ. ಈ ನಾಟಕ ಯಾರಿಗೆ ತಾನೇ ಗೊತ್ತಿಲ್ಲ. ಚುನಾವಣೆ ಬಂದರೆ ಬಿಜೆಪಿಗೆ ಗೊಲ್ಲರ ಮೇಲೆ ಪ್ರೀತಿ ಉಕ್ಕುತ್ತದೆ ಎಂಬ ಚರ್ಚೆಗೆ ವೇದಿಕೆ ಒದಗಿಸಿಕೊಟ್ಟಿದೆ.

ತುಮಕೂರು ಜಿ.ಪಂನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರ ಹಿಡಿದಿವೆ. ಮೈತ್ರಿ ಧರ್ಮದಂತೆ ತಲಾ 30 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯನ್ನು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿತ್ತು. ಆದರೆ ರಾಜಕೀಯ ಮೇಲಾಟದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರು ಒಪ್ಪಂದದಂತೆ ರಾಜಿನಾಮೆ ನೀಡಿ ಬೇರೆಯವರಿಗೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಜೆಡಿಎಸ್‌ನ ಲತಾ ರವಿಕುಮಾರ್ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಆದರೆ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರೂ ರಾಜೀನಾಮೆಗೆ ಮುಂದಾಗುತ್ತಿಲ್ಲ.

ಬಿಜೆಪಿಯ ಶಾರದಾ ನರಸಿಂಹಮೂರ್ತಿ ಜಿ.ಪಂ ಉಪಾಧ್ಯಕ್ಷರಾಗಿದ್ದಾರೆ. ಇವರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡರಿಗೆ ಆಪ್ತರು. ಅದೇ ಕಾರಣಕ್ಕೆ ರಾಜೀನಾಮೆ ನೀಡದೆ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬಜೆಪಿ ಪಕ್ಷವು ಅಧ್ಯಕ್ಷರು ಮಾತ್ರ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ. ಇದಕ್ಕೆ ಅಧ್ಯಕ್ಷರು ಸೊಪ್ಪು ಹಾಕುತ್ತಿಲ್ಲ.

ಗುಬ್ಬಿ ತಾಲೂಕಿನ ಬಿಜೆಪಿ ಜಿ.ಪಂ ಸದಸ್ಯೆ ಯಶೋದಮ್ಮ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ. ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಗೊಲ್ಲ ಸಮುದಾಯದ ಮುಖಂಡ ಸಣ್ಣಮುದ್ದಯ್ಯ ಗೊಲ್ಲರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಸಣ್ಣಮುದ್ದಯ್ಯ ಬಿಜೆಪಿ ಬಗ್ಗೆ ಒಲವುಳ್ಳವರು. ಮಾಜಿ ಸಚಿವ ಸೊಗಡು ಶಿವಣ್ಣಗೆ ಆಪ್ತರಾಗಿರುವವರು. ಹಾಗಾಗಿ ಸೊಗಡು ಶಿವಣ್ಣ ಅವರು ಸಣ್ಣಮುದ್ದಯ್ಯ ಮೂಲಕ ಈ ವಿಷಯ ತೇಲಿಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿ ಉರುಳಿಸಿದ ದಾಳಕ್ಕೆ ಅನಿವಾರ್ಯವಾಗಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಿಕ್ಕಿಕೊಳ್ಳುವಂತಾಗಿದೆ. ಗೊಲ್ಲರಿಗೆ ಜಿಪಂ ಅಧ್ಯಕ್ಷ ಹುದ್ದೆ ನೀಡುವುದನ್ನು ವಿರೋಧಿಸಿರುವವರಿಗೆ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತ ಸಿಗುವುದಿಲ್ಲ. ಹಾಗಾಗಿಯೇ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಎಲ್ಲರೂ ಸಹಿ ಹಾಕಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಲಾಗಿದೆ.

“ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇಬ್ಬರೂ ಒಟ್ಟಿಗೆ ರಾಜಿನಾಮೆ ನೀಡಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಬೇಕು. ಅದು ಬಿಟ್ಟು ಕೇವಲ ಅಧ್ಯಕ್ಷರ ಬದಲಾವಣೆಗೆ ಮಾತ್ರ ಆಗ್ರಹಿಸುವುದು ಸರಿಯಾದ ಕ್ರಮವಲ್ಲ. ಕೇವಲ ಶಿರಾ ಕ್ಷೇತ್ರದಲ್ಲಿ ಗೊಲ್ಲರ ಮತಗಳನ್ನು ಪಡೆಯುವ ಉದ್ದೇಶದಿಂದ ಬಿಜೆಪಿ ಇಂತಹ ಗೊಂದಲಗಳನ್ನು ಸೃಷ್ಟಿಮಾಡಿದೆ. ಇತರೆ ಪಕ್ಷದ ಸದಸ್ಯರು ಕೂಡ ಸಹಿ ಹಾಕಿದ್ದಾರೆ. ಇದು ರಾಜಕೀಯ, ಏನೂ ಮಾಡಲು ಆಗುವುದಿಲ್ಲ” ಎಂಬುದು ಹೆಸರು ಹೇಳಲು ಇಚ್ಚಿಸದ ಜೆಡಿಎಸ್ ಮುಖಂಡರೊಬ್ಬರ ಅಭಿಪ್ರಾಯ.

“ಗೊಲ್ಲರಹಟ್ಟಿ, ಬಂಜಾರ ತಾಂಡಾಗಳು, ಕುರುಬರಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿಲ್ಲ.  ಗೊಲ್ಲರಹಟ್ಟಿಗಳು ಇಂದಿಗೂ ಗುಡಿಸಲು ಮುಕ್ತವಾಗಿಲ್ಲ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ನರಳುತ್ತಿರುವ ಹಟ್ಟಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕೆಂದು ಕಾಯ್ದೆಯಾಗಿದ್ದರೂ ಅದನ್ನು ಅನುಷ್ಠಾನಗೊಳಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯ ಪಕ್ಷಗಳು ನಾಟಕ ಮಾಡುವುದನ್ನು ಬಿಡಬೇಕು” ಎಂದು ಗೊಲ್ಲ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರ ಬದಲಾವಣೆ ರಾಜಕೀಯ ಗಿಮಿಕ್. ಇನ್ನು ಎಂಟು ತಿಂಗಳು ಮಾತ್ರ ಅಧಿಕಾರವಧಿ ಇದೆ. ಈ ಅವಧಿಯಲ್ಲಿ ಅಧ್ಯಕ್ಷ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೆ ಯಾವ ಅಭಿವೃದ್ದಿ ಮಾಡಲು ಸಾಧ್ಯ. ಇದನ್ನು ಎಲ್ಲರೂ ಅರ್ಥಮಾಡಿಕೊಂಡರೆ ಒಳಿತು ಎಂದು ಪ್ರಜ್ಞಾವಂತರ ಸಮೂಹ ಹೇಳುತ್ತಿದೆ.


ಇದನ್ನೂ ಓದಿ: ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...