Homeಕರ್ನಾಟಕಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಮದಲೂರು ಕೆರೆಗೆ ಹೇಮಾವತಿ ನೀರು; ಬಿಜೆಪಿಗೆ ತಿರುಗುಬಾಣವಾದ ಹಿಂದಿನ ಪತ್ರ!

ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

- Advertisement -
- Advertisement -

ತುಮಕೂರು ಜಿಲ್ಲೆಯ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಬೇಕೆಂಬ ಬಿಜೆಪಿ ಮುಖಂಡರ ಮನವಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಲಾಗಿದೆ. 2010ರಲ್ಲಿ ಕೆರೆಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಟ್ಯಾಗ್ ಮಾಡಿರುವ ಜಾಲತಾಣಿಗರು ಬಿಜೆಪಿ ಮುಖಂಡರ ದ್ವಂದ್ವಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ.

ಶಿರಾದ ಕಳ್ಳಂಬೆಳ್ಳ ಕೆರೆಗೆ ಬ್ಯಾರೇಜ್ ನಿರ್ಮಿಸಿ ಮದಲೂರು ಹಾಗೂ ಇತರೆ 24 ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮತಿ ನೀಡಿತ್ತು. ಆದರೆ, ಇದರ ವಿರುದ್ದ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ, ಅಂದಿನ ಶಾಸಕರಾಗಿದ್ದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಮತ್ತು ಬಿ.ಸಿ.ನಾಗೇಶ್ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು.

ಅದಕ್ಕೆ ತದ್ವಿರುದ್ದವಾಗಿ ಇತ್ತೀಚೆಗಷ್ಟೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಶಿರಾದ ಬಿ.ಕೆ.ಮಂಜುನಾಥ ಎಸ್.ಆರ್.ಗೌಡ ಸೇರಿದಂತೆ ಹಲವರ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. “ಮದಲೂರು ಕೆರೆಗೆ ನೀರು ಹರಿಸುವುದರಿಂದ ದನಕರುಗಳಿಗೆ ಮತ್ತು ಜನರಿಗೆ ಶುದ್ದ ಕುಡಿಯುವ ನೀರು ದೊರೆಯುತ್ತದೆ. ಈ ಭಾಗದಲ್ಲಿ ನೀರಿಗೆ ತೊಂದರೆ ಇದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ” ಮನವಿ ಮಾಡಿದ್ದರು.

ಈ ಪತ್ರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಿರಾ ತಾಲೂಕಿನ ಹಲವರು ಮಾಜಿ ಸಚಿವ ಸೊಗಡು ಶಿವಣ್ಣ ಬರೆದಿದ್ದ ಪತ್ರವನ್ನು ಫೇಸ್ ಬುಕ್, ವಾಟ್ಸಪ್ ಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಪತ್ರದಲ್ಲಿ ಶಿರಾ ತಾಲೂಕು ಕೃಷ್ಣ ಕೊಳ್ಳದ ವ್ಯಾಪ್ತಿಗೆ ಬರುತ್ತದೆ. ಕಾವೇರಿ ಕೊಳ್ಳದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಆ ಯೋಜನೆಯನ್ನು ರದ್ದುಮಾಡಬೇಕೆಂಬ ವಿಚಾರವನ್ನು ಮುಂದಿಟ್ಟು ನೀರು ಹರಿಸಬಾರದೆಂದು ವಾದಿಸಲಾಗಿತ್ತು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

“ಇದು ಅಚ್ಚರಿ ಅಲ್ಲ ರಾಜಕಾರಣ..!! ಮದಲೂರು ಕೆರೆ ಕೃಷ್ಣ ಕೊಳ್ಳ ವ್ಯಾಪ್ತಿಗೆ ಬರುತ್ತದೆ. ಹೇಮಾವತಿ ಕಾವೇರಿ ಕಣಿವೆ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬೇಡ ಎಂದು ಪತ್ರ ಬರೆದ ಮಾನ್ಯ ಸುರೇಶ್ ಗೌಡರಿಗೆ, ‘ಸಿರಾ ಉಪಚುನಾವಣೆ ನೇತೃತ್ವ ನನಗೆ ಬರುತ್ತೆ ಅಂತ ಗೊತ್ತಿರಲಿಲ್ಲ ಅನ್ಸುತ್ತೆ. ಕದ ತೆಗೆಯಲು ಹೋಗಿ ಏನೊ ಸಿಗಾಕ್ಕಂಡಂಗೆ ಆಗೈತೆ ಸು ಗೌಡರ ಸ್ಥಿತಿ. ಇದಕ್ಕೆ ಸ್ಪಷ್ಟೀಕರಣ ಕೊಟ್ಟು ಸಿರಾ ಕಡೆ ಬನ್ನಿ ಸಾ…!!” ಎಂದು ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟಾ ಶಂಕರ್ ವ್ಯಂಗ್ಯವಾಡಿದ್ದಾರೆ.

ಅಂದು ಹೇಮಾವತಿ ನೀರನ್ನು ಶಿರಾ ತಾಲೂಕಿನ ಕೆರೆಗಳಿಗೆ ಹರಿಸುವುದನ್ನು ಬಿಜೆಪಿಯ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ, ಈಗಿನ ಶಾಸಕ ಬಿ.ಸಿ.ನಾಗೇಶ್ ವಿರೋಧಿಸಿದ್ದರು. ಕಳ್ಳಂಬೆಳ್ಳದ ಹಳ್ಳಕ್ಕೆ ಅನಗತ್ಯವಾಗಿ  ಬ್ಯಾರೇಜ್ ನಿರ್ಮಾಣ ಮಾಡಿದ್ದು ಆ ಮೂಲಕ ಶಿರಾ ತಾಲೂಕಿನ ಕೆರೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಯೋಜನೆ ಕೈಬಿಡುವಂತೆ ಆದೇಶಿಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದರು.

“ಹೇಮಾವತಿ ನಾಲಾ ವಲಯದ ಮೂಲ ಯೋಜನೆಯಲ್ಲಿ ತುಮಕೂರು ಶಾಖಾ ನಾಲೆ ಹಾಗೂ ನಾಗಮಂಗಲ ಶಾಖಾ ನಾಲೆಗಳ ಸುಮಾರು 1,60,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಸುವುದು ಮತ್ತು ತುಮಕೂರು, ತಿಪಟೂರು, ಅರಸೀಕೆರೆ ಪಟ್ಟಣಗಳಿಗೆ ಕುಡಿಯುವ ನೀರೊದಗಿಸುವುದು ಸೇರಿದಂತೆ ಸುಮಾರು 31 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಉಳಿದ ಯೋಜನೆಗಳನ್ನು ಪರಿಗಣಿಸಿಲ್ಲ” ಎಂಬ ಬಗ್ಗೆ  ತುಮಕೂರು ಬಿಜೆಪಿ ಮುಖಂಡರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು.

ಈ ಪತ್ರದ ಮೇಲೆ ಆರ್.ಡಿ.ಪಿ.ಆರ್ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ “ಕೂಡಲೇ ಕಡತ ಮಾಡಿಸಿ, ಅಂತಿಮ ತೀರ್ಮಾನಕ್ಕೆ ಮುಂಚೆ ಕಾಮಗಾರಿ ಮುಂದುವರಿಸಬಾರದು” ಎಂದು ಫುಟ್ ನೋಟ್ ಬರೆದಿದ್ದು, ಅದರ ಕೆಳಗೆ ಬಿಎಸ್.(ಬಿ.ಎಸ್.ಯಡಿಯೂರಪ್ಪ) ಎಂದು ಮುಖ್ಯಮಂತ್ರಿಗಳು ಕಿರು ಸಹಿ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ 2010ರ ಪತ್ರ ಬಿಡುಗಡೆ ಮಾಡಿರುವ ಜಾಲತಾಣಿಗರು, ಇದೇ ಬಿಜೆಪಿ ಮುಖಂಡರ ದ್ವಂದ್ವಕ್ಕೆ ಉದಾಹರಣಗೆ ಎಂದು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...